CHITRADURGA NEWS | 19 JULY 2026
ಚಿತ್ರದುರ್ಗ: ಜಿಲ್ಲಾ ಕೃಷಿಕ ಸಮಾಜ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕದ ವತಿಯಿಂದ ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ರಸಗೊಬ್ಬರ ನಿರ್ವಹಣೆ ಮತ್ತು ಪರ್ಯಾಯ ವ್ಯವಸ್ಥೆ ಕುರಿತ ಒಂದು ದಿನದ ತರಬೇತಿ ನಡೆಯಿತು.
ಇದನ್ನೂ ಓದಿ: ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ
ಪಶ್ಚಿಮ ಏಷಿಯಾದಲ್ಲಿ ದಿನೇ ದಿನೇ ಉಲ್ಬಣಿಸುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತ ದೇಶಕ್ಕೆ ಆಮದು ಆಗುತ್ತಿರುವ ರಸಗೊಬ್ಬರ ತಯಾರಿಕೆಗೆ ಬೇಕಾದ ಅಗತ್ಯ ಕಚ್ಚಾ ವಸ್ತುಗಳ ಸರಬರಾಜು ಏರುಪೇರಿನಿಂದಾಗಿ ರಸಗೊಬ್ಬರಗಳ ಪೂರೈಕೆಯಲ್ಲಿ ವ್ಯತ್ಯಾಸವಾಗುವುದರಿಂದ ರೈತ ಸಮುದಾಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್ ಮಹೇಶ್ವರಪ್ಪ ಉದ್ಘಾಟಿಸಿದರು.
ತಾಂತ್ರಿಕ ಸಮಾವೇಶದಲ್ಲಿ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ಹಿರಿಯ ವಿಜ್ಞಾನಿ ಡಾ.ಪರಶುರಾಮ್ ಚಂದ್ರವಂಶಿ ಅವರು ಮಣ್ಣಿನ ಆರೋಗ್ಯ ಕಾಪಾಡಲು ಸಮತೋಲನ ಗೊಬ್ಬರಗಳ ಮಾಹಿತಿ ನೀಡಿ, ಮಣ್ಣು ಪರೀಕ್ಷೆ ಕೈಗೊಂಡು ಫಲಿತಾಂಶದ ಆಧಾರದ ಮೇಲೆ ಪೋಷಕಾಂಶಗಳ ಬಳಕೆ ಮಾಡಲು ತಿಳಿಸಿದರು.
ತುಮಕೂರು ಮಲ್ಟಿಪ್ಲೆಕ್ಸ್ ಬಯೋನಿಟ್ ಘಟಕ ಮುಖ್ಯಸ್ಥರು ಹಾಗೂ ಸಂಪನ್ಯೂಲ ವ್ಯಕ್ತಿ ಎಸ್.ಕುಮಾರ್ ಅವರು ಮಣ್ಣಿನಲ್ಲಿ ಜೀವಿಸುವ ಸೂಕ್ಷ್ಮ ಜೀವಿಗಳು, ಅವುಗಳ ಮಹತ್ವದ ಬಗ್ಗೆ ತಿಳಿಸಿ ಪರ್ಯಾಯವಾಗಿ ಸಾರಜನಕ ಸ್ಥಿರೀಕರಿಸುವ ಜೀವಾಣುಗಳು, ರಂಜಕ ಕರಗಿಸುವ ಜೀವಾಣುಗಳು ಮತ್ತು ಪೊಟ್ಯಾಷ್ ಮೊಬಲೈಸಿಂಗ್ ಜೀವಾಣುಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಇದನ್ನೂ ಓದಿ: ಜುಲೈ 25 ರಂದು ಚಿತ್ರದುರ್ಗದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಸಭೆ | ಅಗತ್ಯ ಸಿದ್ದತೆ ಕೈಗೊಳ್ಳಲು ಡಿಸಿ ಸೂಚನೆ
ಇಪ್ಕೋ ಲಿಮಿಟೆಡ್ ಜಿಲ್ಲಾ ವ್ಯವಸ್ಥಾಪಕ ಸುಬ್ರಮಣ್ಯ ಅವರು ನ್ಯಾನೋ ರಸಗೊಬ್ಬರಗಳಾದ ಯೂರಿಯಾ, ಡಿ.ಎ.ಪಿ ಮತ್ತು ನ್ಯಾನೋ ಲಘುಕೋಶಕಾಂಶಗಳಾದ ನ್ಯಾನೋ ತಾಮ್ರ ಮತ್ತು ನ್ಯಾನೋ ಸತು ಬಗ್ಗೆ ತಿಳಿಸಿ, ಪರ್ಯಾಯವಾಗಿ ಬಳಸುವುದು ಸೂಕ್ತ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಎನ್.ಧರಣೇಶ್, ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಡಿ.ಟಿ.ಶಿವಾನಂದಪ್ಪ, ಕಾರ್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

