CHITRADURGA NEWS | 11 JUNE 2026
ಚಿತ್ರದುರ್ಗ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೃಷಿ ಇಲಾಖೆ ಚಿತ್ರದುರ್ಗ ವ್ಯಾಪ್ತಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ, ಐಕಾಂತಿಕ ಸಮುದಾಯ, ದಾವಣಗೆರೆ ಹಾಗೂ ಋಷಿ ಸಂಸ್ಕøತಿ ವಿದ್ಯಾ ಕೇಂದ್ರ, ರಂಗಾಪುರ ಇವರ ಸಹಯೋಗದಲ್ಲಿ ಚಿತ್ರದುರ್ಗ ಜಿಲ್ಲೆಯ ರೈತರಿಗೆ ಸಹಜ ಕೃಷಿಯ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಇದೇ ಜೂನ್ 14ರಂದು ಬೆಳಿಗ್ಗೆ 9.30ಕ್ಕೆ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಹೋಬಳಿಯ ರಂಗಾಪುರದ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ 12 ವರ್ಷ ಪೂರ್ಣ | ಚಿತ್ರದುರ್ಗದಲ್ಲಿ ವಿಶೇಷ ಪೂಜೆ
ತರಬೇತಿ ಕಾರ್ಯಕ್ರಮದಲ್ಲಿ ಐಕಾಂತಿಕ ಸಮುದಾಯದ ಪ್ರಗತಿಪರ ಸಹಜ ಕೃಷಿಕ ದಾವಣಗೆರೆಯ ಐಕಾಂತಿಕ ತೋಟದ ರಾಘವ, ಚಿಕ್ಕಜಾಜೂರಿನ ವೀರೇಶ್, ಮಲೇಬೆನ್ನೂರಿನ ಪಾಂಡುರಂಗ ಮತ್ತು ದಾವಣಗೆರೆಯ ಅಭಿಶೇಕ್ ಇವರು ಕೃಷಿ ಚರಿತ್ರೆ, ಸಹಜ ಕೃಷಿಯ ಪರಿಚಯ, ಸಹಜ ಜೀವನ, ಸಜೀವ ಮಣ್ಣು, ನೀರು ನಿರ್ವಹಣೆ ಮತ್ತು ಸಹಜ ಕೃಷಿಯಿಂದ ಅಂತರ್ಜಲ ಮಟ್ಟ ಹೆಚ್ಚಿಸುವ ಬಗೆ, ಬಹುಪಯೋಗಿ ಜೀವಂತ ಬೇಲಿ, ಕೃಷಿ ಅರಣ್ಯ ಹಾಗೂ ಕೃಷಿ ವಿನ್ಯಾಸ ವಿಚಾರಗಳ ಕುರಿತು ವಿಷಯಗಳನ್ನು ಮಂಡನೆ ಮಾಡಲಿದ್ದಾರೆ.
ಈಗಾಗಲೇ ಸಹಜ ಕೃಷಿಯಲ್ಲಿ ತೊಡಗಿರುವ ಮತ್ತು ತಮ್ಮ ತಾಕಿನಲ್ಲಿ ಸಹಜ ಕೃಷಿ ಪ್ರಾರಂಭಿಸಲು ಆಸಕ್ತಿ ಇರುವ ಚಿತ್ರದುರ್ಗ ಜಿಲ್ಲೆಯ ಉತ್ಸಾಹಿ ರೈತಭಾಂದವರು ದೂರವಾಣಿ ಸಂಖ್ಯೆ 8277931058 ಗೆ ಕರೆ ಮಾಡಿ ದಿನಾಂಕ:13-6-2026 ರೊಳಗೆ ನೋಂದಾಯಿಸಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಕೋರಿದ್ದಾರೆ.
ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು, ನೋಂದಾವಣಿ ಮಾಡಿಸದ ಮತ್ತು ನಿಗದಿತ ಸಮಯದ ನಂತರ ಬರುವ ರೈತರಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ. ಮೊದಲು ನೋಂದಾವಣಿ ಮಾಡಿಕೊಂಡ ಅರ್ಹ 60 ಜನ ಆಸಕ್ತ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು.
ಇದನ್ನೂ ಓದಿ: ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರಲು ಕೋರಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
