ಚಿತ್ರದುರ್ಗ ನ್ಯೂಸ್.ಕಾಂ: ರಾಜ್ಯದ ಹಲವು ಉಪವಿಭಾಗಗಳ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಈ ಆದೇಶದಲ್ಲಿ ಚಿತ್ರದುರ್ಗ ಜಿಲ್ಲೆಯ ಇಬ್ಬರು ಡಿಎಸ್ಪಿಗಳನ್ನು ಬೇರೆ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದು, ಜಿಲ್ಲೆಗೆ ಹೊಸ ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ಚಿತ್ರದುರ್ಗ ಉಪವಿಭಾಗದ ಡಿವೈಎಸ್ಪಿಯಾಗಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಎಚ್.ಆರ್.ಅನಿಲ್ಕುಮಾರ್ ಅವರನ್ನು ರಾಜ್ಯ ಸರ್ಕಾರದ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ | ಆರೋಪಿಗೆ 5 ವರ್ಷ ಜೈಲು
ತೆರವಾದ ಅನಿಲ್ಕುಮಾರ್ ಅವರ ಜಾಗಕ್ಕೆ (ಚಿತ್ರದುರ್ಗ ಡಿವೈಎಸ್ಪಿ) ಕರ್ನಾಟಕ ಲೋಕಾಯುಕ್ತ(ಎಸ್ಐಟಿ)ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಎನ್.ಗೋಪಾಲಕೃಷ್ಣ ಅವರನ್ನು ನಿಯೋಜಿಸಿದೆ.
ಇನ್ನೂ ಡಿಸಿಆರ್ಬಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಲೋಕೇಶ್ವರಪ್ಪ ಅವರನ್ನು ರೈಲ್ವೇ ಉಪವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಲಾಗಿದೆ.
ಒಟ್ಟಾರೆ ರಾಜ್ಯ ವಿವಿಧ ಉಪವಿಭಾಗಗಳು, ಪೊಲೀಸ್ ಇಲಾಖೆಯ ಬೇರೆ ಬೇರೆ ವಿಭಾಗಗಳು, ಲೋಕಾಯುಕ್ತ, ಸಿಐಡಿ, ರೈಲ್ವೇ ಮತ್ತಿತರೆ ವಲಯಗಳಿಂದ 40 ಡಿಎಸ್ಪಿಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
