
CHITRADURGA NEWS | 22 MAY 2024
ಚಿತ್ರದುರ್ಗ: ತಡರಾತ್ರಿಯಲ್ಲಿ ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ ಎತ್ತುಗಳನ್ನು ಪೊಲೀಸರು ಹಾಗೂ ಪೊಲೀಸರಿಗೆ ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ರಕ್ಷಿಸಿದ್ದಾರೆ.
ತಡರಾತ್ರಿಯಲ್ಲಿ ಕಂಟೈನರ್ ಲಾರಿಯಲ್ಲಿ ಸಾಗಿಸುತ್ತಿದ್ದ ಎತ್ತುಗಳ ಕುರಿತು ಮಾಹಿತಿ ಆಧರಿಸಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಲಾರಿಯನ್ನು ಹಿಡಿದು ನೋಡಿದಾಗ ಅದರಲ್ಲಿ ಎತ್ತುಗಳಿರುವುದು ಖಚಿತವಾಗಿದೆ.
ಇದನ್ನೂ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಮೂರೇ ದಿನದಲ್ಲಿ 1 ಟಿಎಂಸಿಗಿಂತ ಹೆಚ್ಚು ನೀರು ಸಂಗ್ರಹ
ಕಂಟೇನರ್ ಲಾರಿಯಲ್ಲಿ 14 ಎತ್ತುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪಿಸಿದ್ದಾರೆ.
ತಡರಾತ್ರಿ 1 ಗಂಟೆ ವೇಳೆ ಚಳ್ಳಕೆರೆ ಕಡೆಯಿಂದ ಬಂದು ದಾವಣಗೆರೆ ಕಡೆಗೆ ಬೈಪಾಸ್ನಲ್ಲಿ ಸಂಚರಿಸುತ್ತಿದ್ದ ಕಂಟೇನರನ್ನು ಚೇಸ್ ಮಾಡಿ ಹಿಡಿಯಲಾಗಿದೆ.
ಇದನ್ನೂ ಓದಿ: ಪಿಯುಸಿ ಸೈನ್ಸ್ ಕನ್ನಡದಲ್ಲೂ ಓದಬಹುದು | ಪ್ರತ್ಯೇಕ ವಿಭಾಗ ತೆರೆಯಲು ಡಿಸಿ ಸೂಚನೆ
ಈ ವೇಳೆ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪೊಲೀಸರು ಗ್ರಾಮಾಂತರ ಪೊಲೀಸ್ ಠಾಣೆ ಬಳಿಗೆ ಕಂಟೇನರ್ ತಂದು ನಿಲ್ಲಿಸಿಕೊಂಡಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
