By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    36 minutes ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    36 minutes ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    37 minutes ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    13 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    12 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    38 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    34 minutes ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    24 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
Reading: Murugha matha: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ | 150ನೇ ಜಯಂತ್ಯುತ್ಸವದ ವಿಶೇಷ ಲೇಖನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Murugha matha: ತ್ರಿವಿಧ ದಾಸೋಹಿ, ಪ್ರಸಾದ ನಿಲಯಗಳ ರೂವಾರಿ ಜಯದೇವ ಶ್ರೀ | 150ನೇ ಜಯಂತ್ಯುತ್ಸವದ ವಿಶೇಷ ಲೇಖನ

chitradurganews.com
Last updated: 27 August 2024 13:30
chitradurganews.com
2 years ago
Share
jagdguru jayadeva swamiji
ಜಗದ್ಗುರು ಶ್ರೀ ಜಯದೇವ ಸ್ವಾಮೀಜಿ
SHARE

CHITRADURGA NEWS | 27 AUGUST 2024

ಅವಿಚ್ಛಿನ್ನ ಪರಂಪರೆ ಹೊಂದಿರುವ ಚಿತ್ರದುರ್ಗ ಮುರುಘಾ ಮಠ (Murugha matha) ನಾಡು ಮಾತ್ರವಲ್ಲದೇ ದೇಶಾದ್ಯಂತ ತನ್ನ ಛಾಪು ಮೂಡಿಸಿದೆ.

ಶೂನ್ಯಪೀಠ ಪರಂಪರೆಯ ಮುರುಘಾ ಮಠಕ್ಕೆ ವಿರಕ್ತ ಪರಂಪರೆಯ ಗುರುಗಳು ನೇಮಕವಾಗಿ ಅಂದಾಜು 1640 ರಿಂದ ಈವರೆಗೆ ಮಠದ ಘನ ಪರಂಪರೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಾ ಮಠವನ್ನು ಮತ್ತೊಂದು ಎತ್ತರಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಿದ್ದಾರೆ.

ಹೀಗೆ ಸಾಗಿ ಬಂದ ಮುರುಘಾ ಮಠದಲ್ಲಿ ಜಗದ್ಗುರು ಶ್ರೀ ಜಯದೇವ ಸ್ವಾಮೀಜಿ ಅವರು ಪೀಠಾಧ್ಯಕ್ಷರಾಗಿದ್ದ ಅವಧಿ ಮಠದ ಇತಿಹಾಸದಲ್ಲಿ ಮತ್ತೊಂದು ಮೈಲುಗಲ್ಲು ಎನ್ನಬಹುದು.

ಇಂದು ಮುರುಘಾ ಮಠದ ತ್ರಿವಿಧ ದಾಸೋಹದ ರೂವಾರಿ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ 150ನೇ ಜಯಂತ್ಯುತ್ಸವ. ತನ್ನಿಮಿತ್ತ ಈ ಲೇಖನ.

ಜಯದೇವ ಶ್ರೀಗಳು, ಗದುಗಿನ ಹತ್ತಿರ ಬಿನ್ನಾಳವೆಂಬ ಊರಿನಲ್ಲಿ ಹುಟ್ಟಿದವರು. ಗದುಗಿನ ತೋಂಟದಾರ್ಯ ಮಠಕ್ಕೆ ಮರಿಯಾಗಿ ಅಲ್ಲೇ ತಮ್ಮ ಮಾಧ್ಯಮಿಕ ಶಾಲಾ ಶಿಕ್ಷಣ ಮುಗಿಸಿ ಮುಂದೆ ಕಾಶಿಗೆ ಹೋಗಿ ಅನೇಕ ವರ್ಷಗಳ ಕಾಲ ಅಲ್ಲಿ ವಿದ್ಯಾರ್ಜನೆ ಮಾಡಿ ಕರ್ನಾಟಕಕ್ಕೆ ಹಿಂತಿರುಗಿದರು. ಮುಂದೆ ಅವರು ಚಿತ್ರದುರ್ಗದ ಬೃಹನ್ಮಠದ ಪೀಠಾಧೀಶರಾದರು.

ಇದನ್ನೂ ಓದಿ: ಲಿಂಗೈಕ್ಯ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೋತ್ಸವ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಿಶೇಷ ಲೇಖನ

ಇಲ್ಲಿ ಒಂದು ಸಂಗತಿಯನ್ನು ವಿಶೇಷವಾಗಿ ನೆನಯಬೇಕಾಗಿದೆ. ಇವರು ಈ ಮಠದ ಪೀಠಾಧೀಶರಾದ ಮರು ವರ್ಷವೇ ಮೈಸೂರು ಸಂಸ್ಥಾನದ ಮಹಾರಾಜರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ಪಟ್ಟಾಭಿಷಿಕ್ತರಾದರು. ಈ ಇಬ್ಬರೂ ತಮ್ಮ ಕಾಲಾವಧಿಯಲ್ಲಿ ಅದ್ಭುತ ಸಾಧನೆಯನ್ನು ಮಾಡಿ ಜಾಜ್ವಲ್ಯಮಾನವಾಗಿ ಬೆಳಗಿದರು. ಹಾಗೆಂದೇ ‘ಕೃಷ್ಣರಾಜ ಒಡೆಯರು ರಾಜಋಷಿ ಎನಿಸಿಕೊಂಡರೆ ಜಯದೇವ ಸ್ವಾಮಿಗಳು ಋಷಿರಾಜರೆನಿಸಿಕೊಂಡರು’ ಎಂಬ ಮಾತಿದೆ.

ಧರ್ಮಪ್ರಚಾರಕ್ಕೆ ಅದಕ್ಕಿಂತ ಹೆಚ್ಚಾಗಿ ವಿದ್ಯಾಪ್ರಸಾರಕ್ಕೆ ಜಯದೇವ ಸ್ವಾಮಿಗಳು ವಿಶೇಷ ಗಮನಕೊಟ್ಟರು. ಹಳೇ ಮೈಸೂರು ಪ್ರಾಂತ ಅಲ್ಲದೇ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಪ್ರದೇಶದಲ್ಲೂ ಸಹ ಸ್ವಾಮಿಗಳು ಅನೇಕ ಪ್ರಜಾಹಿತ ಕಾರ್ಯಗಳನ್ನು ಕೈಗೊಂಡರು. ಅನೇಕ ಶಿಕ್ಷಣ ಸಂಸ್ಥೆಗಳು, ವಿದ್ಯಾಲಯಗಳು, ಪ್ರಸಾದನಿಲಯಗಳು, ವಾಚನಾಲಯಗಳು, ಗ್ರಂಥಾಲಯಗಳು, ಮಹಿಳಾ ಸಮಾಜ, ಆಸ್ಪತ್ರೆ, ಕ್ರೀಡಾಂಗಣ, ಹೀಗೆ ಹತ್ತು ಹಲವು ಸಮಾಜೋಪಯೋಗಿ ಕಾರ್ಯಗಳಿಗೆ ಸ್ವಾಮಿಗಳು ಉದಾರವಾಗಿ ಧನಸಹಾಯ ನೀಡಿದರು. ಯಾವುದೇ ಭೇದವಿಲ್ಲದೆ ಎಲ್ಲ ಜಾತಿಗಳ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾದರು.

jayadeva swamiji with nalvadi krishnarajendra odeyar
ಮೈಸೂರು ಸಂಸ್ಥಾನದ ಮಹಾರಾಜರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು – ಜಯದೇವ ಸ್ವಾಮಿಗಳು

ಶ್ರೀಗಳವರು ತಮ್ಮ ಸಂಚಾರದಲ್ಲಿ ಭಕ್ತರಿಂದ ಸಂಗ್ರಹವಾದ ಹಣವನ್ನು ತಮ್ಮ ಸ್ವಂತಕ್ಕೆ ಇಲ್ಲವೇ ಮಠದ ಪರಿವಾರದ ಜನರಿಗೆ ಅಥವಾ ಮಠದ ಪ್ರತಿμÉ್ಠಗೆ ಖರ್ಚು ಮಾಡದೆ, ಬಡ ವಿದ್ಯಾರ್ಥಿಗಳ ಪ್ರಸಾದ ನಿಲಯಗಳ ಸ್ಥಾಪನೆಗೆ, ಉನ್ನತ ಶಿಕ್ಷಣಕ್ಕೆ ವಿದೇಶಕ್ಕೆ ಹೋಗುವ ಪ್ರತಿಭಾವಂತರಿಗೆ ವಿನಿಯೋಗಿಸಿದರು.

ಇದನ್ನೂ ಓದಿ: ಚನ್ನಗಿರಿ ಶಿವಮೊಗ್ಗ ಮಾರುಕಟ್ಟೆಗಳ ಅಡಿಕೆ ರೇಟ್

ಹೀಗೆ ಅನೇಕ ಕಡೆಗಳಲ್ಲಿ ಆದ ವಿದ್ಯಾರ್ಥಿ ನಿಲಯಗಳು ಜಯದೇವ ವಿದ್ಯಾರ್ಥಿ ನಿಲಯಗಳೆಂದು ಹೆಸರಾಗಿವೆ. ಹೀಗೆ ಸ್ಥಾಪಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ಬ್ರಾಹ್ಮಣ, ಜೈನ, ಮರಾಠ, ಹಾಗು ಮುಸುಲ್ಮಾನ ವಿದ್ಯಾರ್ಥಿಗಳಿಗೂ ಅವಕಾಶ ಸಿಗುವಂತೆ ಮಾಡಿದ್ದರು. ಅವರು ಅನೇಕ ಮುಸ್ಲಿಂ ಸಂಘ ಸಂಸ್ಥೆಗಳಿಗೆ, ದಲಿತರ ಏಳಿಗೆಗೆ, ಉದಾರ ನೆರವು ನೀಡಿದರು.

ಅವರಿಂದ ನೆರವು ಪಡೆದ ಇಬ್ಬರು ಪ್ರಮುಖ ವ್ಯಕ್ತಿಗಳನ್ನು ಉದಾಹರಿಸುವುದಾದರೆ, ಒಬ್ಬರು ಮಾಜಿ ಮುಖ್ಯಮಂತ್ರಿಯೂ ಭಾರತ ರಾಷ್ಟ್ರೀಯ ಕಾಂಗ್ರೆಸ್ಸಿನ ಅಧ್ಯಕ್ಷರೂ ಆಗಿಹೋದ ಸಿದ್ಧವನಹಳ್ಳಿ ನಿಜಲಿಂಗಪ್ಪ ಹಾಗೂ ಮಲ ಹೊರುವ ಅನಿಷ್ಟ ಪದ್ಧತಿಯನ್ನು ತಪ್ಪಿಸಿದ ಕ್ರಾಂತಿಕಾರಿ ಸಚಿವರೆನಿಸಿದ ಬಿ.ಬಸವಲಿಂಗಪ್ಪ.

ಗಾಂಧೀಜಿ ಭೇಟಿಯಾಗಿದ್ದ ಜಯದೇವ ಶ್ರೀ:

1934ರಲ್ಲಿ ಗಾಂಧೀಜಿಯವರು ಉತ್ತರ ಕರ್ನಾಟಕಕ್ಕೆ ಬಂದಾಗ ಹಾವೇರಿಯಲ್ಲಿ ಜಯದೇವ ಸ್ವಾಮಿಗಳವರನ್ನು ಅವರು ಇದ್ದ ಮಠದಲ್ಲಿ ಭೇಟಿ ಮಾಡಿದ್ದು ಒಂದು ಅಪರೂಪದ ಘಟನೆ. ಆಗ ಅವರಿಬ್ಬರು ಅಸ್ಪೃಶ್ಯತೆ ನಿವಾರಣೆ, ರಾಷ್ಟ್ರದ ಸ್ವಾತಂತ್ರ್ಯ ಮತ್ತು ಅಭಿವೃದ್ಧಿ ಇಂತಹ ವಿಷಯಗಳನ್ನು ಕುರಿತು ಚರ್ಚಿಸಿದರು. ಆಗ ಸ್ವಾಮಿಗಳು ಸ್ವಯಂ ಖಾದಿಯ ಕಾವಿಯನ್ನು ಧರಿಸಲು ನಿಶ್ಚಯಿಸಿದರು; ಗಾಂಧೀಜಿಯವರು ಕೈಕೊಂಡ ಚಳವಳಿಯನ್ನು ಬೆಂಬಲಿಸಿದರು.

ಮೈಸೂರಿನ ರೋಗನಿದಾನ ವಿಭಾಗಕ್ಕೆ ಶ್ರೀಗಳ ಕೊಡುಗೆ:

ಮೈಸೂರು ಸಂಸ್ಥಾನದ ದೊರೆಗಳಾದ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರು ಮತ್ತು ದಿವಾನ್ ಮಿರ್ಜಾ ಇಸ್ಮಾಯಿಲ್‍ರವರು 1937ರಲ್ಲಿ ಶ್ರೀಗಳ ದರ್ಶನಕ್ಕೆ ಬೃಹನ್ಮಠಕ್ಕೆ ಬಂದಿದ್ದಾಗ ಮೈಸೂರಿನ ಆಸ್ಪತ್ರೆ ನಿರ್ಮಾಣದಲ್ಲಿ ರೋಗನಿದಾನ ವಿಭಾಗವೊಂದನ್ನು ಕಟ್ಟಿಸಲು ಸ್ವಾಮಿಗಳು ಉದಾರವಾಗಿ ಕಾಣಿಕೆ ನೀಡುವಂತೆ ಕೇಳಿದಾಗ ನಿಂತ ನಿಲವಿನಲ್ಲೇ ಮಠದಲ್ಲಿದ್ದ ನಲವತ್ತು ಸಾವಿರ ರೂಪಾಯಿಗಳನ್ನು ತಮ್ಮ ಕಾಣಿಕೆಯಾಗಿ ನೀಡಿದರು.

ಮೈಸೂರಿನ ಆಸ್ಪತ್ರೆಯ ಸಂಕೀರ್ಣದಲ್ಲಿ ಜಯದೇವ ಸ್ವಾಮಿಗಳ ಹೆಸರಿನಲ್ಲಿ ಆ ವಿಭಾಗವಿರುವುದನ್ನು ಈಗಲೂ ನೋಡಬಹುದು. ಜಯದೇವ ಸ್ವಾಮಿಗಳು ವಿದ್ಯಾದಾನಕ್ಕೆ ತುಂಬ ಪ್ರಾಶಸ್ತ್ಯ ಕೊಟ್ಟದ್ದು ಎಲ್ಲರೂ ಬಲ್ಲ ಸಂಗತಿ.

ಇದನ್ನೂ ಓದಿ: ದೇವಸ್ಥಾನದಲ್ಲಿ ಗಲಾಟೆ | ಪರಸ್ಪರ ದೂರು ದಾಖಲು

“ಕರ್ನಾಟಕ ಮಠಾಧೀಶ್ವರರು” ಎಂಬ ಪುಸ್ತಕದಲ್ಲಿ(1953) ಅದರ ಲೇಖಕರಾದ ಎಸ್.ಟಿ. ನೆಸ್ವಿ ಹೇಳುವ ಮಾತು ಹೀಗಿದೆ, “ಭರತ ಖಂಡದಲ್ಲಿ ವಿದ್ಯಾಪ್ರಸಾರಕ್ಕೂ ಅನಾಥರಿಗೂ ಇವರಷ್ಟು ಧನದ ಧಾರೆಯೆರೆದು ಸಹಾಯ ಮಾಡಿದವರು ಯಾವ ಮಠದ ಸ್ವಾಮಿಗಳೂ ಇಲ್ಲವೆಂದು ಧಾರಾಳವಾಗಿ ಹೇಳಬಹುದು…

ಅಲ್ಲದೇ ಅನೇಕ ಸಂಘ ಸಂಸ್ಥೆಗಳಿಗೂ ವಾಚನಾಲಯಗಳಿಗೂ, ವಿದ್ಯಾರ್ಥಿ ನಿಲಯಗಳಿಗೂ, ಜಾತಿ ಮತಗಳ ಬೇಧ ಭಾವವಿಲ್ಲದೇ ಹದಿನೆಂಟು ಲಕ್ಷ ರೂಪಾಯಿಗಳಿಗೂ ಮಿಗಿಲಾಗಿ ಸಹಾಯವನ್ನು ಮಾಡಿರುತ್ತಾರೆ, ಜಗದ್ಗುರು ಮಹಾಸ್ವಾಮಿಗಳವರು ಕರ್ನಾಟಕದಲ್ಲಿ ವೀರಶೈವ ಮತದಲ್ಲಿ ಜನ್ಮವೆತ್ತಿದರೂ ಸರ್ವ ದೇಶ, ಸರ್ವ ದರ್ಶನ, ಸರ್ವ ಜೀವಿಗಳಲ್ಲಿ ಇವರ ಪ್ರೇಮವು ಪಸರಿಸಿರುವುದು. ತಮ್ಮಿಂದಲೂ ಮತ್ತು ತಮ್ಮ ಮಠದಿಂದಲೂ ಯಾವತ್ತು ಜೀವಿಗಳಿಗೆ ಸುಖವೂ ಉಪಕಾರವೂ ಆಗಬೇಕೆಂಬುದು ಶ್ರೀಗಳವರ ಮನೀμÉ. ಶ್ರೀ ಜಗದ್ಗುರು ಮುರುಘರಾಜೇಂದ್ರ ಸ್ವಾಮಿಗಳೆಂದರೆ ಪ್ರೇಮದ ಮೂರ್ತಿ, ಸದ್ಗುಣಗಳ ಖಣಿ, ಧರ್ಮದ ದೇವತೆ, ಸೌಜನ್ಯದ ಆಗರ, ದೀನ ದರಿದ್ರರ ಕೈವಾರಿ” ಈ ಮಾತುಗಳು ಸ್ವಾಮಿಗಳ ವ್ಯಕ್ತಿತ್ವ ಮತ್ತು ಸಾಧನೆಗೆ ಹಿಡಿದ ಕನ್ನಡಿಯಾಗಿವೆ.

ಮುರುಘಾ ಮಠ
ಮುರುಘಾ ಮಠ

ಜಯದೇವ ಸ್ವಾಮಿಗಳು ಶಿಕ್ಷಣ ಪ್ರಸಾರದ ಕಾರ್ಯಕ್ಕಾಗಿ ವಿನಿಯೋಗಿಸಿದ ಹಣದ ಬೃಹತ್ ಪ್ರಮಾಣದ ಮೊತ್ತವನ್ನು ಕುರಿತ ಒಂದು ವಿವರ ಹೀಗಿದೆ: “ಮೈಸೂರಲ್ಲಿ ರೋಗ ಪರಿಹಾರ ಪರೀಕ್ಷೆಯ ಪ್ರಯೋಗಾಲಯ ಶಂಕುಸ್ಥಾಪನೆ ನೆರವೇರಿಸಿದ ಶ್ರೀ ಮಹಾರಾಜರು ತಮ್ಮ ಉಪನ್ಯಾಸದಲ್ಲಿ 18 ಲಕ್ಷ ರೂ.ಗಳನ್ನು ಬೃಹನ್ಮಠ ಮಹಾಸಂಸ್ಥಾನವು ಶಿಕ್ಷಣ ಪ್ರಸಾರಕ್ಕಾಗಿ ವಿನಿಯೋಗಿಸಿರುವುದನ್ನು ಪ್ರಶಂಸಿಸಿದರು”.

ಅಲ್ಲದೆ ಹಿಂದಿನ ಮುಖ್ಯಮಂತ್ರಿಗಳಾದ ಎಸ್.ನಿಜಲಿಂಗಪ್ಪನವರು 50 ಲಕ್ಷ ರೂಪಾಯಿಗಳಿಗೂ ಹೆಚ್ಚು ಹಣ ಲಿಂಗಾಯತ ಮತ್ತು ಲಿಂಗಾಯಿತೇತರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಬೃಹನ್ಮಠ ವಿನಿಯೋಗಿಸಿದೆ. ಈಗಿನ ಲೆಕ್ಕಾಚಾರದಲ್ಲಿ ಈ ಮೊತ್ತ 8-10 ಕೋಟಿಗಳμÁ್ಟಗಬಹುದು” ಎಂದಿದ್ದಾರೆ.

ದಾವಣಗೆರೆಯಲ್ಲಿ ಜಯದೇವ ಶ್ರೀ ಗದ್ದುಗೆ:

ಹೀಗೆ ಬಹುವಿಧದಲ್ಲಿ ಸ್ವಾಮಿಗಳು ಸಮಾಜದ ಏಳಿಗೆಗೆ ಸ್ಪಂದಿಸಿ ಸಹಾಯ ಮಾಡಿದ್ದಾರೆ. ಗಣ್ಯರ ಮತ್ತು ಜನಸಾಮಾನ್ಯರೆಲ್ಲರ ಪ್ರಶಂಸೆಯನ್ನು ಗಳಿಸಿದ್ದಾರೆ. 1949ರಲ್ಲಿ ಜಯವಿಭವ ಸ್ವಾಮಿಗಳವರನ್ನು ತಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದ ಸ್ವಾಮಿಗಳು 1956ರಲ್ಲಿ ಲಿಂಗೈಕ್ಯರಾದರು.

ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀಧಿಗೆ ನಿರ್ಧಾರ

ದಾವಣಗೆರೆ ನಗರದ ಶಿವಯೋಗಿ ಮಂದಿರ(ಶಿವಯೋಗಾಶ್ರಮ)ದ ಆವರಣದಲ್ಲಿ ಅವರ ಗದ್ದುಗೆಯನ್ನು ಮಾಡಲಾಗಿದೆ. ಜಯದೇವ ಸ್ವಾಮಿಗಳು ತಾವು ಭೇಟಿಕೊಟ್ಟ ಊರುಗಳಲ್ಲಿ ಮೊದಲಿಗೆ ವಿಚಾರಿಸುತ್ತಿದ್ದುದು ಅಲ್ಲಿ ವಾಚನಾಲಯ ಇದೆಯೇ ಎಂಬುದು ಮತ್ತು ವಿದ್ಯಾರ್ಥಿಗಳಿಗೆ ಪ್ರಸಾದ ನಿಲಯ ಇದೆಯೇ ಎನ್ನುವುದು. ಆಯಾ ಊರಿನ ಭಕ್ತಾದಿಗಳು ಕೊಟ್ಟ ಹಣವನ್ನು ಆಯಾ ಸ್ಥಳದ ಜವಾಬ್ದಾರಿಯುತ ಜನರ ಒಂದು ಟ್ರಸ್ಟ್ ಮಾಡಿ ಅವರಿಗೆ ಒಪ್ಪಿಸಿ ಅಲ್ಲೆ ಒಂದು ಪ್ರಸಾದ ನಿಲಯ ಮಾಡಲು ಮತ್ತು ನಡೆಸಲು ಅವರಿಗೆ ಜವಾಬ್ದಾರಿ ವಹಿಸುತ್ತಿದ್ದರು.

ಹೀಗೆ ರಾಜ್ಯದ ಒಳಗೆ ಮತ್ತು ಹೊರಗೆ ಅನೇಕ ಪ್ರಸಾದ ನಿಲಯಗಳು ಸ್ಥಾಪಿತವಾಗಲು ಅವರು ಕಾರಣರಾದರು. ಚಿತ್ರದುರ್ಗ, ದಾವಣಗೆರೆ, ತುಮಕೂರು, ಬೆಂಗಳೂರು, ನಿಪ್ಪಾಣಿ, ಸತಾರ, ಸಾಂಗ್ಲಿ, ಔದ್, ಮುಂತಾದ ಕಡೆಗಳಲ್ಲಿ ಅವರು ಪ್ರಾರಂಭಿಸಿದ ಪ್ರಸಾದನಿಲಯಗಳು ಅನೇಕ ವಿದ್ಯಾರ್ಥಿಗಳ ಜೀವನ ಬೆಳಗಲು ಅನುಕೂಲ ಉಂಟುಮಾಡಿದುವು. ಹೀಗೆ ತಿಪಟೂರು, ಧಾರವಾಡ, ಹೊಳವನಹಳ್ಳಿ, ಸೋಮಪುರ, ಬ್ಯಾಡಗಿ, ಕಾರವಾರ, ಕೊಲ್ಲಾಪುರ, ಕಾಶಿ ಮೊದಲಾದ ಕಡೆಗಳಲ್ಲಿ ಶಾಖಾಮಠಗಳಲ್ಲಿಯೇ ವಿದ್ಯಾರ್ಥಿಗಳಿಗೆ ಊಟ ವಸತಿಗಳಿಗೆ ಅನುಕೂಲವನ್ನು ಕಲ್ಪಿಸಿದರು.

ದಲಿತರ, ಭೋವಿಗಳ ವಿದ್ಯಾರ್ಥಿ ನಿಲಯಗಳಿಗೂ ದೇಣಿಗೆ:

ಇದಲ್ಲದೇ ದಲಿತರ, ಭೋವಿಗಳ ವಿದ್ಯಾರ್ಥಿ ನಿಲಯಗಳಿಗೂ ದೇಣಿಗೆಯನ್ನು ನೀಡಿದ್ದರು. ಹಾವೇರಿಯಲ್ಲಿ ದಲಿತ ವಿದ್ಯಾರ್ಥಿಗಳಿಗಾಗಿ ಶಾಲಾ ಕಟ್ಟಡವನ್ನು ನಿರ್ಮಾಣ ಮಾಡಿಸಿದರು. ಕೊಲ್ಲಾಪುರದಲ್ಲಿ ಜೈನ, ಮರಾಠ, ಮುಸ್ಲಿಂ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಿದರು.

ತದನಂತರದಲ್ಲಿ ಮತ್ತೆ ಹಲವೆಡೆ ಪ್ರಸಾದ ನಿಲಯಗಳು ಸ್ಥಾಪನೆಯಾಗಿ ನಡೆದುಕೊಂಡು ಬರುತ್ತಿವೆ. ಶಿರಸಂಗಿಯ ಲಿಂಗರಾಜರು, ಅರಟಾಳ ರುದ್ರಗೌಡರು, ವಾರದ ಮಲ್ಲಪ್ಪನವರು ಇವರೇ ಮುಂತಾದ ವೀರಶೈವ ಗಣ್ಯರು ಶಿಕ್ಷಣ ಕ್ಷೇತ್ರಕ್ಕೆ ನಾನಾ ವಿಧವಾಗಿ ಕೊಡುಗೆಗಳನ್ನೀಯಲು ಸ್ವಾಮಿಗಳವರ ಪ್ರೇರಣೆ ಕಾರಣವಾಯಿತು. ಹೀಗೆ ಸ್ವಾಮಿಗಳು ಅನೇಕರನ್ನು ಶಿಕ್ಷಣದತ್ತ ಮುಖ ಮಾಡುವಂತೆ ಮಾಡಿದರು. ‘ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯ’ ಎಂಬ ಬಸವಣ್ಣನವರ ವಾಣಿಯನ್ನು ನಿಜ ಮಾಡುವಂತೆ ಕ್ರಿಯಾಶೀಲವಾಗಿ ಬೆಳಗಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga UpdatesJagadguru Sri Jayadeva Murugharajendra SwamijiJayadeva Prasada NilayaKannada Latest NewsKarnataka NewsMahatma GandhijiMuruga Mathmurugha mathaMysore Sansthanಕನ್ನಡ ಲೇಟೆಸ್ಟ್ ನ್ಯೂಸ್ಕರ್ನಾಟಕ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಜಗದ್ಗುರು ಶ್ರೀ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಜಯದೇವ ಪ್ರಸಾದ ನಿಲಯಮಹಾತ್ಮಾ ಗಾಂಧೀಜಿಮುರುಘಾ ಮಠಮೈಸೂರು ಸಂಸ್ಥಾನ
Share This Article
Facebook Email Print
Previous Article Ambulence accident National Highway: ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಲಾರಿಗೆ ಡಿಕ್ಕಿ | ಸ್ಥಳದಲ್ಲೇ ಮಹಿಳೆ ಸಾವು | 3 ಜನ ಗಂಭೀರ
Next Article jobs in chitradurga news Village Assistant; ಗ್ರಾಮ ಸಹಾಯಕರ ಹುದ್ದೆ | ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up