CHITRADURGA NEWS | 24 FEBRUARY 2024
ಚಿತ್ರದುರ್ಗ: ಪತ್ನಿಯನ್ನು ಕೆಟ್ಟದೃಷ್ಟಿಯಿಂದ ನೋಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಸ್ನೇಹಿತ ಜತೆ ಸೇರಿ ಕೊಲೆ ಪತಿ ಕೊಲೆ ಮಾಡಿದ್ದ. ಇದೀಗ ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ₹ 1 ಲಕ್ಷ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮದ ಮಂಜುನಾಥ ಹಾಗೂ ಮಂಜಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾದವರು. ಇದೇ ಗ್ರಾಮದ ಸ್ವಾಮಿ ಎಂಬಾತ ಮಂಜುನಾಥ್ ಪತ್ನಿಯ ಮೇಲೆ ಕೆಟ್ಟ ದೃಷ್ಟಿ ಬೀರಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಕುಪಿತಗೊಂಡ ಮಂಜುನಾಥ್ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಗ್ರಾಮದ ಹೊರಭಾಗಕ್ಕೆ ಸ್ವಾಮಿಯನ್ನು ಕರೆದೊಯ್ದು 2022ರ ಜೂನ್ 8ರಂದು ಕೊಲೆ ಮಾಡಿದ್ದರು.
ಇದನ್ನೂ ಓದಿ: ಸಿರಿಗೆರೆಗೆ ಬಿ.ವೈ.ವಿಜಯೇಂದ್ರ, ಬಸವರಾಜ ಬೊಮ್ಮಾಯಿ ಆಗಮನ | ಸದ್ಧರ್ಮ ಸಿಂಹಾಸನಾರೋಹಣಕ್ಕೆ ಕ್ಷಣಗಣನೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಂಕರಪ್ಪ ನಿಂಬಣ್ಣ ಕಲ್ಕನಿ ಗುರುವಾರ ಆದೇಶ ಪ್ರಕಟಿಸಿದರು. ಪ್ರಕರಣದ ತನಿಖೆ ನಡೆಸಿದ್ದ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಬಾಲಚಂದ್ರ ನಾಯ್ಕ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಎನ್.ಎಸ್.ಮಲ್ಲಯ್ಯ ಸರ್ಕಾರದ ಪರ ವಾದ ಮಂಡಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
