
CHITRADURGA NEWS | 12 JUNE 2024
ಚಿತ್ರದುರ್ಗ: ನಟ ದರ್ಶನ್ ಮತ್ತು ಆತನ ಗ್ಯಾಂಗ್ನಿಂದ ಹತ್ಯೆಯಾದ ಚಿತ್ರದುರ್ಗ ರೇಣುಕ ಸ್ವಾಮಿಗೆ ಜನರು ಮರುಗಿದ್ದಾರೆ. ನಗರದಲ್ಲಿ ವಿವಿಧ ಸಂಘಟನೆಗಳು ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕ ಸ್ವಾಮಿ ಹತ್ಯೆಗೆ ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರ ಖಂಡನೆ ವ್ಯಕ್ತಪಡಿಸಿದ್ದಾರೆ. ‘ಶ್ರೀಮದ್ ವೀರಶೈವ ಐಟಿ–ಸೆಲ್’ ಫೇಸ್ಬುಕ್ ಪೇಜ್ನಲ್ಲಿ ಜಗದ್ಗುರುಗಳ ಸಂದೇಶ ಪೋಸ್ಟ್ ಮಾಡಲಾಗಿದೆ.
ಕ್ಲಿಕ್ ಮಾಡಿ ಓದಿ:ಕೊಲೆಪಾತಕಿ ದರ್ಶನ್ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ

‘ಸಾಮಾಜಿಕ ಜಾಲತಾಣದ ಅತಿಯಾದ ಬಳಕೆ ದುರಂತ ಅಂತ್ಯಕ್ಕೆ ಕಾರಣವಾಗುತ್ತಿದೆ. ಸಾರ್ವಜನಿಕ ಜೀವನದಲ್ಲಿರುವವರು ಸಮಾಜಕ್ಕೆ ಮಾದರಿಯಾಗುವಂತೆ ನಡೆದುಕೊಳ್ಳಬೇಕು. ಬದಲಾಗಿ ಮೃಗೀಯವಾಗಿ ನಡೆದುಕೊಂಡು ಕುಟುಂಬಕ್ಕೆ ಆಧಾರವಾಗಿದ್ದ ಯುವಕನ ಪ್ರಾಣವನ್ನೇ ಬಲಿತೆಗೆದುಕೊಂಡಿರುವುದು ಖಂಡನೀಯ. ರೇಣುಕ ಸ್ವಾಮಿ ಕುಟುಂಬದವರು ಉಜ್ಜಯಿನಿ ಪೀಠದ ಭಕ್ತರಾಗಿದ್ದು, ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ’ಎಂದು ಸಾಂತ್ವನ ಹೇಳಿದ್ದಾರೆ.
ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ | ಹಲವು ಸಂಘಟನೆಗಳು ಭಾಗಿ
ರೇಣುಕಸ್ವಾಮಿ ನಿವಾಸಕ್ಕೆ ಗಣ್ಯರು ಭೇಟಿ ನೀಡಿ ಸಾಂತ್ವನ ಹೇಳುತ್ತಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

