CHITRADURGA NEWS | 13 MARCH 2024
ಚಿತ್ರದುರ್ಗ: ಬಿಜೆಪಿ ಕಟ್ಟುವಾಗ ಅದರ ತಳಹದಿಯಲ್ಲಿ ನಾರಾಯಣಸ್ವಾಮಿಯ ಬೆವರಿನ ಹನಿಯಿದೆ. ಓಲೈಕೆ, ಪಕ್ಷಾಂತರ, ಹೊಂದಾಣಿಕೆ ರಾಜಕಾರಣದ ಬಗ್ಗೆ ಈ ಜಿಲ್ಲೆ, ರಾಜ್ಯ, ದೇಶದ ಯಾವುದೇ ಮಾಧ್ಯಮಗಳು ನಾರಾಯಣಸ್ವಾಮಿಯನ್ನು ಪ್ರಶ್ನೆ ಮಾಡಬಾರದು.
ನಗರದ ತರಾಸು ರಂಗಮಂದಿರದ ಬಳಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಸಂಸದ ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕೊಟ್ಟ ಖಡಕ್ ಉತ್ತರ ಇದು.

ಬಿಜೆಪಿಯಲ್ಲಿ ಟಿಕೆಟ್ ಕೈ ತಪ್ಪಿದ ಸಂಸದರು ಕಾಂಗ್ರೆಸ್ ಸೇರುತ್ತಾರೆ, ಅಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎನ್ನಲಾಗುತ್ತಿದೆ. ನೀವು ಕಾಂಗ್ರೆಸ್ ಸೇರುತ್ತೀರಾ ಎನ್ನುವ ಮಾಧ್ಯಮ ಪ್ರಶ್ನೆಗೆ ಗರಂ ಆದ ನಾರಾಯಣಸ್ವಾಮಿ, ಏನು ಕೇಳಿದ್ದು ನೀವು ಎಂದು ಪ್ರಶ್ನಿಸುತ್ತಲೇ ಯಾವ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕ್ಲಿಕ್ ಮಾಡಿ ಓದಿ: https://chitradurganews.com/former-mp-bn-chandrappa-is-upset/
ಇನ್ನೂ ಚಿತ್ರದುರ್ಗದ ಟಿಕೆಟ್ ಯಾವಾಗ ಘೋಷಣೆಯಾಗಲಿದೆ ಎನ್ನು ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿ ಟಿಕೆಟ್ ಈ ದೇಶದ ಪ್ರಧಾನಿಯನ್ನೂ ಒಳಗೊಂಡಂತೆ ಎಲ್ಲರಿಗೂ, ಸಂಸದೀಯ ಮಂಡಳಿ ತೀರ್ಮಾನ ಮಾಡುತ್ತದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 195ಕ್ಕೂ ಹೆಚ್ಚು ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಳಿದವರ ಆಯ್ಕೆಗೆ ಪ್ರತಿಯೊಬ್ಬ ಅಭ್ಯರ್ಥಿ, ಕಾರ್ಯಕರ್ತರು ಕುತೂಹಲದಿಂದ ಕಾಯುತ್ತಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
