
CHITRADURGA NEWS | 12 JANUARY 2024
ಚಿತ್ರದುರ್ಗ: ಶಿವಮೊಗ್ಗದಲ್ಲಿ ನಡೆದ ರಾಜ್ಯ ಸರ್ಕಾರದ ಯುವನಿಧಿ ಉದ್ಘಾಟನಾ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಕಾಲುವೇಹಳ್ಳಿ ಆರ್.ಪಾಲಯ್ಯ ಖಂಡಿಸಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಯುವನಿದಿ’ü ಉದ್ಘಾಟನಾ ಕಾರ್ಯಕ್ರಮಕ್ಕೆ ಬಸ್ಸಿನ ವ್ಯವಸ್ಥೆ ಮಾಡಿಕೊಂಡು ಪದವಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲಾಗಿದೆ, ಈ ಕ್ರಮವನ್ನು ಬಿಜೆಪಿ ಯುವಮೋರ್ಚಾ ಖಂಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದವಿ/ಡಿಪ್ಲಮೋ ಮುಗಿಸಿ 6 ತಿಂಗಳಾದ ನಂತರ ನಿರುದ್ಯೋಗಿ ಫಲಾನುಭವಿಗಳಿಗೆ ಈ ಯೋಜನೆ ಇದೆ. ಆದರೆ, ಪ್ರಸ್ತುತ ಪದವಿ ಕಾಲೇಜಿನ ವಿಧ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದರಿಂದ ಅವರನ್ನು ನಿರುದ್ಯೋಗಿಯನ್ನಾಗಿಸುವ ಚಿಂತನೆ ಇದೆಯೇ ಎನ್ನುವ ಅನುಮಾನ ಮೂಡುತ್ತದೆ ಎಂದು ಪಾಲಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಹೊಸದುರ್ಗಕ್ಕೆ ‘ಕ್ಲೀನ್ಸಿಟಿ’ ಗೌರವ
ಶೈಕ್ಷಣಿಕ ವರ್ಷದ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳನ್ನು ರಾಜಕೀಯ ಕಾರ್ಯಕ್ರಮಕ್ಕೆ ಉಪಯೋಗಿಸಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
‘ಕೋಮುಲ್ ನೇಮಕಾತಿ;ಯಲ್ಲಿ ಭ್ರμÁ್ಟಚಾರ ನೆಡೆದು ಮಾಲೂರು ಕಾಂಗ್ರೇಸ್ ಶಾಸಕ ನಂಜೇಗೌಡ ಪ್ರತಿ ನೇಮಕಾತಿಗೆ 30 ಲಕ್ಷ ಪಡೆದಿರುವುದು ಇ.ಡಿ ದಾಳಿಯಿಂದ ತಿಳಿದಿದೆ.
ಇದರೊಂದಿಗೆ ಬಡವರ ಮಕ್ಕಳಿಗೆ 2000 ರೂ. ಯುವನಿಧಿ ಆಸೆ ತೋರಿಸಿ ನೇಮಕಾತಿಯಲ್ಲಿ ಸಿರಿವಂತರಿಗೆ – ಭ್ರμÁ್ಟಚಾರಿಗಳಿಗೆ ಮಣೆ ಹಾಕುವುದು ಇದು ಕಾಂಗ್ರೇಸ್ ಸಂಸ್ಕøತಿಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
