By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    4 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    6 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    6 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    6 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    10 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    16 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    17 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ವಚನ ಕಮ್ಮಟ RANK ವಿಜೇತರಿಗೆ ಪ್ರಶಸ್ತಿ ಪ್ರದಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಚನ ಕಮ್ಮಟ RANK ವಿಜೇತರಿಗೆ ಪ್ರಶಸ್ತಿ ಪ್ರದಾನ

chitradurganews.com
Last updated: 1 October 2025 18:51
chitradurganews.com
7 months ago
Share
VACHANA KAMMATA
ವಚನ ಕಮ್ಮಟ ಪರೀಕ್ಷೆ ರ್ಯಾಂಕ್‌ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
SHARE

CHITRADURGA NEWS | 01 OCTOBER 2025

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ-2025ರ ಅಂಗವಾಗಿ ಏರ್ಪಡಿಸಿದ್ದ ವಚನ ಕಮ್ಮಟ ರ‍್ಯಾಂಕ್ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

2024-25 ನೇ ಸಾಲಿನ ರಾಜ್ಯಮಟ್ಟದವಚನ ಕಮ್ಮರ‍್ಯಾಂಕ್ ವಿಜೇತರ ವಿವರ

ಪ್ರಾಥಮಿಕ ಶಾಲಾ ವಿಭಾಗ

5ನೇ ಐದನೇ ತರಗತಿಯಲ್ಲಿ ಕಾವೇರಿ  ಮೂಲಿಮಠ  ಪ್ರಥಮ, ಸಾಗರ ಹೊನ್ನನಾಯಕ ದ್ವಿತೀಯ, ವರ್ಷ ಜೆ.ಆರ್‌ತೃತೀಯ ಸ್ಥಾನ.

6ನೇ ತರಗತಿ ವಿಭಾಗದಲ್ಲಿ ಬೃಂದಾ ಪಿ.ಆರ್ ಪ್ರಥಮ, ಸೃಷ್ಟಿ ಸಂಪತ್ತಕುಮಾರ ದ್ವಿತೀಯ, ನವೀನ್‌ಕುಮಾರ್ ತೃತೀಯಸ್ಥಾನ.

ಇದನ್ನೂ ಓದಿ: ಟೇಕ್ವೋಂಡಾ ಸ್ಪರ್ಧೆ | SJM ಪದವಿ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

7ನೇ ತರಗತಿ ವಿಭಾಗದಲ್ಲಿ  ಪ್ರತಿಕ್ಷ ಕೆ.ರಂಗಪುರ ಪ್ರಥಮ, ಕಲ್ಪನಾ ಶಿವಾಳಮ್ಮನವರ ದ್ವಿತೀಯ, ಶಶಿಕಲಾ ಬಿ.ಎಸ್ ತೃತೀಯಸ್ಥಾನ.

8ನೇ ತರಗತಿ ವಿಭಾಗದಲ್ಲಿ ದೀಪಿಕಾ.ಬಿ.ಪಾಟೀಲ್ ಪ್ರಥಮ, ದೀಪ.ಎಂ.ವೈ ದ್ವಿತೀಯ, ಎಲ್ಲಮ್ಮ ತೃತೀಯಸ್ಥಾನ ಪಡೆದರು.

ಪ್ರೌಢಶಾಲಾ ವಿಭಾಗ

9ನೇ ತರಗತಿ ವಿಭಾಗದಲ್ಲಿ ಅಂಕಿತ ನಾಗೇಂದ್ರ ಪ್ರಥಮ, ಶೋಭಾ ದ್ವಿತೀಯ, ಪ್ರವೀಣ್ ಹುಬ್ಬಳ್ಳಿ ತೃತೀಯ ಸ್ಥಾನ ಪಡೆದರು.

ಇದನ್ನೂ ಓದಿ: ಈ ಬೆಳಗಿನ ಅಭ್ಯಾಸಗಳು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತವೆ 

10ನೇ ತರಗತಿ ವಿಭಾಗದಲ್ಲಿ ಸಂಗೀತ.ಎನ್ ಪ್ರಥಮ, ಹಾಸಿನಿ.ಕೆ ದ್ವಿತೀಯ, ಸಿಂಧು.ಎಚ್ ತೃತೀಯಸ್ಥಾನ

ಪದವಿ ಪೂರ್ವ ವಿಭಾಗ

ಪ್ರಥಮ ಪಿಯುಸಿ (ಅರಿವು) ವಿಭಾಗದಲ್ಲಿ ಚೆನ್ನಮ್ಮ ಆರ್.ಕಟುವಾಣಿ ಪ್ರಥಮ, ಅಕ್ಷತಾ ಎಸ್. ಬಡಗನ್ನಪ್ಪನವರ, ದ್ವಿತೀಯ, ಶ್ವೇತ ನಿಂಗೋಜಿ ತೃತೀಯಸ್ಥಾನ ಪಡೆದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ

ದ್ವಿತೀಯ ಪಿಯುಸಿ (ಆಚಾರ) ವಿಭಾಗದಲ್ಲಿ ರಂಗಸ್ವಾಮಿ ಪ್ರಥಮ, ಪ್ರೇಮ್‌ಕುಮಾರ್ ಜೋಗಿ ದ್ವಿತೀಯ, ಅಚಿತಾ.ಎಸ್ ತೃತೀಯಸ್ಥಾನ ಪಡೆದರು.

ಪದವಿ ವಿಭಾಗದಲ್ಲಿ

ಪ್ರಥಮ ಪದವಿ ವಿಭಾಗದಲ್ಲಿ ಸಂಗೀತ ಹಳ್ಳೂರ ಪ್ರಥಮ, ಐಶ್ವರ್ಯ.ಎನ್ ದ್ವಿತೀಯ, ಪೂರ್ಣಿಮಾ ಎಂ.ಎಸ್ ತೃತೀಯ ಸ್ಥಾನ.

ಇದನ್ನೂ ಓದಿ: ಕಲ್ಲುಪ್ಪಿನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿಡುವುದರಿಂದ ಈ ಪ್ರಯೋಜನವನ್ನು ಪಡೆಯಬಹುದಂತೆ

ದ್ವಿತೀಯ ಪದವಿ ವಿಭಾಗದಲ್ಲಿ ಲಹರಿ ಡಿ.ಜಿ ಪ್ರಥಮ, ಸಾಕ್ಷಿ ದ್ವಿತೀಯ, ನಾಗಶ್ರೀ ಭಟ್ ತೃತೀಯ ಸ್ಥಾನ

ತೃತೀಯ ಪದವಿ ವಿಭಾಗದಲ್ಲಿ ಸಚಿನ್.ಎಲ್ ಬಿರಾದಾರ ಪ್ರಥಮ, ರಕ್ಷಿತಾ.ಪಿ ದ್ವಿತೀಯ, ರಚಿತಾ ಶಿವಕ್ಕನವರ್ ತೃತೀಯ ಸ್ಥಾನ ಪಡೆದರು.

ರ್ಯಾಂಕ್‌ ವಿಜೇತರಿಗೆ ಪ್ರಶಸ್ತಿ ವಿತರಿಸಿದ ಉತ್ತಂಗಿ ಮಹಾಸಂಸ್ಥಾನ ಮಠದ ಶ್ರೀ ಸೋಮಶೇಖರ ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಕೂಡ ಬಸವತತ್ವದ ಅಡಿಯಲ್ಲಿ ಬದುಕುವುದು ಉತ್ತಮ. ತಿಳಿಯಲಾದವರಿಗೆ ತಿಳಿಯುವಂತೆ ನಡೆಸಿಕೊಡುವುದು ವಚನದ  ಶಕ್ತಿಯಲ್ಲಿದೆ ಎಂದರು.

ಇದನ್ನೂ ಓದಿ: PHC ಗಳಲ್ಲಿ ವೈದ್ಯರು ಕಡ್ಡಾಯ ಹಾಜರಾತಿಗೆ ಸೂಚನೆ | ಜಿಪಂ ಸಿಇಒ ಆದೇಶ

ಜನಸಾಮಾನ್ಯರಲ್ಲಿ ಬಸವಣ್ಣನವರ ವಚನಗಳು ಒಂದು ರೀತಿಯಲ್ಲಿ ಮಂತ್ರಗಳಾಗಬೇಕು. ಸಾಮಾಜಿಕ ವ್ಯವಸ್ಥೆಯಲ್ಲಿ ಸತ್ಯಾಂಶವನ್ನು ನಾವು ಬೇಗ ಒಪ್ಪಿಕೊಳ್ಳುವುದಿಲ್ಲ. ಒಪ್ಪಿಕೊಳ್ಳುವಂತೆ ಮಾಡುವ ಶಕ್ತಿ ಈ ವಚನಗಳಲ್ಲಿವೆ. ಎಲ್ಲಾ ಸಮುದಾಯದವರೆಗೂ ಕೂಡ ಬದುಕಿನ ದಾರಿ ತೋರಿಸಬೇಕು. ಅದು ನಿಜವಾದ ಧರ್ಮ. ಸಿರಿ ಸಂಪತ್ತು ನಿಜವಾದ ಸಂಪತ್ತಲ್ಲ. ದೈಹಿಕ ಶ್ರಮದಿಂದ, ಸತ್ಯದಿಂದ, ಕರ್ಮದಿಂದ, ಕಾಯಕದಿಂದ ಸಂಪಾದಿಸುವುದು ನಿಜವಾದ ಸಂಪತ್ತು, ಸಂಸ್ಕಾರ ಎನ್ನಬಹುದು ಎಂದರು.

ಇದನ್ನೂ ಓದಿ:ನಾಗರಿಕ ಸೇವಾ ಹುದ್ದೆಗಳ ನೇಮಕಾತಿ | 3 ವರ್ಷ ವಯೋಮಿತಿ ಸಡಿಲಿಕೆ | ರಾಜ್ಯ ಸರ್ಕಾರ ಆದೇಶ 

ನಿಸ್ವಾರ್ಥ ಸಮಾಜವನ್ನು ಕಟ್ಟಬೇಕು ಅಂದರೆ, ನಮ್ಮಲ್ಲಿ ಸ್ವಾರ್ಥ ಎನ್ನುವ ವಿಚಾರದಿಂದ ಹೊರಬರಬೇಕು. ಪ್ರತಿಯೊಬ್ಬರನ್ನು, ಪ್ರತಿಯೊಂದು ಜಾತಿಯವರನ್ನು ಸಮಾನತೆಯಿಂದ ಕಾಣುವ ರೂಪ ನಮ್ಮದಾಗಬೇಕು. ನಮ್ಮ ಮಕ್ಕಳಿಗೆ ಬಸವಾದಿ ಶರಣರ ವಚನಗಳನ್ನು ತಿಳಿದುಕೊಳ್ಳುವಂತಹ ತಿಳಿಸಿ ಕೊಡುವಂತಹ ಕೆಲಸ ನಮ್ಮದಾಗಬೇಕು ಎಂದು ನುಡಿದರು.

ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡಿ, ವಚನಗಳನ್ನು ಸರಿಯಾಗಿ ಅರ್ಥೈಸಿಕೊಂಡಿದ್ದೆ ಆದರೆ ಯಾವ ವಿಶ್ವವಿದ್ಯಾಲಯದಲ್ಲಿ ಓದಿದರು ಅಂತಹ ವೈಚಾರಿಕತೆ ಬರಲು ಸಾಧ್ಯವಿಲ್ಲ. ಅಂತಹ ಶಕ್ತಿ ವಚನಗಳಿಗೆ ಇದೆ. ವಚನಗಳ ಶಕ್ತಿಯು ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲ ಕಾರಣವಾಗುತ್ತಿದೆ. ಹಾಗಾಗಿ ಶರಣರು ಈ ವಚನಗಳನ್ನು ಈ ನಾಡಿಗೆ ಈ ವಿಶ್ವಕ್ಕೆ ನೀಡಿದ್ದಾರೆ. ಅವುಗಳನ್ನು ಬಿತ್ತರಿಸುವ ಕೆಲಸ ನಮ್ಮದಾಗಬೇಕು. ಪ್ರತಿಯೊಬ್ಬ ವ್ಯಕ್ತಿಯ ಮನಸ್ಸು ವಿಕಸಿತಗೊಳಿಸುವ ಶಕ್ತಿ ಈ ವಚನ ಸಾಹಿತ್ಯದಲ್ಲಿದೆ. ಶರಣರ ಅನುಭಾವಗಳನ್ನು ಪ್ರತಿ ಕುಟುಂಬಗಳಲ್ಲಿ ಬಿತ್ತರಿಸುವ ಕೆಲಸ ನಮ್ಮದಾಗಬೇಕು ಎಂದು ನುಡಿದರು

ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್‌ 29 | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್‌

ರಾವಂದೂರು ವಿರಕ್ತ ಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ ಮಾತನಾಡಿ, ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ತಂದೆ ತಾಯಿಗಳು ತಮ್ಮ ಮಕ್ಕಳಿಗೆ ಸಂಸ್ಕಾರಗಳನ್ನು ಕಲಿಸಬೇಕು. ಬಸವಾದಿ ಶರಣರ ವಚನಗಳನ್ನು ಕಲಿಸುವಂತಹ ಗುಣ ನಮ್ಮದಾಗಬೇಕು. ನಮ್ಮ ಜೀವನದಲ್ಲಿ ತಾರ್ಕಿಕಜ್ಞಾನ ಎಷ್ಟು ಮುಖ್ಯವೋ ಆಧ್ಯಾತ್ಮಿಕ ಜ್ಞಾನವು ಕೂಡ ಅಷ್ಟೇ ಮುಖ್ಯ. ಅತಿ ಆಸೆ ಬಿಟ್ಟು ಸಮಾಜದ ಪ್ರಗತಿಗೆ ಕಾರಣವಾಗಬೇಕು. ನಮ್ಮ ಮಕ್ಕಳಲ್ಲಿ ಭಾವನಾತ್ಮಕ ಸಂಬಧಗಳನ್ನು ಬೆಳೆಸಬೇಕು ಎಂದರು.

ಅಶೋಕ್ ಬಸಪ್ಪ ಬರಗುಂಡಿ ಮಾತನಾಡುತ್ತಾ, ಈ ನಾಡಿಗೆ ಭೇದಭಾವವಿಲ್ಲದ ಸಮಾಜವನ್ನು ತಂದವರು ಬಸವಣ್ಣ. ಬಸವತತ್ವ ನೆಲೆಯನ್ನು ಗಟ್ಟಿಗೊಳಿಸಿ ನಾಡಿನ ಸರ್ವಜನಾಂಗದವರನ್ನು ಸಮಾನರಾಗಿ ಕಾಣುತ್ತಾ ಬಂದಿವುರುದನ್ನು ಈ ಮುರುಘಾಮಠದಲ್ಲಿ ಕಾಣಬಹುದು. ವಿಚಾರಧಾರೆಗಳು ಸಣ್ಣ ಮಕ್ಕಳಿಂದಲೂ ವಚನಗಳ ಮುಖಾಂತರ ಬಿತ್ತರಿಸುವ ಕೆಲಸ ಆಗಬೇಕು. ಒಳ್ಳೆಯ ಭಾವನೆಗಳನ್ನು ಬೆಳೆಸುವಂತಹ ಗುಣ ಎಲ್ಲರದ್ದಾಗಬೇಕು ಎಂದರು.

ಇದನ್ನೂ ಓದಿ: ನಿಂಬೆ ಹಣ್ಣು ಅಸ್ತಮಾ ರೋಗಿಗಳಿಗೆ ಪ್ರಯೋಜನಕಾರಿಯೇ?

ಶ್ರೀಮಠವು ಯಾವುದೇ ಫಲಾಪೇಕ್ಷೆ ಹೊಂದದೆ ಈ ವಚನ ಪರೀಕ್ಷೆಗಳನ್ನು ನಡೆಸುತ್ತಾ ಬಂದಿದೆ. ಇದರಿಂದ ವಿದ್ಯಾರ್ಥಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿಸುವ ಸೃಷ್ಟಿಸುವ ಕೆಲಸ ನಮ್ಮದಾಗಬೇಕು. ಮುಂದಿನ ಪೀಳಿಗೆಯವರಿಗೂ ಸಹ ಬಸವಾದಿ ಶರಣರ ವಚನಗಳನ್ನು ಬಿತ್ತರಿಸುವ ಕಾರ್ಯ ನಮ್ಮದಾಗಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಗುರುಮಠಕಲ್ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮೀಜಿ, ಸಿದ್ಧರಾಮಣ್ಣ ನಡಕಟ್ಟಿ, ಸಿ ಎಂ ಚಂದ್ರಪ್ಪ, ವಚನಕಮ್ಮಟ ನಿರ್ದೇಶಕರಾದ ವೀರಭದ್ರಪ್ಪ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaMurugha MuttRankVachana kammataಚಿತ್ರದುರ್ಗಬಹುಮಾನರ್ಯಾಂಕ್‌ವಚನ ಕಮ್ಮಟ ಪರೀಕ್ಷೆಶರಣ ಸಂಸ್ಕೃತಿ
Share This Article
Facebook Email Print
Previous Article ಕಲ್ಲುಪ್ಪಿನ ನೀರಿನಲ್ಲಿ ನಿಮ್ಮ ಪಾದಗಳನ್ನು ನೆನೆಸಿಡುವುದರಿಂದ ಈ ಪ್ರಯೋಜನವನ್ನು ಪಡೆಯಬಹುದಂತೆ
Next Article Dr. sowmya vasishta ಚಿತ್ರದುರ್ಗ ಧೈರ್ಯದ ಸಂಕೇತ ಒನಕೆ ಓಬವ್ವ | ಮನೋವೈದ್ಯೆ ಡಾ.ಸೌಜನ್ಯ ವಸಿಷ್ಠ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up