By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    7 minutes ago
    ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
    ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
    7 hours ago
    ಶಿವಸಂಚಾರ ನಾಟಕೋತ್ಸವ
    ಶಿವಸಂಚಾರ ನಾಟಕೋತ್ಸವ | 3 ನಾಟಕ ಪ್ರದರ್ಶನ | ಮಾದಾರ ಚನ್ನಯ್ಯ ಶ್ರೀ ಭಾಗೀ 
    17 hours ago
    ಡಾ.ಬಿ.ಆರ್.ಅಂಬೇಡ್ಕರ್
    ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ
    20 hours ago
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ
    ಜಿಲ್ಲಾ ಖಜಾನೆ ಇಲಾಖೆ ವಾರ್ಷಿಕ ಕ್ರೀಡೋತ್ಸವಕ್ಕೆ ಚಾಲನೆ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    7 minutes ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    19 hours ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    3 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    19 hours ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    6 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    7 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    1 day ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    1 day ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    2 days ago
Reading: ಮುರುಘಾಮಠದಲ್ಲಿ ಕಾರ್ತೀಕ ಮಾಸದ ಅಂಗವಾಗಿ ವಚನ ಕಾರ್ತೀಕ | ಇಂದಿನಿಂದ ಆರಂಭ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾಮಠದಲ್ಲಿ ಕಾರ್ತೀಕ ಮಾಸದ ಅಂಗವಾಗಿ ವಚನ ಕಾರ್ತೀಕ | ಇಂದಿನಿಂದ ಆರಂಭ

News Desk Chitradurga News
Last updated: 24 October 2025 19:21
News Desk Chitradurga News
6 months ago
Share
Vachana Karthika as part of Karthika month at Murugamath
ಮುರುಘಾಮಠದಲ್ಲಿ ಕಾರ್ತೀಕ ಮಾಸದ ಅಂಗವಾಗಿ ವಚನ ಕಾರ್ತೀಕ
SHARE

CHITRADURGA NEWS | 24 OCTOBER 2025

ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಕಾರ್ತೀಕ ಮಾಸದ ಅಂಗವಾಗಿ 33 ದಿನಗಳ ಕಾಲ ಆಯೋಜಿಸಿರುವ ವಚನ ಕಾರ್ತೀಕ ಎಂಬ ಅರ್ಥಪೂರ್ಣ ಕಾರ್ಯಕ್ರಮವು ಶ್ರೀಮಠದ ಮುರಿಗೆಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿ ಆರಂಭಗೊಂಡಿತು.

ಇದನ್ನೂ ಓದಿ: ವಿವಿಧ ಯೋಜನೆ | ಕ್ರಿಶ್ಚಿಯನ್ ಸಮುದಾಯದಿಂದ ಅರ್ಜಿ ಅಹ್ವಾನ

ಮುಂಚೂಣಿಯಲ್ಲಿಲ್ಲದ ಸುಮಾರು 66 ವಚನಕಾರರ ವಚನಗಳು, ಅವರ ವ್ಯಕ್ತಿತ್ವ ಕುರಿತಾದ ಪಥದರ್ಶನ ಕಾರ್ಯಕ್ರಮದಲ್ಲಿ ಮೊದಲದಿನ ಶಿವಶರಣರಾದ ಹೊಡೆಹುಲ್ಲ ಬಂಕಣ್ಣ ಹಾಗೂ ಗೋರಕ್ಷ/ಗೋರಖನಾಥರ ಬಗೆಗೆ ವಿಷಯಾವಲೋಕನ ನಡೆಯಿತು. 

ಆರಂಭಕ್ಕೆ ಆ ಶರಣರ ವಚನಪಠಣವನ್ನು ಶ್ರೀಮಠದ ವಿದ್ಯಾರ್ಥಿ ನಂದನ್ ಹಾಗೂ ಭುವನ್ ವಾಚಿಸಿದರು. ಈ ಎರಡು ವಚನಗಳನ್ನು ಜಮುರಾ ಕಲಾವಿದ ಉಮೇಶ್ ಪತ್ತಾರ್ ವಚನ ಗಾಯನ ನಡೆಸಿಕೊಟ್ಟರು.

ಹೊಡೆಹುಲ್ಲ ಬಂಕಣ್ಣ ಅವರ ಬಗ್ಗೆ ಮಾತನಾಡಿದ ಕಡ್ಲೆಗುದ್ದು ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಡಾ.ಮಹೇಶ್, ಬಂಕಣ್ಣ ಅವರು 12ನೇ ಶತಮಾನದಲ್ಲಿ ಮಹಾಮನೆ ಮತ್ತು ಅನುಭವ ಮಂಟಪದಲ್ಲಿ ಹುಲ್ಲು ಮಾರುವ ಕಾಯಕ ಮಾಡಿಕೊಂಡಿದ್ದು ಚರ್ಚೆ ಸಂವಾದ ಗೋಷ್ಠಿಯಲ್ಲಿ ಭಾಗವಹಿಸುತ್ತಿದ್ದ ಇವರು ಜಗನ್ನಾಥ ಸಾಕ್ಷಿಯಾಗಿ ಕುಂಭೇಶ್ವರಲಿಂಗ ಅಂಕಿತದ 10 ವಚನಗಳು ಲಭ್ಯವಾಗಿವೆ.

ಇದನ್ನೂ ಓದಿ: ಸಮುದಾಯ ಭವನ ಎಲ್ಲರಿಗೂ ಉಪಯೋಗವಾಗಲಿ | ಶಾಸಕ ಎಂ.ಚಂದ್ರಪ್ಪ 

ಇವರ ವಚನಗಳು ಹೆಚ್ಚಾಗಿ ತತ್ವ ನಿರೂಪಣಾ ಶೈಲಿಯಲ್ಲಿದ್ದು ನಾವು ಯಾವುದೇ ಕೆಲಸವನ್ನು ಮಾಡುವುದಿದ್ದರೆ ನಿಷ್ಠೆ, ಭಾವಶುದ್ಧಿ, ದೈವಸೇವೆಯೆಂದು ಮಾಡಿ ಫಲವನ್ನು ಪ್ರಸಾದವೆಂದು ಕಾಣುವವರೇ ನಿಜವಾದ ಶರಣನ ಸೇವೆ, ಕಾಯಕವೇ ಕಳಸ, ಕಾಯಕವೇ ಪೂಜೆ ಎಂದು ಪರಿಭಾವಿಸಿದ್ದರು ಬಂಕಣ್ಣ ಎಂದು ಹೇಳಿದರು.

ನಗರದ ಅಮೃತ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿ.ಸಜ್ಜನ್ ಅವರು ಗೋರಕ್ಷ/ಗೋರಖನಾಥ ಶರಣರ ಬಗ್ಗೆ ಮಾತನಾಡಿ, ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥಲಿಂಗ ಅಂಕಿತದಲ್ಲಿ 10 ವಚನಗಳು ಲಭ್ಯವಿದ್ದು, ಅಲ್ಲಮಪ್ರಭುಗಳ ಸಂದರ್ಶನಕ್ಕಿಂತ ಮುಂಚೆ ಯೋಗಸಿದ್ಧಿಯಿಂದ ದೇಹದ ಮೇಲೆ ಪ್ರಭುತ್ವ ಹೊಂದಿದ್ದರೆಂದು, ಇವರು ಶ್ರೀಶೈಲದಲ್ಲಿದ್ದ ಬಗ್ಗೆ ಐತಿಹ್ಯವಿದೆ. ಅಲ್ಲಮರ ಸಂಗದಿಂದ ಅನುಭವ ಮಂಟಪಕ್ಕೆ ತೆರಳಿ ಶಿವಯೋಗಾನುಸಂಧಾನದಿಂದ ಆದ ಅನುಭವ ವಚನಗಳಲ್ಲಿ ಉಲ್ಲೇಖವಾಗಿದೆ ಎಂದ ಅವರು ಒಂದು ವಚನಕ್ಕೆ ಅರ್ಥಸಹಿತ ವಿವರಣೆ ನೀಡಿದರು. 

ಮನುಷ್ಯ ಬಾಹ್ಯ ಜೀವನಕ್ಕೆ ಅಥವಾ ರೂಪಕ್ಕೆ ಅಂಟಿಕೊಳ್ಳದೆ ಮನಸ್ಸಿನ ಶುದ್ಧತೆ, ನೈಜತೆ, ಸತ್ಯಭಾವ ಮತ್ತು ಸೇವಾಭಾವ ಬೆಳೆಸಿಕೊಂಡರೆ ಅದು ನಾವು ಗುರುವಿಗೆ ಕೊಡುವ ನಿಜಗೌರವ. ಅದರಂತೆ ಗೋರಕ್ಷನಾಥರ ತತ್ವ ಪ್ರತಿಪಾದನೆಯ ಮೂಲದ್ರವ್ಯ ಅರಿವೇ ದೇವರು, ಅದುವೇ ಪೂಜೆ. ಅರಿವೇ ಸೇವೆ ಎನ್ನುವುದು ದಿಟವೆಂದು ಪ್ರತಿಪಾದಿಸಿದ್ದಾರೆಂದು ವಿಶ್ಲೇಷಿಸಿದರು.

ಇದನ್ನೂ ಓದಿ: ನಗರಸಭೆ ಸದಸ್ಯರ ಪ್ರವಾಸ | ಅಕ್ರಮ ಮತ್ತು ಮೋಜು ಮಸ್ತಿಗಾಗಿ | ಮಹೇಶ್ ಸಿ ನಗರಂಗೆರೆ

ಸಾನ್ನಿಧ್ಯ ವಹಿಸಿದ್ದ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ ಮಾತನಾಡಿ, ಶ್ರೀಮಠವು ಶೂನ್ಯಪೀಠ ಪರಂಪರೆಯ ಮಠವಾಗಿದ್ದು, ಶರಣಸಂಸ್ಕೃತಿ ಮತ್ತು ಬಸವತತ್ವ ಪ್ರತಿಪಾದನೆಯ ಮೇಲೆ ಅನುಷ್ಠಾನ ಅದರ ಪ್ರಸಾರ ಹಾಗೂ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. 

ನಮಗೆ ಬಸವಣ್ಣ, ಅಲ್ಲಮರು, ಅಕ್ಕಮಹಾದೇವಿ, ಸಿದ್ಧರಾಮ ಹೀಗೆ ಮುಂಚೂಣಿಯಲ್ಲಿರುವ ಶರಣರಷ್ಟೇ ಗೊತ್ತು. ನೂರಾರು ಅಲಕ್ಷಿತ ಶೋಷಿತ ಸಮುದಾಯಗಳನ್ನು ಪ್ರತಿನಿಧಿಸುವ ವಚನಕಾರರು ಗೊತ್ತಿಲ್ಲ. ಅವರ ವ್ಯಕ್ತಿತ್ವ ಸಾಧನೆ ಮತ್ತು ಅವರ ರಚನೆಯ ವಚನಗಳನ್ನು ಅರ್ಥೈಸುವ ಕೆಲಸ ಆಗಬೇಕಿದೆ ಎಂದರು.

ಸಮ್ಮುಖ ವಹಿಸಿದ್ದ ಶ್ರೀಮಠದ ಬಸವಮುರುಘೇಂದ್ರ ಸ್ವಾಮೀಜಿ ಅವರು ಮಾತನಾಡುತ್ತ, ಇಬ್ಬರು ವಚನಕಾರರ ಪ್ರಮುಖ ಅಂಶಗಳನ್ನು ಉದಾಹರಣೆ ಸಹಿತ ಜೀವನದ ಪ್ರಮುಖ ಘಟ್ಟಗಳನ್ನು ಉದಾಹರಿಸಿದರು.

ಕಾರ್ಯಕ್ರಮವು ನಿರಂತರವಾಗಿ 33 ದಿನಗಳ ಕಾಲ ಸರಿಯಾದ ನಿಗದಿತ ವೇಳೆಗೆ ಆರಂಭವಾಗಲಿದ್ದು, ಇಲ್ಲಿ ವಿಚಾರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗಿದ್ದು, ಸಾರ್ವಜನಿಕರು ನಮ್ಮ ವಿದ್ಯಾಪೀಠದ ಶಾಲಾ ಕಾಲೇಜುಗಳ ಸಿಬ್ಬಂದಿಯವರು ಅಮೂಲ್ಯ ಚಿಂತನ ವಿಷಯಗಳನ್ನು ಬಂದು ಕೇಳಿ ಮನನ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 24| ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಸಮಾರಂಭದ ವೇದಿಕೆಯಲ್ಲಿ ಯೋಗವನ ಬೆಟ್ಟದ ಬೆಂಗಳೂರು ಶಾಖೆಯ ಶಾಮಣ್ಣ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಆರತಿ ಶಿವಮೂರ್ತಿ, ಜಾಗತಿಕ ಲಿಂಗಾಯತ ಮಹಾಸಭಾದ ಬಸವರಾಜಕಟ್ಟಿ, ಡಾ.ಪಿ.ಬಿ. ಭರತ್, ಹಿರಿಯ ನಾಗರಿಕರಾದ ಪ್ರೊ.ಬಿ.ಹೆಚ್. ಹರೀಶ್, ರುದ್ರಮುನಿ, ಆನಂದ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಎಸ್.ಜೆ.ಎಂ. ಶಾಲಾಕಾಲೇಜುಗಳ ನೌಕರರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 

ಕರ್ತೃಗದ್ದುಗೆಯಲ್ಲಿ ಗುಮಾಸ್ತ ಕಾಲೋನಿಯ ಟಿ.ನಿರಂಜನ ಮತ್ತು ಮಕ್ಕಳು ಈ ದಿನದ ವಚನ ಕಾರ್ತೀಕ ಪೂಜೆ ನೆರವೇರಿಸಿದರು. 

ಸಮಾರಂಭದ ನಿರ್ವಹಣೆ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ನಡೆಯಿತು.

ಸಮಾರಂಭದ ಆರಂಭಕ್ಕೆ ಜಮುರಾ ಕಲಾವಿದ ಉಮೇಶ್ ಪತ್ತಾರ್ ವಚನ ಪ್ರಾರ್ಥನೆ ಮಾಡಿದರು. ಡಾ. ಚೇತನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಆರ್.ಎಸ್. ಜಯದೇವ್ ಮಾಡಿದರೆ, ಎಂ.ಪಲ್ಲವಿ ಶರಣುಸಮರ್ಪಣೆ ಮಾಡಿದರು.

ಇದನ್ನೂ ಓದಿ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ | ನಾನು ಸಹಾ ಆಕಾಂಕ್ಷಿ | ವಸಂತಕುಮಾರ್

2ನೇ ದಿನದ ಕಾರ್ಯಕ್ರಮ : ಶಿವಶರಣರಾದ ಘಟ್ಟಿವಾಳಯ್ಯ ಮತ್ತು ಹೆಂಡದ ಮಾರಯ್ಯನವರ ಸ್ಮರಣೆ ವಚನ ಪಠಣ ಹಾಗೂ ಅರ್ಥ ವಿವರಣೆ.

ಘಟ್ಟಿವಾಳಯ್ಯ : ಆರ್. ಜೆ.ವಿನಾಯಕ, ಚುಟುಕು ಸಾಹಿತಿ, ಚಿತ್ರದುರ್ಗ. ಹೆಂಡದ ಮಾರಯ್ಯ : ಡಾ.ಬಿ.ಟಿ. ಲೋಲಾಕ್ಷಮ್ಮ, ಸರ್ಕಾರಿ ನೌಕರರ ಸಂಘ, ಚಿತ್ರದುರ್ಗ ಘಟಕ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKartika MasaMuruga MathVachana Kartikaಕಾರ್ತೀಕ ಮಾಸಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾಮಠವಚನ ಕಾರ್ತೀಕ
Share This Article
Facebook Email Print
Previous Article ಅರ್ಜಿ ಅಹ್ವಾನ ವಿವಿಧ ಯೋಜನೆ | ಕ್ರಿಶ್ಚಿಯನ್ ಸಮುದಾಯದಿಂದ ಅರ್ಜಿ ಅಹ್ವಾನ
Next Article protests against the tour of municipal council members ನಗರಸಭೆ ಸದಸ್ಯರ ಪ್ರವಾಸ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
ಕ್ರೈಂ ಸುದ್ದಿ
Liver disease
ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
Life Style
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ
ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up