By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 

ಮುಖ್ಯ ಸುದ್ದಿ

Valmiki Jayanti; ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 

News Desk Chitradurga News
Last updated: 1 October 2024 19:38
News Desk Chitradurga News
9 months ago
Share
ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 
ಅ.17 ರಂದು ವಾಲ್ಮೀಕಿ ಜಯಂತಿ | ಅರ್ಥಪೂರ್ಣ ಆಚರಣೆಗೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೂಚನೆ 
SHARE
https://chat.whatsapp.com/Jhg5KALiCFpDwME3sTUl7x

CHITRADURGHA NEWS | 01 OCTOBER 2024

ಚಿತ್ರದುರ್ಗ: ಶ್ರೀ ಮಹರ್ಷಿ ವಾಲ್ಮೀಕಿ(Valmiki) ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಇದೇ ಅಕ್ಟೋಬರ್ 17 ರಂದು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಲಿಕ್ ಮಾಡಿ ಓದಿ: Jayadeva Guru: ಜಯದೇವ ಶ್ರೀಗಳ ಬೆಳ್ಳಿ ಪ್ರತಿಮೆ | ಅ.5 ರಂದು ಲೋಕಾರ್ಪಣೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಯಂತಿ ಅಂಗವಾಗಿ ಅಕ್ಟೋಬರ್ 17ರಂದು ಬೆಳಿಗ್ಗೆ 10ಕ್ಕೆ ನಗರದ ಐತಿಹಾಸಿಕ ಕೋಟೆ ಮುಂಭಾಗದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ಪ್ರಾರಂಭವಾಗಿ ಆನೆಬಾಗಿಲು ಮೂಲಕ, ಗಾಂಧಿವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮಧ್ಯಾಹ್ನ 12ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಕರೆಯಲಾಗುವುದು. ಉತ್ತಮ ವಾಗ್ಮಿಗಳಿಂದ ಉಪನ್ಯಾಸ ಹಾಗೂ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.

ಕ್ಲಿಕ್ ಮಾಡಿ ಓದಿ: internal reservation: ಹಿರಿಯೂರಿನಿಂದ ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ

ನಗರಸಭೆ ವತಿಯಿಂದ ತ.ರಾ.ಸು ರಂಗಮಂದಿರ ಸ್ವಚ್ಛತಾ ಕಾರ್ಯ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಕಲ್ಪಿಸಬೇಕು. ತೋಟಗಾರಿಕೆ ಇಲಾಖೆ ವತಿಯಿಂದ ವೇದಿಕೆ ಕಾರ್ಯಕ್ರಮದ ಸ್ಥಳದಲ್ಲಿ ಹೂವಿನ ಕುಂಡಗಳನ್ನು ನೀಡಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇಲಾಖೆ ಅಧಿಕಾರಿಗಳು ತ.ರಾ.ಸು ರಂಗಮಂದಿರ ಕಾಯ್ದಿರಿಸುವುದರೊಂದಿಗೆ ಅಗತ್ಯ ಕಲಾತಂಡದ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಶ್ರೀ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಜಯಂತಿ ಯಶಸ್ವಿಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ ಅವರು, ವಸತಿ ನಿಲಯ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ, ಉಪನ್ಯಾಸ ಮಾಲಿಕೆ ಕಾರ್ಯಕ್ರಮ ಏರ್ಪಡಿಸಿ, ನಂತರ ಭಾಷಣ, ಪ್ರಬಂಧ ಸ್ಪರ್ಧೆ ಕಾರ್ಯಕ್ರಮ ಹಮ್ಮಿಕೊಂಡು ವಾಲ್ಮೀಕಿ ಕುರಿತು ಅರಿವು ಮೂಡಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಗೆ ಕ್ರಮ ವಹಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಚಿತ್ರದುರ್ಗ ನಗರದ ಮದಕರಿ ವೃತ್ತದಲ್ಲಿ ನಿರ್ಮಿಸಲಾಗಿರುವ ವಾಲ್ಮೀಕಿ ಭವನ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇಲ್ಲಿ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: MLC KS NAVEEN: ಹೊಸದುರ್ಗ ನನ್ನ ಕಾಯಕ ಕ್ಷೇತ್ರ | ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ನವೀನ್‌ | 50ನೇ ವರ್ಷದ ಜನ್ಮದಿನಾಚರಣೆ ಸಂಭ್ರಮ

ವಾಲ್ಮೀಕಿ ಭವನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಸ್ತಾಂತರವಾಗಿಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳು ಇದ್ದು, ಈ ಕುರಿತು ಸಂಬಂಧಪಟ್ಟವರು ಅಗತ್ಯ ಕ್ರಮ ವಹಿಸಬೇಕು ಎಂದು ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ದನಿಗೂಡಿಸಿದ ನಗರಸಭೆ ಸದಸ್ಯ ವೆಂಕಟೇಶ್, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ವಾಲ್ಮೀಕಿ ಭವನ ಉಪಯೋಗಕ್ಕೆ ಬಾರದ ಸ್ಥಿತಿಯಲ್ಲಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ನಗರದ ಮಧ್ಯಭಾಗದಲ್ಲಿರುವ ವಾಲ್ಮೀಕಿ ಭವನ ಯಾವ ಉದ್ದೇಶಕ್ಕೆ ನಿರ್ಮಾಣವಾಗಿದೆಯೋ ಅದು ಸದುಪಯೋಗವಾಗಬೇಕು. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಆಸಕ್ತಿವಹಿಸಿ ಸಂಬಂಧಪಟ್ಟವರ ಜೊತೆ ಚರ್ಚಿಸಿ, ಸಭೆ ನಡೆಸಿ, ತಕ್ಷಣವೇ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಚೇರಿ ಸ್ಥಳಾಂತರಿಸಿ:

ಚಿತ್ರದುರ್ಗ ನಗರದ ಜೆಸಿಆರ್ 4ನೇ ಕ್ರಾಸ್, ಗಣೇಶ ದೇವಸ್ಥಾನ ಹತ್ತಿರ ಇರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ನಗರದ ಬಿ.ಡಿ.ರಸ್ತೆಯ ಪ್ರವಾಸಿ ಮಂದಿರದ ಸಮೀಪ ಲಿಡ್ಕರ್ ಭವನಕ್ಕೆ ಸ್ಥಳಾಂತರಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮವಹಿಸಿಲ್ಲ.

ಕ್ಲಿಕ್ ಮಾಡಿ ಓದಿ: Gaurasamudra Maramma Devi: ಗೌರಸಮುದ್ರ ಮಾರಮ್ಮದೇವಿ ಮರಿ ಪರಿಷೆ | ಲಕ್ಷಾಂತರ ಭಕ್ತರ ಆಗಮನದ ನಿರೀಕ್ಷೆ

ವಾಲ್ಮೀಕಿ ಜಯಂತಿಯಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಉದ್ಘಾಟನೆ ಕಾರ್ಯ ಆಗಬೇಕು ಎಂದು ನಾಯಕ ಸಮಾಜದ ಮುಂಡರು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‍ಗೆ ಮನವಿ ಮಾಡಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲಾ ಕಚೇರಿ ಸ್ಥಳಾಂತರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಭರವಸೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳೆಸಿಂಗೆ, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ತಾಲ್ಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:celebrationChitradurgaChitradurga newsChitradurga UpdatesForecastKannada Latest NewsKannada NewsmeaningfulSub-Divisional Officer M.KarthikValmiki Jayantiಅರ್ಥಪೂರ್ಣಆಚರಣೆಉಪವಿಭಾಗಾಧಿಕಾರಿ ಎಂ.ಕಾರ್ತಿಕ್ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ಸುದ್ದಿವಾಲ್ಮೀಕಿ ಜಯಂತಿಸೂಚನೆ
Share This Article
Facebook Email Print
Previous Article ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ  ADGP ಚಂದ್ರಶೇಖರ್‍ ಅಮಾನತುಗೊಳಿಸಿ ಸೂಕ್ತ ತನಿಖೆಗೆ ಜೆಡಿಎಸ್ ಆಗ್ರಹ 
Next Article suspended ಲಂಚ ಪಡೆದ ಗ್ರಾಮ ಆಡಳಿತಾಧಿಕಾರಿ SUSPENSION
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up