By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Vanivilasa Sagar: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Vanivilasa Sagar: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಮುಖ್ಯ ಸುದ್ದಿ

Vanivilasa Sagar: ಬೆಂಗಳೂರಿನ ಒಡಲು ಸೇರಲಿದೆ ವಾಣಿವಿಲಾಸ ಸಾಗರ | ಮುನ್ಸೂಚನೆ ನೀಡಿದ ಸಚಿವ ಸುಧಾಕರ್

News Desk Chitradurga News
Last updated: 15 August 2024 12:00
News Desk Chitradurga News
11 months ago
Share
d.sudhakar
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಪಥ ಸಂಚಲನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಗೌರವ ವಂದನೆ ಸ್ವೀಕರಿಸಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 15 AUGUST 2024
ಚಿತ್ರದುರ್ಗ: ಜಿಲ್ಲೆಯ ಜೀವನಾಡಿಯಾಗಿರುವ ವಾಣಿವಿಲಾಸ ಸಾಗರ (Vanivilasa Sagar) ಜಲಾಶಯದ ನೀರನ್ನು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ತಿಳಿಸಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಜಲಾಶಯಕ್ಕೆ ಪ್ರಸ್ತುತ ಭದ್ರಾ ಜಲಾಶಯದಿಂದ ಪ್ರತಿ ನಿತ್ಯ 700 ಕ್ಯೂಸೆಕ್ಸ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಎತ್ತಿನಹೊಳೆ ಮುಖ್ಯ ಕಾಲುವೆ 32.50 ಕಿ.ಮೀ. ದಲ್ಲಿ ಬೇಲೂರು ತಾಲ್ಲೂಕಿನ ಹೊಲಬಗೆರೆ ಗ್ರಾಮದ ಬಳಿಯ ಎಸ್ಕೆಪ್ ಮುಖಾಂತರ ಬೆಟ್ಟದ ಆಲೂರು ಹಳೇಬೀಡು ಕೆರೆ ಬೆಳವಾಡಿ ಕೆರೆ-ಮುಖಾಂತರ ವೇದಾವತಿ ನದಿಗೆ ಹರಿಸಿ ಅಲ್ಲಿಂದ ವಾಣಿವಿಲಾಸ ಸಾಗರ ಜಲಾಶಯ ತುಂಬಿಸುವ ಪ್ರಸ್ತಾವನೆ ಇದೆ ಎಂದರು.

ಕ್ಲಿಕ್ ಮಾಡಿ ಓದಿ: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ

ಲಿಂಗನಮಕ್ಕಿ ಜಲಾಶಯದಿಂದ ವಿದ್ಯುತ್‌ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ. ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ. ಈ ಯೋಜನೆಯಲ್ಲಿಯೂ ಸಹ ವಾಣಿವಿಲಾಸ ಸಾಗರ ಜಲಾಶಯದಲ್ಲಿ ನೀರು ಶೇಖರಿಸಿ ನಂತರ ಬೆಂಗಳೂರಿಗೆ ನೀರೊಯ್ಯುವ ಪ್ರಸ್ತಾವನೆಯ ಸರ್ವೇ ಕಾರ್ಯ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಈ ಎಲ್ಲ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯವು ಭರ್ತಿಯಾಗುವ ಎಲ್ಲಾ ಅವಕಾಶಗಳು ದಟ್ಟವಾಗಿದೆ. ಇದರಿಂದ ನಮ್ಮ ರೈತರ ಮೊಗದಲ್ಲಿ ಮಂದಹಾಸ ಮೂಡುವುದಲ್ಲದೇ ಮತ್ತು ಜಿಲ್ಲೆಯಲ್ಲಿನ ಅಂತರ್ಜಲ ಮಟ್ಟ ಹೆಚ್ಚಳವಾಗವುದು ಬಹುತೇಕ ನಿಶ್ಚಿತವಾಗಿದೆ ಎಂದರು.

ಕ್ಲಿಕ್ ಮಾಡಿ ಓದಿ: ಡಿಎಆರ್‌ ಡಿವೈಎಸ್‌ಪಿ ಎಸ್‌.ಎಸ್.ಗಣೇಶ್‌ಗೆ ಮುಖ್ಯಮಂತ್ರಿ ಪದಕ

ಮಹತ್ವಾಕಾಂಕ್ಷೆ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ತೊಡಕಾಗಿದ್ದ ಅಬ್ಬಿನಹೊಳಲು ಸ್ಥಳ ಸಮಸ್ಯೆಯನ್ನು ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ. ಬಾಕಿ ಕಾಮಗಾರಿ ಪ್ರಾರಂಭಗೊಳಿಸಲಾಗಿದ್ದು, ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಮಗಾರಿ ವೇಗ ಹೆಚ್ಚಿಸಲು ಸಾಧ್ಯವಾಗದ ಕಾರಣ, ಮುಂದಿನ ಮುಂಗಾರು ಅವಧಿ ಮುಕ್ತಾಯಗೊಳ್ಳುವುದರೊಳಗೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಸರ್ಕಾರವು ಜನರ ಸರ್ವತೋಮುಖ ಏಳಿಗೆಗಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಿರಾತಂಕವಾಗಿ ಸಾಗುತ್ತಿದ್ದು, ಮುಂದೆಯೂ ಯಾವುದೇ ಅಡ್ಡಿಯಿಲ್ಲದೆ ಸಾಗಲಿವೆ. ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 4.50 ಲಕ್ಷ, ಗೃಹಜ್ಯೋತಿ ಯೋಜನೆಯಡಿ 3.71 ಲಕ್ಷ , ಗೃಹಲಕ್ಷ್ಮೀ ಯೋಜನೆಯಡಿ 3.81 ಲಕ್ಷ, ಯುವನಿಧಿ ಯೋಜನೆಯಡಿ 4726, ಹಾಗೂ ಶಕ್ತಿ ಯೋಜನೆಯಡಿ 2.60 ಕೋಟಿ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

min sudhakar
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಇಡೀ ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳು ಬಡವರನ್ನು, ಕೆಳವರ್ಗದ ಜನರನ್ನು, ಮಹಿಳೆಯರನ್ನು ಸಬಲೀಕರಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ. ಬಡತನವ ಬುಡಮಟ್ಟ ಕೀಳ ಬನ್ನಿ ಎಂದು ರಾಷ್ಟ್ರಕವಿ ಕುವೆಂಪುರವರು ಕರೆಕೊಟ್ಟಂತೆ ಬಡತನ ನಿರ್ಮೂಲನೆಗಾಗಿ, ಯುವಕರಿಗೆ ಉದ್ಯೋಗ ನೀಡುವುದಕ್ಕಾಗಿ ಮತ್ತು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದಕ್ಕಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗಿರುತ್ತದೆ. ನುಡಿದಂತೆ ನಡೆದ ನಮ್ಮ ಸರ್ಕಾರ ನೆಡೆದಿದೆ ಎಂದರು.

ಕ್ಲಿಕ್ ಮಾಡಿ ಓದಿ: ವಿಧಾನಸೌಧದ ಮುಂದೆ ಚಳ್ಳಕೆರೆ ಯುವಕನ ಆಟಾಟೋಪ | ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್‌

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸಿದ್ದರು. ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿ ಅಧ್ಯಕ್ಷ ಕೆ.ಅನ್ವರ್‌ ಭಾಷಾ, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್‌.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್‌.ಜೆ.ಸೋಮಶೇಖರ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BangaloreDeputy Chief MinisterForecastIndependence DayMinisterVani Vilasa Sagarಉಪ ಮುಖ್ಯಮಂತ್ರಿಬೆಂಗಳೂರುಮುನ್ಸೂಚನೆವಾಣಿ ವಿಲಾಸ ಸಾಗರಸಚಿವಸ್ವಾತಂತ್ಯೋತ್ಸವ
Share This Article
Facebook Email Print
Previous Article TARABALU 2 Sirigere Swamiji: ಸಿರಿಗೆರೆ ಶ್ರೀಗಳ ನಿರ್ಧಾರಕ್ಕೆ ನಮ್ಮ ಬೆಂಬಲ | ಸಮಸ್ಯೆಗಳಿದ್ದರೆ ಮಠಕ್ಕೆ ಬನ್ನಿ
Next Article d.sudhakra Chitradurga No.1: ಕರ್ನಾಟಕಕ್ಕೆ ಚಿತ್ರದುರ್ಗವೇ ನಂ.1 | ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up