CHITRADURGA NEWS | 14 AUGUST 2024
ಚಿತ್ರದುರ್ಗ: ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಮುರಿದ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವ ಘಟನೆಯ ನಂತರ ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಎಲ್ಲಾ ಜಲಾಶಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನಲ್ಲಿರುವ ವಾಣಿವಿಲಾಸ ಸಾಗರ ಅಣೆಕಟ್ಟು (VV sagara Dam) ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ತಡರಾತ್ರಿ ಸುರಿದ ಭಾರೀ ಮಳೆ | ತುಂಬಿ ಹರಿಯುತ್ತಿರುವ ಗುಂಡಿಹಳ್ಳ
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಎಚ್.ಲಮಾಣಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಇಂಚಿಂಚೂ ತಪಾಸಣೆ ನಡೆಸಿದೆ.
ಜಲಾಶಯದ ಅಪಾಯದ ಲಕ್ಷಣಗಳ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ವಿವಿ ಸಾಗರ ಡ್ಯಾಂಗೆ ಕ್ರಸ್ಟ್ ಗೇಟ್ ಗಳಿಲ್ಲ, ಕೇವಲ ತೂಬಿನ ವ್ಯವಸ್ಥೆ ಇದೆ.
ಇದನ್ನೂ ಓದಿ: ನರೇಗಾ ಕಾಮಗಾರಿ | ಕೇಂದ್ರ ಪರಿಶೀಲನಾ ತಂಡದ ಅಧಿಕಾರಿ ಘನಶಾಮ್ ಮೀನಾ ಭೇಟಿ
1907 ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಜಲಾಶಯ ನಿರ್ಮಾಣ ಮಾಡಿದ್ದು, ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ. 50 ಮೀಟರ್ ಎತ್ತರ, 405 ಮೀ. ಉದ್ದವಿದ್ದು, 135 ಅಡಿ ನೀರು ಸಂಗ್ರಹಿಸಬಹುದು. ಯಾವುದೇ ಸಿಮೆಂಟ್ ಉಪಯೋಗಿಸಿದೆ ಕೇವಲ ಗಾರೆಯಿಂದ ಮಾತ್ರ ಈ ಜಲಾಶಯ ನಿರ್ಮಾಣ ಮಾಡಿರುವುದು ಮತ್ತೊಂದು ವಿಶೇಷ.
ಇನ್ನೂ ಈ ಜಲಾಶಯಕ್ಕೆ ಭದ್ರಾ ಮೇಲ್ದಂಡೆ ಅಧಿಕ್ಷಕ ಇಂಜಿನಿಯರ್ ಮಧುಕುಮಾರ್, ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ, ಸಹಾಯಕ ಇಂಜಿನಿಯರ್ ಮಾನಸ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ, ಜಲಾಶಯದ ಸ್ಥಿತಿಗತಿ ಕುರಿತು ಪರಿಶೀಲನೆ ಕೂಡಾ ನಡೆಸಿದ್ದಾರೆ.
ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಂಸದ ಗೋವಿಂದ ಕಾರಜೋಳ ಚಾಲನೆ
ತಜ್ಞರು ನೀಡಿರು ನಿರ್ವಹಣೆ ಕುರಿತ ಸಣ್ಣ ಪುಟ್ಟ ಸಲಹೆಗಳನ್ನು ಹೊರತುಪಡಿಸಿದರೆ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ. ಸುಭದ್ರವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number