
CHITRADURGA NEWS | 21 MARCH 2024
ಚಿತ್ರದುರ್ಗ: ಎಂತಹ ಬರಗಾಲ ಬಂದರೂ ಸಹ ಹಟ್ಟಿ ತಿಪ್ಪೇಶ ನಮ್ಮನ್ನು ಕೈ ಬಿಡುವುದಿಲ್ಲ…ಸ್ವಾಮಿಗೆ ಕಂಕಣಧಾರಣೆ ಆಗಿ ತೇರಿಗೆ ಬರುವಷ್ಟರಲ್ಲಿ ಒಮ್ಮೆಯಾದರು ಮಳೆರಾಯ ಜಗದೊಡೆಯನ ದರ್ಶನಕ್ಕೆ ಬರುತ್ತಾನೆ ಎಂಬ ಬಯಲುಸೀಮೆ ಜನರ ನಂಬಿಕೆ ಶತಮಾನಗಳಿಂದ ಇದೆ. ಪ್ರತಿ ಜಾತ್ರೆ ಸಮಯದಲ್ಲೂ ಮಳೆ ಬರುವುದು ಹಟ್ಟಿ ತಿಪ್ಪೇಶನ ಪವಾಡಕ್ಕೆ ಸಾಕ್ಷಿಯಾಗಿದೆ.
ಬೆಳಗ್ಗೆ ಮತ್ತು ಸಂಜೆ ವೇಳೆ ಇತ್ತೀಚೆಗೆ ತಂಪು ವಾತಾವರಣದ ರೀತಿ ಭಾಸವಾಗುತ್ತಿದೆ. ಮಧ್ಯಾಹ್ನ ಎಂದಿನಂತೆ ವಿಪರೀತ ಬಿಸಿಲು ದಾಖಲಾಗುತ್ತಿದೆ. ಆಕಾಶದಲ್ಲಿ ಮಳೆ ಮೋಡಗಳ ಸಂಚಾರ ಶುರುವಾಗಿದೆ. ಇದಕ್ಕೆ ಪೂರಕವಾಗಿ ಹವಾಮಾನ ಇಲಾಖೆ ಕೂಡ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕ್ಲಿಕ್ ಮಾಡಿ ಓದಿ: https://chitradurganews.com/arecanut-rates-in-karnataka-74/

ಐದು ದಿನ ಚಿತ್ರದುರ್ಗದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ಐದು ದಿನಗಳ ಪೈಕಿ ಮೊದಲ ಮೂರು ಹೆಚ್ಚು ಮಳೆ ಬರುವ ಲಕ್ಷಣಗಳು ಇವೆ. ನಂತರದ ಎರಡು ದಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯ ಮಳೆ ಬೀಳಲಿದೆ ಎನ್ನುತ್ತಾರೆ ಹವಾಮಾನ ತಜ್ಞರು.
ಕ್ಲಿಕ್ ಮಾಡಿ ಓದಿ: https://chitradurganews.com/accused-of-receiving-dowry-5-years-imprisonment/
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ವಿಜಯಪುರ, ಕೊಡಗು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
