Connect with us

    Restriction; ಸೆಪ್ಟೆಂಬರ್ 15 ರಂದು ಹೆದ್ದಾರಿಯ ಎಡ ಭಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ | ಯಾಕೆ ಗೊತ್ತಾ…

    ಹೆದ್ದಾರಿ

    ಮುಖ್ಯ ಸುದ್ದಿ

    Restriction; ಸೆಪ್ಟೆಂಬರ್ 15 ರಂದು ಹೆದ್ದಾರಿಯ ಎಡ ಭಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ | ಯಾಕೆ ಗೊತ್ತಾ…

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 13 SEPTEMBER 2024

    ಚಿತ್ರದುರ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(Democracy Day) ಹಿನ್ನೆಲೆಯಲ್ಲಿ ಸೆ.15 ರಂದು ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದಲ್ಲಿ ಸು.140 ಕಿ.ಮೀ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

    ಕ್ಲಿಕ್ ಮಾಡಿ ಓದಿ: TEMPLE: ವದ್ದಿಕೆರೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಹುಂಡಿ ಎಣಿಕೆ | 96.32 ಲಕ್ಷ ರೂ.ಸಂಗ್ರಹ

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

    ಮಾನವ ಸರಪಳಿ ರಚನೆಯನ್ನು ಮೊಳಕಾಲ್ಮೂರು ತಾಲ್ಲೂಕಿನ ತಮ್ಮೇನಹಳ್ಳಿ ಗೇಟ್‌ನಿಂದ, ಹಿರಿಯೂರು ನಗರದ ಟಿ.ಬಿ.ವೃತ್ತದವರಗೆ ಹಾದು ಹೊಗಿರುವ ರಾಷ್ಟ್ರೀಯ ಹೆದ್ದಾರಿ 150(ಎ) ಹಾಗೂ ಹಿರಿಯೂರು ನಗರದ ಟಿ.ಬಿ ವೃತ್ತದಿಂದ ಜೆ.ಜೆ.ಹಳ್ಳಿ ಬಾರ್ಡರ್ ವರೆಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಸ್ತೆಗಳ ಎಡಭಾಗದಲ್ಲಿ ನಿರ್ಮಾಣ ಮಾಡಲಾಗುವುದು.

    ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಅಧ್ಯಕ್ಷ ಸ್ಥಾನ | ಅವಿರೋಧವಾಗಿ ಆಯ್ಕೆ ಆಗ್ತಾರಾ ಡಿ.ಸುಧಾಕರ್ !

    ಈ ಕಾರಣದಿಂದ ಸಾರ್ವಜನಿಕರ ಸುರಕ್ಷತೆ, ವಾಹನ ಸುಗಮ ಸಂಚಾರದ ದೃಷ್ಠಿಯಿಂದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೆ.15 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಗಯವರೆಗೆ ಎಡ ಭಾಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಿ(restriction) ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top