
CHITRADURGA NEWS | 09 SEPTEMBER 2025
ಚಿತ್ರದುರ್ಗ: ಹಿಂದೂ ಮಹಾಗಣಪತಿ ಉತ್ಸವಕ್ಕೆ ಜಿಲ್ಲಾಡಳಿತ ವಿಧಿಸುತ್ತಿರುವ ನಿರ್ಬಂಧಗಳನ್ನು ವಿರೋಧಿಸಿ ಸೆ.10 ರಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಜರಂಗದಳ ಪ್ರಾಂತ ಸಂಯೋಜಕ ಪ್ರಭಂಜನ್ ತಿಳಿಸಿದರು.
ಇದನ್ನೂ ಓದಿ: ಶರಣ್ ಪಂಪ್ ವೆಲ್ ಚಿತ್ರದುರ್ಗ ಪ್ರವೇಶ ನಿಷೇಧ | ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆ | ಡಿಸಿ ಆದೇಶ
ಚಿತ್ರದುರ್ಗದ ಹಿಂದೂ ಮಹಾಗಣಪತಿ ಮಂಟಪದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವಕ್ಕೆ ಬರಬೇಕಾದ ನಮ್ಮ ಸಂಘಟನೆಯ ಪ್ರಮುಖರನ್ನು ಜಿಲ್ಲೆಗೆ ಬರದಂತೆ ನಿಷೇಧ ಹೇರುವುದು ಎಷ್ಟರ ಮಟ್ಟಿಗೆ ಸರಿ, ನಾವು ತುಘಲಕ್ ಸರ್ಕಾರದಲ್ಲಿದ್ದೇವಾ ಎಂದು ಪ್ರಶ್ನಿಸಿದರು.
ಗಣೇಶೋತ್ಸವ ಸ್ವಾತಂತ್ರ್ಯ ಹೋರಾಟದಲ್ಲಿ ಹುಟ್ಟಿಕೊಂಡ ಹಿಂದುಗಳ ಹಬ್ಬ. ಈ ಹಬ್ಬಕ್ಕೆ ಇಷ್ಟೊಂದು ನಿಷೇಧಗಳು ಯಾಕೆ. ಡಿಜೆ ಬಳಕೆ ಮಾಡಬಾರದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಮ್ಮ ಪ್ರಮುಖರಾದ ಶರಣ್ ಪಂಪ್ವೆಲ್ ಭಾಗವಹಿಸಬಾರದು ಎಂದು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದು ಸರಿಯಲ್ಲ. ಇದನ್ನು ಹಿಂಪಡೆದು ಸಹಕಾರ ನೀಡಬೇಕು ಎಂದರು.
ಜಿಲ್ಲಾಡಳಿತ ತೆಗೆದುಕೊಂಡಿರುವ ತೀರ್ಮಾನದ ಹಿನ್ನೆಲೆಯಲ್ಲಿಸೆ.10 ರಂದು ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆ ನಡೆಸಲಿದ್ದು, ಇಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಮ್ಮ ಪ್ರಮುಖರಾದ ಶರಣ್ ಪಂಪ್ವೆಲ್ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಸಲ್ಲಿಸಲಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಯಾತ್ರೆ | ಮಾರ್ಗ ಬದಲಾವಣೆ | ವಾಹನ ಸಂಚರಿಸಬೇಕಾದ ಮಾರ್ಗ ಇಲ್ಲಿದೆ
ಗಣೇಶೋತ್ಸವದ ಶೋಭಾಯಾತ್ರೆ ಯಶಸ್ಸಿಗೆ ಜಿಲ್ಲಾಡಳಿತ ಸಹಕಾರ ನೀಡಬೇಕು. ಶೋಭಾಯಾತ್ರೆಯಲ್ಲಿ ಸ್ಪೀಕರ್ (ಡಿಜೆ) ಬಳಕೆ ಮಾಡಲು ಅನುಮತಿ ಬೇಕು. ಭದ್ರಾವತಿ, ಶಿವಮೊಗ್ಗ, ಹೊಸಪೇಟೆ, ವಿಜಯಪುರ ಜಿಲ್ಲೆಗಳಲ್ಲಿ ಡಿಜೆ ಬಳಕೆ ಮಾಡಲಾಗಿದೆ. ಆದರೆ, ಚಿತ್ರದುರ್ಗ ಜಿಲ್ಲೆಗೆ ಮಾತ್ರ ಯಾಕೆ ನಿರ್ಬಂಧ ಎಂದು ಕೇಳಿದರು.
ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಿರುವ ಸಿಂಧೂರ ಮಂಟಪದಿಂದ ಬುಧವಾರ ಸಂಜೆ 4 ಗಂಟೆಗೆ ಪ್ರಾರಂಭವಾಗುವ ಪ್ರತಿಭಟನಾ ರ್ಯಾಲಿ, ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷರಾದ ಶರಣ್ಕುಮಾರ್, ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಕೇಶವ ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
