ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸಭಾತ್ಯಾಗ

ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸಭಾತ್ಯಾಗ

CHITRADURGA NEWS | 18 FEBRUARY 2025

ಚಿತ್ರದುರ್ಗ: ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ನಡುವೆಯೇ ತಾಳ ಮೇಳ ಸರಿಯಾಗಿಲ್ಲ ಎನ್ನುವುದು ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಬಹಿರಂಗವಾಯಿತು.

ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಖುದ್ದು ಅಧ್ಯಕ್ಷರು, ಪೌರಾಯುಕ್ತರ ಮೇಲೆ ಅಸಮಧಾನ ವ್ಯಕ್ತಪಡಿಸಿದ ಪ್ರಸಂಗಕ್ಕೆ ನಗರಸಭೆ ಸಾಕ್ಷಿಯಾಯಿತು.

ಇದನ್ನೂ ಓದಿ: ನಗರಸಭೆಯಲ್ಲಿ ಅಧ್ಯಕ್ಷರೇ ಸುಪ್ರೀಂ, ಇನ್ಯಾರೋ ಅಲ್ಲ | ನಗರಸಭೆ ಸದಸ್ಯರ ಗುಡುಗು

ಸಭೆ ಆರಂಭವಾಗುತ್ತಲೇ, ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮಾತನಾಡುತ್ತಾ, ನಾನು ಪ್ರತಿನಿಧಿಸುವ 33ನೇ ವಾರ್ಡ್‍ನಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಆದರೆ, ಈ ಬಗ್ಗೆ ನಮಗೇ ಮಾಹಿತಿ ಇಲ್ಲ ಎಂದರು.

ನಮ್ಮನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎನ್ನುವುದಾದರೆ ನಾವ್ಯಾಕೆ ಸಭೆಯಲ್ಲಿರಬೇಕು ಎಂದು ಸಭಾತ್ಯಾಗ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಬಜೆಟ್ | ಯಾವ ಕೆಲಸಕ್ಕೆ ಎಷ್ಟು ಅನುದಾನ ಮೀಸಲು | ಇಲ್ಲಿದೆ ಪೂರ್ಣ ವಿವರ

ಈ ವೇಳೆ ಸದಸ್ಯರು ಉಪಾಧ್ಯಕ್ಷರಿಗೆ ಅವರ ವಾರ್ಡ್‍ನ ಕಾಮಗಾರಿ ವಿಚಾರ ಗೊತ್ತಾಗುತ್ತಿಲ್ಲ ಎನ್ನುವುದಾದರೆ ಹೇಗೆ, ಇದು ನಾಚಿಕೆಗೇಡಿನ ವಿಚಾರ. ಆಡಳಿತ ಮಾಡುವವತ ನಡುವೆಯೇ ಹೊಂದಾಣಿಕೆ ಇಲ್ಲ ಎಂದು ವ್ಯಂಗ್ಯವಾಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version