
CHITRADURGA NEWS | 01 0CTOBER 2024
ಚಿತ್ರದುರ್ಗ: ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗ್ರಾಮ ಆಡಳಿತಾಧಿಕಾರಿ ಜಿ.ಎಂ.ದಾಸೇಗೌಡ ಸಾರ್ವಜನಿಕರಿಂದ ಲಂಚ ಪಡೆದ ಆರೋಪದಡಿ ಅಮಾನತುಗೊಂಡಿದ್ದಾರೆ (SUSPENSION).
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕೆ.ಆರ್.ಹಳ್ಳಿ ವಿಎ ದಾಸೇಗೌಡ ಅವರು ಸಾರ್ವಜನಿಕರಿಂದ ಲಂಚ ಪಡೆದ ದೃಶ್ಯ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿತ್ತು.
ಇದನ್ನೂ ಓದಿ: ಕಪ್ಪು ಪಟ್ಟಿ ಧರಿಸಿ ನಿವೃತ್ತ ನೌಕರರಿಂದ ಧರಣಿ
ಇದನ್ನು ಮನಗಂಡ ತಾಲೂಕು ಹಾಗೂ ಜಿಲ್ಲಾಡಳಿತ ಕಾರಣ ಕೇಳಿ ನೋಟೀಸ್ ನೀಡಿದೆ. ಜೊತೆಗೆ ಮೇಲ್ನೋಟಕ್ಕೆ ಲಂಚ ಪಡೆಯುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಜಿ.ಎಂ.ದಾಸೇಗೌಡ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಸಾರ್ವಜನಿಕರೊಬ್ಬರು ಕಚೇರಿ ಬಳಿ ಹೋಗಿ ನಾವು ಬಡವರು ಸಾರ್ ಇಷ್ಟೇ ಇರೋದು ಎಂದಾಗ, ಇಲ್ಲ ಆರ್ಐಗೆ ಕೊಡಬೇಕು. ನನಗೆ ಉಳಿಯಲ್ಲ ಎನ್ನುತ್ತಾ ಹಣ ಪಡೆದಿದ್ದ ವೀಡಿಯೋ ಬೆಳಗ್ಗೆ ವೈರಲ್ ಆಗಿತ್ತು. ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ ಸಂಜೆ ವೇಳೆಗೆ ಅಮಾನತು ಮಾಡಿ ಆದೇಶಿಸಿದೆ.
ಇದನ್ನೂ ಓದಿ: ಜಯದೇವ ಶ್ರೀಗಳ ಬೆಳ್ಳಿ ಪ್ರತಿಮೆ | ಅ.5 ರಂದು ಲೋಕಾರ್ಪಣೆ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
