By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: upgrade; ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಭೇಟಿ | ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » upgrade; ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಭೇಟಿ | ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವೆ 

ಮುಖ್ಯ ಸುದ್ದಿ

upgrade; ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಭೇಟಿ | ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳುವೆ 

News Desk Chitradurga News
Last updated: 19 September 2024 19:33
News Desk Chitradurga News
9 months ago
Share
ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಭೇಟಿ
ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದ ಗೋವಿಂದ ಕಾರಜೋಳ ಭೇಟಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 19 SEPTEMBER 2024

ಚಿತ್ರದುರ್ಗ: ನಗರದ ಜೈಲ್‍ ರಸ್ತೆಯಲ್ಲಿರುವ ಕೆ.ಐ.ಎ.ಡಿ.ಬಿ(KIADB) ಕೈಗಾರಿಕಾ ವಲಯದಲ್ಲಿರುವ ಕೇಂದ್ರ ಸರ್ಕಾರ(central government)ದ ಎಂ.ಎಸ್.ಎಂ.ಇ(MSME) ಇಲಾಖೆಯ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯಿಂದ ನಡೆಯುತ್ತಿರುವ ಕೇಂದ್ರೀಯ ಹಂಜಿ ಕಾರ್ಯಾಗಾರಕ್ಕೆ ಸಂಸದರಾದ ಗೋವಿಂದ ಕಾರಜೋಳ ಗುರುವಾರ ಭೇಟಿದರು.

ಕ್ಲಿಕ್ ಮಾಡಿ ಓದಿ: District level; ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ | ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ತನಿಷಾ  

ನಂತರ ಮಾತನಾಡಿದ ಅವರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಒಂದು ಬಾರಿ ಈ ಘಟಕಕ್ಕೆ ಕರೆ ತರುತ್ತೇನೆ, ಇನ್ನೊಷ್ಟು ಮೇಲ್ದರ್ಜೇಗೇರಿಸಲು(upgrade) ಅಗತ್ಯವಾದ ಕ್ರಮ ತಗೆದುಕೊಳ್ಳಲು ನಾನು ಅವರ ಮನವೊಲಿಸುತ್ತೇನೆ ಎಂದರು.

21 ನೇ ಶತಮಾನದ ಭಾರತವು ಯಾವುದೇ ಎತ್ತರವನ್ನು ಸಾಧಿಸುವುದಾದರೂ ಅದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಯಶಸ್ಸಿನ ಮೇಲೆ ಅವಲಂಭಿತವಾಗಿರುತ್ತದೆ. ನಮ್ಮ ದೇಶದ ರಫ್ತು ಪ್ರಮಾಣ ಹೆಚ್ಚಾಗಲು ಮತ್ತು ಭಾರತದ ಉತ್ಪನ್ನಗಳು ಹೊಸ ಮಾರುಕಟ್ಟೆಗಳನ್ನು ತಲುಪಲು ಭಾರತದ ಎಂ.ಎಸ್.ಎಂ.ಇ. ವಲಯ ಬಲಿಷ್ಟವಾಗಬೇಕಾಗಿರುವುದು ಅತ್ಯಂತ ಅವಶ್ಯವಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಭಾರತದ ಬೆಳವಣಿಗೆಯ ಪ್ರಯಾಣದ ಬಹುದೊಡ್ಡ ಆಧಾರಸ್ಥಂಭವಾಗಿದೆ. ಈ ವಲಯವು ಭಾರತದ ಆರ್ಥಿಕತೆಯ ಸುಮಾರು ಮೂರನೇ ಒಂದು ಭಾಗವನ್ನು ಹೊಂದಿದೆ. ಈ ವಲಯವನ್ನು ಬಲಪಡಿಸುವುದು ಇಡೀ ಸಮಾಜವನ್ನು ಬಲಪಡಿಸಿದಂತಾಗುತ್ತದೆ.

ಈ ಕಾರಣದಿಂದಾಗಿಯೇ ಮೋದಿಜಿ ನೇತೃತ್ವದ ನಮ್ಮ ಸರ್ಕಾರದ ಅತ್ಯುನ್ನತ ಆದ್ಯತೆಗಳಲ್ಲಿ ಒಂದಾಗಿ ಈ ವಲಯವನ್ನು ನೋಡುತ್ತಿದೆ ಎಂದರು.

ಕ್ಲಿಕ್ ಮಾಡಿ ಓದಿ: Free cancer screening; ಜಿಲ್ಲಾ ಆಸ್ಪತ್ರೆಯಲ್ಲಿ ಸೆ.20 ರಂದು ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರ 

ಈ ವಲಯವನ್ನು ಬಲಪಡಿಸಲು ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಅಗ್ರಪಾಲನ್ನು ಒದಗಿಸುತ್ತಿದೆ. ಸುಮಾರು 11 ಕೋಟಿಗೂ ಹೆಚ್ಚು ಜನರು ಈ ವಲಯದೊಂದಿಗೆ ಸಂಪರ್ಕ ಹೊಂದಿದ್ದಾರೆ.

ಕೋವಿಡ್ ಸಂಕಷ್ಟದ ಸಮಯದಲ್ಲಿ ಈ ವಲಯವನ್ನು ಉತ್ತೇಜಿಸುವ ಸಲುವಾಗಿ ಅನೇಕ ರಿಯಾಯಿತಿ ಯೋಜನೆಗಳನ್ನು ಕೇಂದ್ರ ಸರ್ಕಾರ ಆತ್ಮನಿರ್ಭರ ಯೋಜನೆಯ ಮೂಲಕ ನೀಡಿದ್ದರ ಪರಿಣಾಮವಾಗಿ ವಲಯ ಈಗ ಚೇತರಿಸಿಕೊಂಡಿದೆ ಎಂದರು.

ಇಡೀ ದಕ್ಷಿಣ ಭಾರತದಲ್ಲಿ ಕರ್ನಾಟಕದ ಚಿತ್ರದುರ್ಗ ಮತ್ತು ಕೇರಳದಲ್ಲಿ ಮಾತ್ರ ಕೇಂದ್ರೀಯ ಹಂಜಿ ಕಾರ್ಯಾಗಾರಗಳು ಕಾರ್ಯನಿರ್ವಹಿಸುತ್ತಿವೆ.

ಚಿತ್ರದುರ್ಗದ ಹಂಜಿ ಕಾರ್ಯಾಗಾರದಲ್ಲಿ ಸುಮಾರು 90 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ, ಸುಮಾರು 5 ಎಕರೆ ಪ್ರದೇಶದಲ್ಲಿ 1995 ರಲ್ಲಿ ಪ್ರಾರಂಭವಾದ ಈ ಘಟಕ ಪ್ರಸ್ತುತ ಪ್ರತಿ ವರ್ಷ 18-20 ಕೋಟಿ ವಹಿವಾಟು ಹೊಂದಿದೆ. ಎಂದು ಪ್ರೊಡಕ್ಷನ್ ಉಸ್ತುವಾರಿ ರಮೇಶ್ ಸಂಸದರಿಗೆ ಮಾಹಿತಿ ನೀಡಿದರು.

ಕ್ಲಿಕ್ ಮಾಡಿ ಓದಿ: Sirigere; ಸೆ.20 ರಿಂದ 24 ರವರೆಗೆ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಶ್ರದ್ದಾಂಜಲಿ ಸಮಾರಂಭ 

ಇಲ್ಲಿ ತಯಾರಾಗುವ ಖಾದಿ ಕಚ್ಚಾವಸ್ತು ಕರ್ನಾಟಕ, ಆಂದ್ರ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳಿಗೆ ವಿತರಣೆಯಾಗುತ್ತದೆ. ನಮ್ಮ ದೇಶದ ತ್ರಿವರ್ಣ ಧ್ವಜ ತಯಾರಾಗುವ ಗರಗ ಗ್ರಾಮಕ್ಕೆ ಹಾಗೂ ಹುಬ್ಬಳ್ಳಿಯ ಬೆಂಗೇರಿಗೂ ಸಹ ಇಲ್ಲಿಂದಲೇ ಖಾದಿ ನೂಲು ಸರಬರಾಜಾಗುತ್ತದೆ ಎಂದರು.

ಇಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಇಲ್ಲ, ಇನ್ನುಳಿದಂತೆ ಸರ್ಕಾರದ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ ಎಂದು ಸಿಬ್ಬಂದಿಗಳು ಸಂಸದರಿಗೆ ವಿವರಿಸಿದರು.

ಇಲ್ಲಿ ಕೆಲಸ ಮಾಡುವ ನಾವು ರಾತ್ರಿ ಪಾಳದಲ್ಲಿ ಕೂಡ ಕೆಲಸ ಮಾಡುತ್ತಿದ್ದೇವೆ. ನಮಗೆ ಸಿಗಬೇಕಾದ ಸೌಲಭ್ಯಗಳು ಸರಿಯಾದ ರೀತಿಯಲ್ಲಿ ದೊರೆತರೆ ಇನ್ನೂ ಹುಮ್ಮಸ್ಸಿನಿಂದ ಕೆಲಸ ಮಾಡಲು ನಾವು ಸಿದ್ದರಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರೀಯಾ ಹಂಜಿ ಕಾರ್ಯಾಗಾರದ ಪ್ರೊಡಕ್ಷನ್ ಉಸ್ತುವಾರಿ ರಮೇಶ್, ಹಂಜಿ ಕಾರ್ಯಾಗಾರದ ಸಹಾಯಕ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Action will be takenCentral GovtCentral Hanji WorkshopChitradurgaChitradurga newsChitradurga UpdatesGovinda KarajolaKannada Latest Newsnecessaryupper classvisitಅಗತ್ಯಕನ್ನಡ ಲೇಟೆಸ್ಟ್ ನ್ಯೂಸ್ಕೇಂದ್ರ ಸರ್ಕಾರಕೇಂದ್ರೀಯ ಹಂಜಿ ಕಾರ್ಯಾಗಾರಕ್ರಮ ಕೈಗೊಳ್ಳುವೆಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಭೇಟಿಮೇಲ್ದರ್ಜೆ
Share This Article
Facebook Email Print
Previous Article ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ತನಿಷಾ   District level; ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ | ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಸ್ನೇಹ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ತನಿಷಾ  
Next Article Scholarship; ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up