By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮಳೆಯಿಂದ ಹಾನಿಯಾದ ತೋಟಗಳಿಗೆ ಭೇಟಿ ನೀಡಿ | ಡಿಸಿ‌‌‌ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮಳೆಯಿಂದ ಹಾನಿಯಾದ ತೋಟಗಳಿಗೆ ಭೇಟಿ ನೀಡಿ | ಡಿಸಿ‌‌‌ ಸೂಚನೆ

ಮುಖ್ಯ ಸುದ್ದಿ

ಮಳೆಯಿಂದ ಹಾನಿಯಾದ ತೋಟಗಳಿಗೆ ಭೇಟಿ ನೀಡಿ | ಡಿಸಿ‌‌‌ ಸೂಚನೆ

News Desk Chitradurga News
Last updated: 16 April 2025 19:25
News Desk Chitradurga News
2 months ago
Share
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 16 April 2025 

ಚಿತ್ರದುರ್ಗ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ ನಿಖರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

Also Read: ನಾಲ್ಕು ದಿನ ವಿದ್ಯುತ್‌ ವ್ಯತ್ಯಯ | ಯಾವ ದಿನಾಂಕ ಗಮನಿಸಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಬೆಳೆಹಾನಿ ಹಾಗೂ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಮಳೆಹಾನಿ ಪ್ರದೇಶಗಳ ಸ್ಥಳ ಪರಿಶೀಲನೆ ನಡೆಸುತ್ತಿಲ್ಲ ಎಂದು ರೈತರು ದೂರುತ್ತಿದ್ದು, ಬೆಳೆಹಾನಿ ಪ್ರದೇಶಗಳ ಸ್ಥಳ ಪರಿಶೀಲನೆ ನಡೆಸದ ಅಧಿಕಾರಿಗಳ ಅಮಾತಿಗೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಹೊಳಲ್ಕೆರೆ ತಾಲ್ಲೂಕಿನಲ್ಲಿ 25 ಎಕೆರೆ ಅಡಿಕೆ ಬೆಳೆ, 15 ಎಕರೆ ಮಾವು, ಹಾಗೂ 03 ಎಕರೆ ಮಾವು ಬೆಳೆ ಹಾನಿಯಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ 120 ಎಕರೆ ಪಪ್ಪಾಯಿ ಬೆಳೆ ಹಾಗೂ 8.30 ಎಕರೆ ಕೃಷಿ ಬೆಳೆಗಳು ಹಾನಿಯಾಗಿವೆ.

Also Read: 1ನೇ ತರಗತಿಗೆ ವಯೋಮಿತಿ ಸಡಿಲಿಕೆ | ಸರ್ಕಾರದ ಮಹತ್ವದ ನಿರ್ಧಾರ | ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ

ಚಿತ್ರದುರ್ಗ ತಾಲ್ಲೂಕಿನ ವಿ.ಪಾಳ್ಯ, ನಲ್ಲೆಕಟ್ಟೆ ಗ್ರಾಮಗಳಲ್ಲಿ ಅಡಿಕೆ ಬೆಳೆ ಹಾಗೂ ಪಪ್ಪಾಯಿ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ ಒಂದು ಜಾನುವಾರು ಮೃತಪಟ್ಟಿದೆ. ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಮನೆಯ ಮೇಲ್ಛಾವಣೆಯು ಹಾನಿಯಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 4.20 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 1 ಹೆಕ್ಟೇರ್ ಕೃಷಿ ಹಾಗೂ 1 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ ಹಾಗೂ ಒಂದು ಜಾನುವಾರು ಮೃತಪಟ್ಟಿದೆ, 06 ಮನೆಗಳು ಭಾಗಶಃ ಹಾನಿಗೊಳಗಾಗಿವೆ ಎಂದು ತಹಶೀಲ್ದಾರ್‍ಗಳು ಸಭೆಗೆ ಮಾಹಿತಿ ನೀಡಿದರು.

ಬೆಳೆಹಾನಿಗೆ ಸಂಬಂಧಿಸಿದಂತೆ ಎಲ್ಲ ವರದಿಯನ್ನು ಸಿದ್ದತೆ ಮಾಡಿಟ್ಟುಕೊಂಡು, ಪರಿಹಾರ ಸಾಫ್ಟವೇರ್ ಓಪನ್ ಆದ ತಕ್ಷಣ ಎಂಟ್ರಿ ಮಾಡಬೇಕು. ನಿಯಮಾನುಸಾರ ಪರಿಹಾರ ವಿತರಣೆಗೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಮಾತನಾಡಿ, ಹಿರಿಯೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಸ್ತುತ 7 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.

Also Read: ಖಾಸಗಿ ಶಾಲೆ ಬಸ್‌ ನಿರ್ವಾಹಕಿ ಕೊಲೆ | ಆರೋಪಿ ಬಂಧನ

ಮುಂದಿನ ದಿನಗಳಲ್ಲಿ ಕುಡಿಯುವ ನೀರು ಸಮಸ್ಯೆ ಉದ್ಭವಿಸುವ ಸಮಸ್ಯೆಯಾತ್ಮಕ ಗ್ರಾಮಗಳ ನಿಖರ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಖುರೇಷಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಸೇರಿದಂತೆ ತಹಶೀಲ್ದಾರ್‍ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCropDamageDC VenkateshKannada Latest NewsKannada NewsMonsoon RainRainrop damage areaಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ಬೆಳೆಬೆಳೆ ಹಾನಿ ಪ್ರದೇಶಮಳೆಮುಂಗಾರು ಮಳೆಹಾನಿ
Share This Article
Facebook Email Print
Previous Article Power outage on May 1 ನಾಲ್ಕು ದಿನ ವಿದ್ಯುತ್‌ ವ್ಯತ್ಯಯ | ಯಾವ ದಿನಾಂಕ ಗಮನಿಸಿ
Next Article arecanut price list 57 ಸಾವಿರ ದಾಟಿದ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up