CHITRADURGA NEWS | 04 December 2024
ಚಿತ್ರದುರ್ಗ: ಭದ್ರಾ ಜಲಾಶಯದಿಂದ ಒಳಹರಿವು ನಿಂತು ಹೋದ ಬಳಿಕ ವಾಣಿವಿಲಾಸ ಸಾಗರ(VV SAGARA) ಜಲಾಶಯಕ್ಕೆ ಮತ್ತೆ ನೀರಿನ ಹರಿವು ಪ್ರಾರಂಭವಾಗಿದೆ.
ಕ್ಲಿಕ್ ಮಾಡಿ ಓದಿ: ಕಡಲೆ ಬೆಳೆಗಾರರಿಗೆ ಆತಂಕ ಸೃಷ್ಟಿಸಿದ ಮಳೆರಾಯ

ಫೆಂಗಾಲ್ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಉತ್ತಮವಾಗಿ ಮಳೆ ಸುರಿದಿದ್ದು, ಇದರಿಂದಾಗಿ ಜಲಾಶಯಕ್ಕೆ ಮತ್ತೆ ನೀರು ಹರಿದು ಬಂದಿದೆ.
ಬುಧವಾರ ಬೆಳಗ್ಗೆ ನಡೆಸಿದ ಮಳೆ ಮಾಪನದ ವೇಳೆ ವಾಣಿವಿಲಾಸ ಸಾಗರ ಜಲಾಶಯಕ್ಕೆ 693 ಕ್ಯೂಸೆಕ್ ನೀರು ಹರಿದು ಬಂದಿದೆ. ಸದ್ಯ ಜಲಾಶಯದಿಂದ ಯಾವುದೇ ಹೊರ ಹರಿವು ಇಲ್ಲ.
135 ಅಡಿ ಎತ್ತರದ ಜಲಾಶಯಕಯ 130 ಅಡಿವರೆಗೆ ನೀರು ಬಂದರೆ ಜಲಾಶಯ ಕೋಡಿ ಹರಿಯಲಿದೆ.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಡಿಸೆಂಬರ್ 04 | ಯಾವ್ಯಾವ ರಾಶಿಗೆ ಹೇಗಿದೆ ದಿನ?
ಸದ್ಯ ವಿವಿ ಸಾಗರ ಜಲಾಶಯದಲ್ಲಿ 128.70 ಅಡಿವರೆಗೆ ನೀರು ಬಂದಿದ್ದು, ಕೋಡಿ ಬೀಳಲು ಇನ್ನೂ 1.30 ಅಡಿ ನೀರು ಬರಬೇಕಿದೆ.
30 ಟಿಎಂಸಿ ಅಡಿ ಸಾಮರ್ಥ್ಯದ ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ಈಗ 29.33 ಟಿಎಂಸಿ ಅಡಿವರೆಗೆ ನೀರು ಬಂದಿದೆ. ಟಿಎಂಸಿ ಲೆಕ್ಕದಲ್ಲಿ ಜಲಾಶಯಕ್ಕೆ ಇನ್ನು ಕೇವಲ 0.67 ಟಿಎಂಸಿ ನೀರು ಬರಬೇಕಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
