CHITRADURGA NEWS | 25 SEPTEMBER 2024
ಹೊಳಲ್ಕೆರೆ: ಸಾಸ್ವೆಹಳ್ಳಿ(Sasvehalli) ಏತ ನೀರಾವರಿ(irrigation) ಯೋಜನೆಯಡಿಯಲ್ಲಿ ತಾಲ್ಲೂಕಿನ ಮುತ್ತುಗದೂರು ಗ್ರಾಮದ ಕೆರೆಗೆ ನೀರು ಬರುತ್ತಿರುವುದನ್ನು ಸಿರಿಗೆರೆ(Sirigere)ಯ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವೀಕ್ಷಿಸಿದರು.
ಕ್ಲಿಕ್ ಮಾಡಿ ಓದಿ: Market: ಅಡಿಕೆ ಧಾರಣೆ | ಸೆಪ್ಟಂಬರ್ 25 | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್

ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಏತ ನೀರಾವರಿ ಯೋಜನೆಯ ಅಧಿಕಾರಿಗಳು ಹಾಗೂ ಇಂಜಿನಿಯರ್ಗಳು ಮುತ್ತುಗದೂರು ಗ್ರಾಮದ ಪ್ರಮುಖರು ಇದ್ದರು.
ಇದೇ ಸಂದರ್ಭದಲ್ಲಿ ಭೀಮಸಮುದ್ರ ಮತ್ತು ಸಿರಿಗೆರೆ ಕೆರೆಗಳಿಗೆ ನೀರು ಹರಿಸುವ ನಾಲ್ಕನೆ ಪಂಪ್ಹೌಸ್ಗೆ ಚಾಲನೆ ನೀಡಲಾಯಿತು.
ಮುತ್ತುಗದೂರಿನಲ್ಲಿ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ 32ನೇ ಶ್ರದ್ದಾಂಜಲಿ ಸಮಾರಂಭ
ತಾಲೂಕಿನ ಮುತ್ತುಗದೂರು ಸರ್ಕಲ್ ನಲ್ಲಿ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 32 ನೇ ಶ್ರದ್ದಾಂಜಲಿ ಸಮಾರಂಭ ನಡೆಯಿತು.
ಕ್ಲಿಕ್ ಮಾಡಿ ಓದಿ: Rambhapuri Sri; ಹುಟ್ಟು ಆಕಸ್ಮಿಕ, ಸಾವು ನಿಶ್ಚಿತ | ರಂಭಾಪುರಿ ಶ್ರೀಗಳು

ಸಮಾರಂಭಕ್ಕೆ ಶಾಸಕ ಎಂ.ಚಂದ್ರಪ್ಪ ಭಾಗವಹಿಸಿ ಮಾತನಾಡಿ, ಬಹಳಷ್ಟು ಸಲ ಸರ್ಕಾರ ಎಚ್ಚರಿಕೆ ಕೊಟ್ಟರು ಇಂಜಿನಿಯರ್, ಗುತ್ತಿಗೆದಾರರು ಕೆಲಸ ಮಾಡಿರಲಿಲ್ಲ. ಅಂತಹ ಸಂದರ್ಭದಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿಗಳು ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಇವರುಗಳು ಮುಖ್ಯಮಂತ್ರಿಗಳಾಗಿದ್ದಾಗ ಸಾಕಷ್ಟು ಒತ್ತಡ ತಂದ ಪರಿಣಾಮ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯಡಿ ತಾಲ್ಲೂಕಿನ ಮುತ್ತುಗದೂರು ಗ್ರಾಮದ ಕೆರೆಗೆ ನೀರು ಹರಿಯಲು ಸಾಧ್ಯವಾಯಿತು. ಜಿ.ಎಂ.ಸಿದ್ದೇಶ್ವರ್ ಕೇಂದ್ರ ಮಂತ್ರಿಯಾಗಿದ್ದಾಗ ಸಾಕಷ್ಟು ಹಣ ಮಂಜೂರು ಮಾಡಿಸಿದ್ದಾರೆಂದು ಹೇಳಿದರು.
ರೈತರು, ಜನಸಾಮಾನ್ಯರ ಬಗ್ಗೆ ಅಪಾರವಾದ ಕಾಳಜಿಯಿಟ್ಟುಕೊಂಡಿರುವ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಕಾಲ ಕಾಲಕ್ಕೆ ಇಂಜಿನಿಯರ್, ಗುತ್ತಿಗೆದಾರರುಗಳಿಗೆ ಎಚ್ಚರಿಕೆ ನೀಡುತ್ತ ಬಂದ ಪರಿಣಾಮ ಮುತ್ತುಗದೂರು ಗ್ರಾಮದ ಕೆರೆಗೆ ನೀರು ಬರುತ್ತಿದೆ.
2019 ರಲ್ಲಿ ಭರಮಸಾಗರ ಏತ ನೀರಾವರಿಗೆ 680 ಕೋಟಿ ರೂ.ಗಳನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದೆ. ಮೂರು ವರ್ಷಗಳಲ್ಲಿ 40 ಕೆರೆಗಳಿಗೆ ನೀರು ತುಂಬಿಸಲಾಗಿದೆ ಎಂದರು.
ಕ್ಲಿಕ್ ಮಾಡಿ ಓದಿ: BJP Protest; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ
ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಪುಟ್ಟಣ್ಣ, ರುದ್ರಣ್ಣ, ನಾಗರಾಜ್, ಕೃಷ್ಣಪ್ರಸಾದ್, ಶಶಿಪಾಟೀಲ್ ಮತ್ತಿತರ ಪ್ರಮುಖರು ಶ್ರದ್ದಾಂಜಲಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
