
CHITRADURGA NEWS | 07 AUGUST 2024
ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ವೇದಾವತಿ ಹಾಗೂ ನೇತ್ರಾವತಿ ನದಿ ಮೂಲಕ ನೀರು ಹರಿದು ಬರುತ್ತಿದ್ದು, ದಿನದಿಂದ ದಿನಕ್ಕೆ ಒಳ ಹರಿವು ಹೆಚ್ಚಾಗುತ್ತಿದೆ. ಆಗಸ್ಟ್ 7 ರ ಬೆಳಿಗ್ಗೆ 8 ಗಂಟೆಗೆ 1039 ಕ್ಯೂಸೆಕ್ ನೀರು ವಿವಿ ಸಾಗರ ಜಲಾಶಯ ಸೇರಿದೆ.
130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹಿಸಿಡಬಹುದು. ಸದ್ಯ ಹೊರ ಹರಿವು ಇಲ್ಲ. ಇದರಲ್ಲಿ ಕುಡಿಯುವ ಉದ್ದೇಶಕ್ಕಾಗಿ 13 ಕ್ಯೂಸೆಕ್ ಬಳಕೆಯಾಗುತ್ತಿದೆ. 134 ಕ್ಯೂಸೆಕ್ ಆವಿಯಾ ಪ್ರಮಾಣವಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದ ನೀರನ್ನು ವಿವಿ ಸಾಗರಕ್ಕೆ ಹರಿಸಲಾಗುತ್ತಿದೆ.
ಇದನ್ನು ಓದಿ: ಮತ್ತೆ ಬಂದವು ಕರಡಿ | ಶುರುವಾಯಿತು ಆತಂಕ
ವಿವಿ ಸಾಗರ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 114.7 ಅಡಿ ಇದೆ. ಡ್ಯಾಮ್ ಭರ್ತಿಯಾಗಲು ಇನ್ನೂ 12 ಟಿಎಂಸಿ ಅಡಿ ನೀರು ಬೇಕಿದೆ. ಭದ್ರಾ ಜಲಾಶಯದಿಂದ ನಿತ್ಯವೂ 700 ಕ್ಯುಸೆಕ್ ನೀರು ಹರಿಸಿದರೆ 17 ದಿನಕ್ಕೆ ಒಂದು ಟಿಎಂಸಿ ಅಡಿಯಷ್ಟು ನೀರು ಬರಲಿದೆ. ಇದರ ಜೊತೆಗೆ ಉತ್ತಮ ಮಳೆಯಾದರೆ ಮತ್ತೊಮ್ಮೆ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
