
ಚಿತ್ರದುರ್ಗ ನ್ಯೂಸ್.ಕಾಂ: ಪೋಕ್ಸೋ ಪ್ರಕರಣದಲ್ಲಿ ಕಳೆದ ಒಂದು ವರ್ಷ ಎರಡು ತಿಂಗಳಿಂದ ಜಿಲ್ಲಾ ಕಾರಾಗೃಹದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಷರತ್ತುಬದ್ಧ ಜಾಮೀನು ವಿಧಿಸಿರುವ ನ್ಯಾಯಾಲಯ, ಮೊದಲನೆಯದಾಗಿ ಮುರುಘಾ ಮಠ ಇರುವ, ಚಿತ್ರದುರ್ಗ ಜಿಲ್ಲೆಗೆ ಶ್ರೀಗಳು ಭೇಟಿ ನೀಡುವಂತಿಲ್ಲ ಎನ್ನುವುದು ಮೊದಲನೇ ಹಾಗೂ ಪ್ರಮುಖ ಷರತ್ತಾಗಿದೆ.

ಶ್ರೀಗಳ ಪಾಸ್ಪೋರ್ಟ್ ಅನ್ನು ವಶಕ್ಕೆ ನೀಡಬೇಕು. ಹಾಗೂ ನ್ಯಾಯಾಲಯದ ವಿಚಾರಣೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕು ಎಂದು ನ್ಯಾಯಾಲಯ ತಿಳಿಸಿದೆ.
ಇದನ್ನೂ ಓದಿ: ಮುರುಘಾ ಶರಣರಿಗೆ ಜಾಮೀನು ಮಂಜೂರು

ನ್ಯಾಯಾಲಯ ವಿಧಿಸಿರುವ ಇತರೆ ಏಳು ಷರತ್ತುಗಳು:
- ಪ್ರಕರಣದ ವಿಚಾರಣೆ ಮುಗಿಯುವವರೆಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶ ಮಾಡಬಾರದು
- ಎರಡು ಲಕ್ಷ ರೂ. ವೈಯಕ್ತಿಕ ಬಾಂಡ್ ನೀಡಬೇಕು.
- ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು.
- ಸಾಕ್ಷಿಗಳನ್ನು ಬೆದರಿಸಬಾರದ
- ಜಾಮೀನು ಮಂಜೂರಾತಿ ಆದೇಶವನ್ನು ಶರಣರು ದುರ್ಬಳಕೆ ಮಾಡಿಕೊಳ್ಳಬಾರದು.
- ಸಾಕ್ಷಿ ನಾಶಕ್ಕೆ ಯತ್ನಿಸಬಾರದು
- ನ್ಯಾಯಾಲಯ ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ತನ್ನಂದ ತಾನೇ ರದ್ದಾಗಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
