By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Rudset Institute
    ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
    43 minutes ago
    ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
    ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
    45 minutes ago
    ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
    ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
    5 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
    5 hours ago
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
    SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    19 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    6 hours ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    7 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಅಭಾಸಪ ಉದ್ಘಾಟನೆ | ಓದುಗರ ಮನಸ್ಸು ಅರಳಿಸದ ಸಾಹಿತ್ಯದ ಪ್ರಯೋಜನವೇನು | ಡಾ.ಸಿಬಂತಿ ಪದ್ಮನಾಭ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಭಾಸಪ ಉದ್ಘಾಟನೆ | ಓದುಗರ ಮನಸ್ಸು ಅರಳಿಸದ ಸಾಹಿತ್ಯದ ಪ್ರಯೋಜನವೇನು | ಡಾ.ಸಿಬಂತಿ ಪದ್ಮನಾಭ

chitradurganews.com
Last updated: 23 February 2025 11:46
chitradurganews.com
1 year ago
Share
Akhila Bharathiya sahithya parishath inagration ctd
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಸಮಿತಿ ಉದ್ಘಾಟನೆ
SHARE

CHITRADURGA NEWS | 23 FEBRUARY 2025

ಚಿತ್ರದುರ್ಗ: ಓದುವವರ ಮನಸ್ಸು ಅರಳಿಸದಿದ್ದರೆ, ಒಳ್ಳೆಯ ಭಾವನೆ ಬೆಳೆಸದಿದ್ದರೆ, ಜನ ಪರಸ್ಪರ ಪ್ರೀತಿಸುವಂತೆ ಮಾಡದಿದ್ದರೆ ಅಂತಹ ಸಾಹಿತ್ಯದಿಂದ ಏನು ಪ್ರಯೋಜನ ಎಂದು ತುಮಕೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ.ವಿ ಪ್ರಶ್ನಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸಂಜೆ ನಡೆದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಸಮಿತಿ ಉದ್ಘಾಟನೆ ಹಾಗೂ ವರಕವಿ ದ.ರಾ.ಬೇಂದ್ರ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ: ಸರಿಗಮ ಸಂಗೀತ ನಾಟಕೋತ್ಸವ | ಡಾ.ಬಸವಕುಮಾರ ಸ್ವಾಮೀಜಿ ಉದ್ಘಾಟನೆ

ಸಾಹಿತ್ಯದಿಂದ ಗಲಭೆಯಾದರೆ ಏನರ್ಥ. ಇತ್ತೀಚಿನ ದಿನಗಳಲ್ಲಿ ಜನರ ಮನಸ್ಸು ಛಿದ್ರಗೊಳಿಸುವ ವಿದ್ವಂಸಕ ಸಾಹಿತ್ಯ ಬರೆಯುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದರು.

ಎಲ್ಲವೂ ಸರಿಯಾಗಿದ್ದರೂ, ಹುಳಿ ಹಿಂಡುವ, ಎಲ್ಲರೂ ಸಕಾರಾತ್ಮಕವಾಗಿದ್ದಾಗ ನಕಾರಾತ್ಮಕವಾಗಿ ಮಾತನಾಡಿ ವಿಜೃಂಭಿಸುವ ಪ್ರವೃತ್ತಿ ಹೆಚ್ಚಾಗಿದೆ. ನಾವು ಹುಟ್ಟಿ ಬೆಳೆದ ದೇಶದ ಪರವಾಗಿ ಆಲೋಚನೆ ಮಾಡುವ ಸಾಹಿತ್ಯ ನಮಗೆ ಬೇಕು ಎಂದು ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ನಮಗೆ ಇನ್ನೊಂದು ಸಹೃದಯೀ ಸಾಹಿತ್ಯ ಸಂಸ್ಥೆ ಜೊತೆಯಾಗಿದೆ. ವಿಭಿನ್ನ ರೀತಿಯ ಸಂಸ್ಥೆ ಇದು ಎನ್ನುವುದಕ್ಕೆ ಈ ಕಾರ್ಯಕ್ರಮ ನಿದರ್ಶನ. ಒಟ್ಟಾಗಿ ಸೇರಿ ಮುಂದುವರೆಯೋಣ.

| ಕೆ.ಎಂ.ಶಿವಸ್ವಾಮಿ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರು.

ಸಾಕಷ್ಟು ಜನರಿಗೆ ಸಾಹಿತ್ಯದಲ್ಲಿ ಏನನ್ನು ಓದಬೇಕು. ಏನನ್ನು ಅರ್ಥೈಸಿಕೊಳ್ಳಬೇಕು ಎನ್ನುವುದೇ ಸಮಸ್ಯೆ. ಈ ನಿಟ್ಟಿನಲ್ಲಿ ಅಭಾಸಪ ಸಮಾಜಕ್ಕೆ ಉತ್ತಮ ಸಾಹಿತ್ಯ ಕೊಡುವ ದೃಷ್ಟಿಕೋನದಲ್ಲಿ ಸಾಗುತ್ತಿದೆ ಎಂದು ವಿವರಿಸಿದರು.

ಸಾಹಿತಿ ತಾನು ಬದುಕಿದ ಹಾಗೆ ಬರೆಯಬೇಕೊ ಅಥವಾ ತನಗಿಷ್ಟವಾದ ವಿಷಯ ಬರೆಯಬಹುದೊ ಎನ್ನುವ ಜಿಜ್ಞಾಸೆ ನಿರಂತರವಾಗಿದೆ. ತಾನು ಬರೆದ ಸಾಹಿತ್ಯ ನನ್ನ ಜೀವನಕ್ಕೆ ಸಂಬಂಧವಿಲ್ಲ ಎನ್ನುವ ಭಾವನೆ ಇದೆ.

ಇದನ್ನೂ ಓದಿ: ಮೇ.10ರ ಒಳಗಾಗಿ ಇ-ಖಾತೆ ಪಡೆಯಿರಿ | ಜಿಲ್ಲಾಧಿಕಾರಿ ವೆಂಕಟೇಶ್

ಸಾಹಿತ್ಯದಲ್ಲಿ ಕುಡಿತ ಹಾನಿಕರ ಎಂದು ಬರೆದು ರಾತ್ರಿ ಕಂಠಪೂರ್ತಿ ಕುಡಿಯುವುದು, ಭ್ರಷ್ಟ ಅಧಿಕಾರಿ ಭ್ರμÁ್ಟಚಾರದ ಬಗ್ಗೆ ಉಪನ್ಯಾಸ ನೀಡಿದಂತೆ ಆಗುವುದಿಲ್ಲವೇ ಎಂದರು.

Akhila Bharathiya sahithya parishath inagration sibanthi
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾ ಸಮಿತಿ ಉದ್ಘಾಟನೆ

ವರಕವಿ ದ.ರಾ.ಬೇಂದ್ರೆಯವರು ತಾವು ಹೇಗೆ ಬದುಕಿದರೊ ಹಾಗೆಯೇ ಬರೆದವರು. ಮನಸ್ಸು ಮಾಡಿದ್ದರೆ ರಾಜಧಾನಿಯಲ್ಲೇ ಬದುಕಬಹುದಿತ್ತು. ಆದರೆ, ಸಾಧನಕೇರಿಯಲ್ಲೇ ಬದುಕು ಸವೆಸಿದರು ಎಂದು ಸ್ಮರಿಸಿದರು.

ಬೇಂದ್ರೆ ಅವರ ಜೀವನದಲ್ಲಿ ಸಾಕಷ್ಟು ದುಃಖ ಅನುಭವಿಸಿದ್ದಾರೆ. ಅವರ ಭಾವಗೀತೆಗಳಲ್ಲಿ ಸಾಕಷ್ಟು ನೋವು ತುಂಬಿರುತ್ತೆ. ಅದೇ ಸಾಹಿತ್ಯವಾಗಿದೆ. ಬರೆದಂತೆ ಬದುಕಿದವರು ದ.ರಾ.ಬೇಂದ್ರ. ಆದರೆ, ಸಾಹಿತ್ಯದ ಮೂಲಕ ಸಮಾಜದ ಬಗ್ಗೆ ಮಾತನಾಡಿದವರು ಸಮಾಜಕ್ಕೆ ಪೂರಕವಾಗಿ ಬದುಕಿಲ್ಲದ ಅನೇಕ ವೈರುಧ್ಯಗಳೂ ಇವೆ ಎಂದರು.

ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಡಾ.ಎಸ್.ಎನ್.ಹೇಮಂತರಾಜು ಮಾತನಾಡಿ, ಸಾಹಿತ್ಯ ಬೇರೆ ಬೇರೆ ರೀತಿಯಲ್ಲಿ ಅರ್ಥವಾಗುತ್ತೆ ಎನ್ನುವುದಕ್ಕೆ ಬೇಂದ್ರೆಯವರ ನೀ ಹಿಂಗ ನೋಡಬೇಡ ನನ್ನ ಎನ್ನುವ ಪದ್ಯ ಎಂದು ವಿಶ್ಲೇಷಿಸಿದರು.

ಮುಖಂಡನೊಬ್ಬ ಹೊಗಳು ಭಟ್ಟನ ಮಾತು ಕೇಳಿ ಹಳ್ಳ ಹಿಡಿಯುವುದು ಹೇಗೆ ಸಾಧ್ಯವೋ ಅದೇ ಮಾತು ಸಾಹಿತಿಗೂ ಅನ್ವಯಿಸುತ್ತದೆ ಎಂದರು.
ಬೇಂದ್ರೆಯವರನ್ನು ಬಿಟ್ಟು ಕನ್ನಡ ಸಾಹಿತ್ಯವಿಲ್ಲ. ಬೇಂದ್ರೆಯವರ ಹೆಸರಿನಲ್ಲಿ ಟ್ರಸ್ಟ್ ಆಗಿದೆ. ಈ ಮೂಲಕ ಅವರು ಇನ್ನಷ್ಟು ಜನರನ್ನು ತಲುಪಬೇಕು ಎಂದು ಆಶಿಸಿದರು.

ಸೊಷಿಯಲ್ ಮೀಡಿಯಾದಂತಹ ಅನೇಕ ಮಾಲಿನ್ಯದ ನಡುವೆ ಕಳೆದು ಹೋಗುತ್ತಿರುವ ನಮಗೆ ಸಾಹಿತ್ಯ ಕಾರ್ಯಕ್ರಮಗಳು ಬೇಕು. ಈ ನಿಟ್ಟಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವತ್ತ ಗಮನಹರಿಸಲಿದೆ.

| Prof.ಜಿ.ಪರಮೇಶ್ವರಪ್ಪ. ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಜಿಲ್ಲಾಧ್ಯಕ್ಷರು.

ಜ್ಞಾನಪೀಠ ಪ್ರಶಸ್ತಿ ಬಂದಾಗ ಬೇಂದ್ರೆಯವರು ಕನ್ನಡಕ್ಕೆ ಈಗ ಲಕ್ಷ್ಯ ಬಂತು ಎನ್ನುತ್ತಾರೆ. ಆದರೆ, ತಂದಿಕ್ಕುವ ಶಕ್ತಿಗಳು ನನಗೆ ಲಕ್ಷ ಬಂತು ಎಂದಿದ್ದಾರೆ ಎಂದು ಪುಕಾರು ಹಬ್ಬಿಸಿ ಕುವೆಂಪು ಹಾಗೂ ಬೇಂದ್ರೆಯವರ ನಡುವೆ ವೈಮನಸ್ಸು ಮೂಡಿಸುವ ಕೆಲಸ ನಿರಂತರವಾಗಿತ್ತು. ಇಂತಹ ಒಳಸುಳಿಗಳ ನಡುವೆ ಅವರು ಬದುಕಿದರು ಎಂದು ಮೆಲುಕು ಹಾಕಿದರು.

ಇದನ್ನೂ ಓದಿ:  ದಿನ ಭವಿಷ್ಯ | ಫೆಬ್ರವರಿ 23 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕೆಲಸಗಳು ಪೂರ್ಣ, ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ

ತಮ್ಮ ಮಾತು ಹಾಗೂ ಪದಬಳಕೆಯಲ್ಲಿ ವಿಶಿಷ್ಟವಾಗಿ ಬಳಸುವ ಶಕ್ತಿ ಬೇಂದ್ರೆಯವರಲ್ಲಿತ್ತು. ನನ್ನ ಬದುಕೇ ನನ್ನ ಸಂದೇಶ ಎಂದು ಹೇಳಿದ ಜಗತ್ತಿನ ಏಕೈಕ ವ್ಯಕ್ತಿ ಗಾಂಧೀಜಿ. ಅದೇ ರೀತಿ ಬದಕಿದಂತೆ ಬರೆದವರು ಬೇಂದ್ರೆ ಮತ್ತು ಕುವೆಂಪು ಎಂದು ಡಾ.ಹೇಮಂತರಾಜು ಹೇಳಿದರು.

ಉಪನ್ಯಾಸಕ ಯಳನಾಡು ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ದೊಡ್ಡಯ್ಯ ಸ್ವಾಗತಿಸಿದರು. ಶಿಕ್ಷಕಿ ವಿಜಯಲಕ್ಷ್ಮೀ ಪ್ರಾರ್ಥಿಸಿದರು. ಶಿಕ್ಷಕ ಕೆಂಚವೀರಪ್ಪ ಕಾರ್ಯಕ್ರಮ ನಿರ್ವಹಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Akhil Bharatiya Sahitya ParishadChitradurgaChitradurga LatestChitradurga newsDr.R.BendrafeaturedJnanpeethKannada NewsNakuthantiಅಖಿಲ ಭಾರತೀಯ ಸಾಹಿತ್ಯ ಪರಿಷತ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜ್ಞಾನಪೀಠದ.ರಾ.ಬೇಂದ್ರನಾಕುತಂತಿ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಫೆಬ್ರವರಿ 23 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕೆಲಸಗಳು ಪೂರ್ಣ, ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ
Next Article ರೇಣುಕಸ್ವಾಮಿ ಪುತ್ರನಿಗೆ ನಾಮಕರಣ | ಹೆಸರೇನು ಗೊತ್ತಾ ?
Leave a Comment

Leave a Reply Cancel reply

Your email address will not be published. Required fields are marked *

Rudset Institute
ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
ಮುಖ್ಯ ಸುದ್ದಿ
ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
ಮುಖ್ಯ ಸುದ್ದಿ
ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ
ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up