
CHITRADURGA NEWS | 03 AUGUST 2024
ಚಿತ್ರದುರ್ಗ: ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಾ ಹಾಗೂ ಭದ್ರಾ ಜಲಾಶಯಗಳು ಭರ್ತಿಯಾಗಿವೆ.
ಇದರೊಟ್ಟಿಗೆ ಚಿಕ್ಕಮಗಳೂರು ಜಿಲ್ಲೆಯ ಅಯ್ಯನಕೆರೆ, ಮದಗದ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದು ಹರಿಯುತ್ತಿವೆ. ಈ ನೀರು ವೇದಾವತಿ ಮೂಲಕ ವಿವಿ ಸಾಗರ ತಲುಪುತ್ತಿದೆ.
ಇದನ್ನೂ ಓದಿ: ಕಾರು ಅಪಘಾತ | ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
ವೇದಾವತಿ ನದಿ ಮೂಲಕ ಹರಿದ ನೀರಿನ ಪ್ರಮಾಣ ಶನಿವಾರ ಬೆಳಗ್ಗೆ ನಡೆಸಿದ ಮಾಪನದಂತೆ ೮೦೮ ಕ್ಯೂಸೆಕ್ ನೀರು ಹರಿದು ಬಂದಿದೆ.
130 ಅಡಿ ಎತ್ತರದ ವಿವಿ ಸಾಗರ ಜಲಾಶಯದಲ್ಲಿ ೩೦ ಟಿಎಂಸಿ ಅಡಿ ನೀರು ಸಂಗ್ರಹಿಸಬಹುದು.
ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ ಭದ್ರಾ ನೀರು | ಶುರುವಾಯ್ತು ಕೌಂಟ್ಡೌನ್
ಶನಿವಾರ 808 ಕ್ಯೂಸೆಕ್ ಒಳಹರಿವು ಬಂದಿದ್ದು, ಜಲಾಶಯದಲ್ಲಿ 18.64 ಟಿಎಂಸಿ ನೀರು ಸೇರಿದ್ದು, ಒಟ್ಟು 114.60 ಅಡಿವರೆಗೆ ನೀರು ಬಂದಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
