CHITRADURGA NEWS | 05 MAY 2026
ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನಾನು ಕೇಳಿದಷ್ಟು ಅನುದಾನ ಮಂಜೂರು ಮಾಡಿದ ಪರಿಣಾಮ ಎಲ್ಲಾ ಕೆರೆಗಳಲ್ಲಿ ನೀರು ತುಂಬಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?
ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಪ್ರವೇಶಿಸಿ ಐವತ್ತು ವರ್ಷಗಳಾಗಿರುವುದರಿಂದ ಮೇ.9 ರಂದು ಚಿತ್ರದುರ್ಗದ ಹೊರವಲಯದ ವಿಶಾಲವಾದ ಜಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಭರಮಸಾಗರ ಬಿಜೆಪಿ ಮಂಡಲ ವತಿಯಿಂದ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.
20 ವರ್ಷಗಳ ಕಾಲ ಸಾಕಿದ ಅಡಿಕೆ ತೋಟಗಳು ಒಣಗಿದರೆ ರೈತರ ಮನಸ್ಸಿಗೆ ಎಷ್ಟು ನೋವಾಗುತ್ತದೆನ್ನುವ ಅರಿವಿಟ್ಟುಕೊಂಡಿದ್ದೇನೆ. ಉಪಕಾರ ಮಾಡಿದವರನ್ನು ಸ್ಮರಿಸುವ ಗುಣ ಪ್ರತಿಯೊಬ್ಬ ಮನುಷ್ಯನಲ್ಲಿಯೂ ಇರಬೇಕು. ಅದಕ್ಕಾಗಿ ಮೇ.9 ರಂದು ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಎಂದು ಕ್ಷೇತ್ರದ ಜನತೆಯಲ್ಲಿ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ಐವತ್ತು ವರ್ಷಗಳಲ್ಲಿ 45 ವರ್ಷಗಳ ಕಾಲ ಹೋರಾಟಕ್ಕಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದ ಬಿ.ಎಸ್.ಯಡಿಯೂರಪ್ಪನವರು ಐದು ವರ್ಷಗಳ ಕಾಲ ಮಾತ್ರ ಮುಖ್ಯಮಂತ್ರಿಯಾಗಿದ್ದರು. ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಎಲ್ಲಾ ಜಾತಿ ಧರ್ಮದವರಿಗೂ ಸಾಮಾಜಿಕ ನ್ಯಾಯ ಕೊಟ್ಟಿದ್ದಾರೆ. ಹಾಗಾಗಿ ಅವರಿಗೆ ಬೆಂಬಲ ತೋರಿಸಿ ಋಣ ತೀರಿಸಬೇಕಾಗಿದೆ.
ಇದನ್ನೂ ಓದಿ: SC/ST ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪಲ್ಲವಿ ಜಿಲ್ಲಾ ಪ್ರವಾಸ
ಎಲೆ ಮರೆಯ ಕಾಯಿಯಂತಿದ್ದುಕೊಂಡು ನಾನು ಸರ್ಕಾರದ ಮಟ್ಟದಲ್ಲಾಗುವ ಕೆಲಸಗಳನ್ನು ಮಾಡಿಸಿದ್ದರ ಫಲವಾಗಿ ಹೊಳಲ್ಕೆರೆ ತಾಲ್ಲೂಕಿನಾದ್ಯಂತ ಜನ ನೆಮ್ಮದಿಯಿಂದಿದ್ದಾರೆ. ಆತ್ಮಸಂತೋಷದಿಂದ ಅಭಿಮಾನೋತ್ಸವದಲ್ಲಿ ಭಾಗವಹಿಸಿ ಎಂದು ಜನತೆಯಲ್ಲಿ ವಿನಂತಿಸಿದರು.
ಈ ವೇಳೆ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಉಪಾಧ್ಯಕ್ಷ ಶೈಲೇಶ್ಕುಮಾರ್, ಮಂಜುನಾಥ, ಪ್ರವೀಣ್ಕುಮಾರ್, ತೀರ್ಥಣ್ಣ, ಕಲ್ಲೇಶ್, ಸಿದ್ದಬಸಣ್ಣ, ಮೋಹನ್, ರಾಜಣ್ಣ, ಬಸಣ್ಣ ಹಾಗೂ ಭರಮಸಾಗರ ಮಂಡಲದ ಚುನಾಯಿತ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
