By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ

ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ

News Desk Chitradurga News
Last updated: 20 June 2025 19:17
News Desk Chitradurga News
19 hours ago
Share
ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 JUNE 2025

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲೆಯ ಸಂಸದರು, ಸಚಿವರು, ಶಾಸಕರನ್ನು ಪ್ರಶ್ನಿಸುವ ಭಿತ್ತಿ ಪತ್ರ ಹಿಡಿದು ಪ್ರತಿಭಟನೆ ನಡೆಸಿದರು.

Also Read: ಮನಸ್ಸು, ದೇಹಕ್ಕೆ ಯೋಗ ಸಹಕಾರಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)

ಸರ್ಕಾರದಿಂದ ದುರ್ಗೋತ್ಸವ ಕಾರ್ಯಕ್ರಮವನ್ನು ಜೂನ್ ಅಂತ್ಯದೊಳಗೆ ದಿನಾಂಕ ನಿಗಧಿಪಡಿಸಿ ಆಚರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು.

ನಮ್ಮ ಸುತ್ತಾ-ಮುತ್ತಲ್ಲಿನ ಜಿಲ್ಲೆಯಲ್ಲಿ ಸರ್ಕಾರ ವಿವಿಧ ರೀತಿಯ ಉತ್ಸವ ಆಚರಣೆ ಮಾಡುತ್ತಿದೆ ಆದರೆ ನಮ್ಮ ಚಿತ್ರದುರ್ಗದಲ್ಲಿ ಮಾತ್ರ ದುರ್ಗೋತ್ಸವ ಆಚರಣೆ ಮಾಡಲು ಮೀನಾ-ಮೇಷ ಮಾಡುತ್ತಿದೆ ಎಂದು ದೂರಿದರು.

ಜಿಲ್ಲೆಯ ಸಂಸದರು, ಸಚಿವರು ಶಾಸಕರ ವಿರುದ್ದ ಘೋಷಣೆಗಳನ್ನು ಕೂಗಲಾಯಿತು, ಇದ್ದಲ್ಲದೆ ದುರ್ಗೋತ್ಸವ ಆಚರಣೆ ಯಾವಾಗ ಎಂಬ ಭಿತ್ತಿ ಪತ್ರವನ್ನು ಮದಕರಿ ಹಾಗೂ ಓನಕೆ ಒಬವ್ವ ವೃತ್ತದಲ್ಲಿ ಅಂಟಿಸಲಾಯಿತು.

ಪ್ರತಿಭಟನೆಯಲ್ಲಿ ಕರುನಾಡ ವಿಜಯಸೇನೆಯ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಕರ್ನಾಟಕ ಸರ್ಕಾರದಿಂದ ಮೈಸೂರು ದಸರಾ, ಹಂಪಿ ಉತ್ಸವ, ಕೊಡಗು ಉತ್ಸವ, ಕಿತ್ತೂರು ಉತ್ಸವ, ಹಲವು ಜಿಲ್ಲೆಗಳಲ್ಲಿ ಇತಿಹಾಸವುಳ್ಳ ಹೆಸರುಗಳ ಮೇಲೆ ಉತ್ಸವಗಳನ್ನು ಸರ್ಕಾರವೇ ಆಚರಿಸುತ್ತಿದೆ. ಆದರೆ ದುರ್ಗೋತ್ಸವ ಆಚರಣೆಗೆ ತಾರತಮ್ಯ ಏಕೆ?

Also Read: ನಿವೃತ್ತ ಕೆಇಬಿ ಇಂಜಿನಿಯರ್‌ ಟಿ.ಜಿ.ರಾಜಶೇಖರಪ್ಪ ನಿಧನ

ಈ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಆಂಜನೇಯ ಸಚಿವರಾಗಿದ್ದಾಗ ದುರ್ಗೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಅಲ್ಲಿಂದ ಇಲ್ಲಿವರೆಗೆ ದುರ್ಗೋತ್ಸವ ಕಾರ್ಯಕ್ರಮವನ್ನು ಮಾಡುವುದು ಮರೆತಿರುವುದು ಎದ್ದು ಕಾಣುತ್ತಿದೆ ಎಂದು ದೂರಿದರು.

ಚಿತ್ರದುರ್ಗದಲ್ಲಿ ದುರ್ಗೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಈಗಾಗಲೇ 5, 6 ತಿಂಗಳ ಹಿಂದೆ ಸಂಘಟನೆಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿಕೊಂಡ ಪರಿಣಾಮ ಸಚಿವರು ಜೂನ್ ಅಂತ್ಯದೋಳಗೆ ದುರ್ಗೋತ್ಸವ ಕಾರ್ಯಕ್ರಮವನ್ನು ಮಾಡಲು ಮೌಖಿಕವಾಗಿ ತಿಳಿಸಿರುತ್ತಾರೆ.

ಆದರೆ ಜೂನ್ ತಿಂಗಳು ಕಳೆಯುತ್ತಾ ಬಂದರೂ ಈ ಬಗ್ಗೆ ಸಚಿವರಾಗಲೀ, ಶಾಸಕರುಗಳಾಗಲಿ, ಮಾತನಾಡದಿರುವುದು ನೋಡಿದರೆ ಚಿತ್ರದುರ್ಗವನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತದೆ.

ಐತಿಹಾಸಿಕ ಪರಂಪರೆ ಹೊಂದಿರುವ ಚಿತ್ರದುರ್ಗವನ್ನು ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಶಾಸಕರು ಕಡೆಗಣಿಸಿರುತ್ತಾರೆ. ವರ್ಷಕ್ಕೊಮ್ಮೆ ಐತಿಹಾಸಿಕ ದುರ್ಗೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾಡಿದರೆ ಇನ್ನು ಹೆಚ್ಚಿನದಾಗಿ ಪ್ರವಾಸಿತಾಣಗಳು ಅಭಿವೃದ್ಧಿ ಹೊಂದಲು ಮತ್ತು ಪ್ರವಾಸಿಗರು ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ಇನ್ನು ಹೆಚ್ಚಿನದಾಗಿ ವೀಕ್ಷಣೆ ಮಾಡಲು ಅವಕಾಶವಾಗುತ್ತದೆ.

ಆದರೆ ಸರ್ಕಾರ ಚಿತ್ರದುರ್ಗವನ್ನು ಕಡೆಗಣಿಸುತ್ತಿರುವುದರಿಂದ ಜಿಲ್ಲೆಯ ಪ್ರವಾಸಿಗರಿಗೆ ಮತ್ತು ಕನ್ನಡಾಭಿಮಾನಿಗಳಿಗೆ ತುಂಬಾ ನೋವುಂಟು ಮಾಡಿದಂತಾಗಿದೆ ಎಂದರು

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ವಿಧಾನಸಭೆಯಲ್ಲಿ ಚರ್ಚಿಸಿ ಜೂನ್ ಅಂತ್ಯದೊಳಗೆ ದಿನಾಂಕ ನಿಗಧಿಪಡಿಸಿ ಆಚರಿಸಲು ಕೂಡಲೇ ಸೂಕ್ತ ಆದೇಶ ನೀಡಿ, ಚಿತ್ರದುರ್ಗದಲ್ಲಿ ದುರ್ಗೋತ್ಸವ-2025 ಆಚರಣೆಗೆ ಚಾಲನೆ ನೀಡಬೇಕೆಂದು ಮುಖ್ಯಮಂತ್ರಿಗಳನ್ನು ಕರುನಾಡ ವಿಜಯಸೇನೆ ಕಾರ್ಯಕರ್ತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾ ಅಧ್ಯಕ್ಷೆ ವೀಣಾಗೌರಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಜಿಲ್ಲಾ ಉಪಾಧ್ಯಕ್ಷರಾದ ಮುಜಾಯಿದ್, ಜಿಲ್ಲಾ ಕಾರ್ಯದರ್ಶಿ ಅಣ್ಣಪ್ಪ, ಜಗದೀಶ್, ನಗರಾಧ್ಯಕ್ಷ ಆವಿನಾಶ್, ಕಾರ್ಮೀಕ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಸಮಿತಿಯ ವಿಜಯಬಾಬು, ನಿಸಾರ್ ಆಹ್ಮದ್, ತಿಪ್ಪೇಸ್ವಾಮಿ, ಶಶಿಧರ್, ಕಮಲಮ್ಮ, ಮಧುಸೂಧನ್, ನಾಗೇಶ್ ಸುರೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDistrict AdministrationDurgotsavaGovernmentKannada Latest NewsKannada NewsMinistersMLAsprotestSiddaramaiahಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಡಳಿತದುರ್ಗೋತ್ಸವಪ್ರತಿಭಟನೆಸಚಿವರು ಶಾಸಕರುಸರ್ಕಾರಸಿದ್ದರಾಮಯ್ಯ
Share This Article
Facebook Email Print
Previous Article ಮನಸ್ಸು, ದೇಹಕ್ಕೆ ಯೋಗ ಸಹಕಾರಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
Next Article Power Cut chitradurga News (3) ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up