CHITRADURGA NEWS | 25 JUNE 2024
ಚಿತ್ರದುರ್ಗ: ಜೋರಾಗಿ ಬೀಸಿದ ಗಾಳಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮರವೊಂದು ಕಾರು ಹಾಗೂ ಬೈಕಿನ ಮೇಲೆ ಬಿದ್ದಿದೆ.
ಮರ ಬಿದ್ದ ರಭಸಕ್ಕೆ ಪಲ್ಸರ್ ಬೈಕಿನ ಟ್ಯಾಂಕ್ ಸಂಪೂರ್ಣ ಜಖಂ ಆಗಿದೆ. ಆದರೆ, ಕಾರಿಗೆ ಯಾವುದೇ ತೊಂದರೆ ಆಗಿರಲಿಲ್ಲ.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೌಕರ ಸಿ.ಎನ್.ನವನೀತ್ ಅಮಾನತು | ಅನಧಿಕೃತ ಗೈರು ಹಾಜರಿ ಹಿನ್ನೆಲೆ ಆದೇಶ
ಬೈಕ್ ಸವಾರ ಚಲಿಸುತ್ತಿದ್ದ ವೇಳೆಯೇ ಮರ ಬಿದ್ದಿದ್ದು, ಕ್ಷಣಮಾತ್ರದಲ್ಲಿ ಬೈಕ್ ಸವಾರ ಪಾರಾಗಿದ್ದು, ಬೈಕು ಜಖಂ ಆಗಿದೆ.
ಮಧ್ಯಾಹ್ನ 1.45ರ ವೇಳೆಗೆ ಬೀಸಿದ ಗಾಳಿಗೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿದ್ದ ಉದ್ದನೆಯ ಮರ ರಸ್ತೆಗೆ ಬಿದ್ದಿದೆ.
ಇದನ್ನೂ ಓದಿ: ನಕ್ಷತ್ರ ಆಮೆ ಕಳ್ಳತನ ಮಾಡುತ್ತಿದ್ದ ನಾಲ್ಕು ಜನರ ಬಂಧನ | 32 ನಕ್ಷತ್ರ ಆಮೆಗಳು ವಶಕ್ಕೆ
ಕಾಲೇಜು ಆವರಣದಿಂದ ಕಾಂಪೌಂಡ್ ದಾಟಿ ಪಕ್ಕದ ರಸ್ತೆಗೆ ಮರ ಬಿದ್ದಿದ್ದು, ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ.
ನಗರ ಪೊಲೀಸ್ ಠಾಣೆ ಎದುರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾಂಪೌಂಡ್ ಪಕ್ಕದಲ್ಲಿ ನಿಂತಿದ್ದ ಕಾರಿನ ಮೇಲೆ ಮರ ಬಿದ್ದಿದ್ದರೂ ಕಾರಿಗೆ ಹಾನಿಯಾಗಿರಲಿಲ್ಲ. ಮರದ ದಪ್ಪನೆ ತುಂಡುಗಳು ಕಾರಿನ ಪಕ್ಕದಲ್ಲಿದ್ದರೆ ಕಾರಿನ ಮೇಲೆ ಸಣ್ಣಪುಟ್ಟ ರೆಂಬೆ, ಕೊಂಬೆಗಳು, ಸೊಪ್ಪು ಮುಚ್ಚಿಕೊಂಡಿತ್ತು.
ಇದನ್ನೂ ಓದಿ: ಮುಸ್ಲಿಂ ಮಹಿಳೆಗೆ ನ್ಯಾಯ ದೊರಕಿಸಿದ ಸದ್ಧರ್ಮ ನ್ಯಾಯಪೀಠ | ಸಿರಿಗೆರೆ ಸ್ವಾಮೀಜಿಗೆ ಗೌರವ
ಸ್ಥಳಕ್ಕೆ ಪೊಲೀಸರು ಆಗಮಿಸಿ, ಕಾರು ತೆರವುಗೊಳಿಸಿ ಮರವನ್ನು ಪಕ್ಕಕ್ಕೆ ಹಾಕಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number