CHITRADURGA NEWS | 22 June 2026
ಚಿತ್ರದುರ್ಗ: ಕೇಂದ್ರ ಸರ್ಕಾರವು ನೂತನ ಆದಾಯ ತೆರಿಗೆ ಕಾಯ್ದೆ 2025ನ್ನು 01.04.2026 ರಿಂದ ಅನ್ವಯ ಆಗುವಂತೆ ಜಾರಿಗೆ ತಂದಿರುತ್ತದೆ. ಇದರ ಪ್ರಮುಖ ಬದಲಾವಣೆ ಮತ್ತು ಕೇಂದ್ರ ಬಜೆಟ್ 2026 ರಲ್ಲಿ ಆಗಿರುವ ಆದಾಯ ತೆರಿಗೆ ಬದಲಾವಣೆಗಳ ಬಗ್ಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ
ಚಿತ್ರದುರ್ಗ ಆದಾಯ ತೆರಿಗೆ ಇಲಾಖೆಯಿಂದ ಆಯೋಜಿಸಿರುವ ಈ ಕಾರ್ಯಾಗಾರ ಜೂ.23 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರದ ಮುಖ್ಯ ಅತಿಥಿಗಳಾಗಿ IRS ಅಧಿಕಾರಿ ಆರ್.ರಾಮನಾಥನ್, ಚಿತ್ರದುರ್ಗ ಆದಾಯ ತೆರಿಗೆ ಇಲಾಖೆ ಟ್ಯಾಕ್ಸ್ ಆಫಿಸರ್ ಕುಮಾರಸ್ವಾಮಿ ಆರ್.ಪಿ, ದಾವಣಗೆರೆ ಚಾರ್ಟೆಡ್ ಅಕೌಂಟೆಂಟ್ ಅಸೋಸಿಯೇಷನ್ ಅಧ್ಯಕ್ಷರಾದ ಕಾರ್ತಿಕ್ ಪಿ, ಚಿತ್ರದುರ್ಗದ ಅಧ್ಯಕ್ಷರಾದ ಗೋವಿಂದ ರೆಡ್ಡಿ ಭಾಗವಹಿಸುವರು.
ಇದನ್ನೂ ಓದಿ: ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ | ಜೂನ್ 27 ರಂದು ಪ್ರಶಸ್ತಿ ಪ್ರದಾನ
ದಾವಣಗೆರೆ ಆದಾಯ ತೆರಿಗೆ ಇಲಾಖೆ ಅಧಿಕಾರಿ ಸುಬ್ಬರಾಜು ಕಾರ್ಯಾಗಾರ ನಡೆಸಿಕೊಡಲಿದ್ದಾರೆ.
ಜಿಲ್ಲೆಯ ಲೆಕ್ಕ ಪರಿಶೋಧಕರು, ಆದಾಯ ತೆರಿಗೆ ಸಲಹೆಗಾರರು, ಆಕೌಂಟೆಂಟುಗಳು, ಜಿಲ್ಲೆಯ ಎಲ್ಲ ವರ್ತಕರು, ತೆರಿಗೆ ಪಾವತಿದಾರರು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆದಾಯ ತೆರಿಗೆ ಕುರಿತ ತಮ್ಮ ಯಾವುದೇ ಸಂದೇಹಗಳನ್ನು ಕೇಳಿ ಪರಿಹರಿಸಿಕೊಳ್ಳಬಹುದು ಎಂದು ಆದಾಯ ತೆರಿಗೆ ಇಲಾಖೆ ವಾರ್ಡ್ 1 ಅಧಿಕಾರಿ R.P.ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
