By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ರಂಗೇರಿದ ಎಂಎಲ್ಸಿ ಚುನಾವಣಾ ಕಣ | ಚುನಾವಣಾ ಕಚೇರಿ ತೆರೆದ ವೈ.ಎ.ನಾರಾಯಣಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ರಂಗೇರಿದ ಎಂಎಲ್ಸಿ ಚುನಾವಣಾ ಕಣ | ಚುನಾವಣಾ ಕಚೇರಿ ತೆರೆದ ವೈ.ಎ.ನಾರಾಯಣಸ್ವಾಮಿ

ಮುಖ್ಯ ಸುದ್ದಿ

ರಂಗೇರಿದ ಎಂಎಲ್ಸಿ ಚುನಾವಣಾ ಕಣ | ಚುನಾವಣಾ ಕಚೇರಿ ತೆರೆದ ವೈ.ಎ.ನಾರಾಯಣಸ್ವಾಮಿ

chitradurganews.com
Last updated: 30 January 2024 20:32
chitradurganews.com
1 year ago
Share
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ವೈ.ಎ.ನಾರಾಯಣಸ್ವಾಮಿ ಅವರ ಚುನಾವಣಾ ಕಾರ್ಯಲಯ ಉದ್ಘಾಟಿಸಿದರು.
ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ವೈ.ಎ.ನಾರಾಯಣಸ್ವಾಮಿ ಅವರ ಚುನಾವಣಾ ಕಾರ್ಯಲಯ ಉದ್ಘಾಟಿಸಿದರು.
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 JANUARY 2024

ಚಿತ್ರದುರ್ಗ: ಆಗ್ನೇಯ ವಿಧಾನ ಪರಿಷತ್ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಹಾಲಿ ಪರಿಷತ್ ಸದಸ್ಯ, ಬಿಜೆಪಿಯ ಸಂಭಾವ್ಯ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ನಗರದ ಜೆ.ಸಿ.ಆರ್. ಬಡಾವಣೆಯಲ್ಲಿ ಚುನಾವಣಾ ಕಾರ್ಯಲಯ ಉದ್ಘಾಟನೆ ಮಾಡುವ ಮೂಲಕ ಅಖಾಡಕ್ಕೆ ಸಜ್ಜಾಗಿದ್ದಾರೆ.

ಚಿತ್ರದುರ್ಗದ ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ವೈ.ಎ.ನಾರಾಯಣಸ್ವಾಮಿ ಅವರ ಚುನಾವಣಾ ಕಾರ್ಯಲಯ ಉದ್ಘಾಟಿಸಿ ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ನಾರಾಯಣಸ್ವಾಮಿ ಗಟ್ಟಿ ಧ್ವನಿಯಲ್ಲಿ ಮಾತನಾಡಿದ್ದಾರೆ. ಶಿಕ್ಷಕರ ನಿಜವಾದ ಪ್ರತಿನಿಧಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಮತ್ತೊಂದು ಅವಧಿಗೆ ಆಯ್ಕೆ ಮಾಡಿ ಕಳುಹಿಸಿಕೊಡಿ ಎಂದು ತಿಳಿಸಿದರು.

ಇದನ್ನೂ ಓದಿ: ಜನವರಿ 30 ಅಡಿಕೆ ಧಾರಣೆ

ಇಡೀ ದೇಶದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಪ್ರಧಾನಿ ನರೇಂದ್ರಮೋದಿ ನಾಯಕತ್ವದಲ್ಲಿ ಭಾರತ ಆರ್ಥಿಕ ಸ್ವಾವಲಂಬನೆಯಲ್ಲಿ 5ನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೂರನೆ ಸ್ಥಾನಕ್ಕೆ ಬರುವುದರಲ್ಲಿ ಸಂಶಯವಿಲ್ಲ ಎಂದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 371 ರದ್ದುಪಡಿಸಿ ದಿಟ್ಟ ತೀರ್ಮಾನ ತೆಗೆದುಕೊಂಡಿರುವ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟಿಸಿ 500 ವರ್ಷಗಳ ಭಾರತೀಯರ ಕನಸನ್ನು ಸಾಕಾರಗೊಳಿಸಿದ್ದಾರೆ. ಆರ್ಥಿಕವಾಗಿ ಭಾರತ ಬಲವಾಗಿರುವುದಕ್ಕೆ ವಿಶ್ವನಾಯಕ ಮೋದಿ ಕಾರಣ ಎಂದು ಹೇಳಿದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಮಾತನಾಡಿ, 4ನೇ ಅವಧಿಗೆ ಆಗ್ನೇಯ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದೇನೆ. ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಮತ್ತೊಮ್ಮೆ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಲು ಶಿಕ್ಷಕರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಪ್ರಿಯತಮೆಯ ಕತ್ತು ಕೊಯ್ದು ಹತ್ಯೆಗೆ ಯತ್ನ

ಶಿಕ್ಷಕರ ಕ್ಷೇತ್ರ ಬುದ್ದಿವಂತ ಮತದಾರರ ಚುನಾವಣೆಯಾಗಿದ್ದು, ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವುದಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾಗಿರುವುದರಿಂದ ನಿಮ್ಮೆಲ್ಲರ ಸಹಕಾರ ಮುಖ್ಯ ಎಂದು ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಿಕಾಂತ್, ಬಿಜೆಪಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ತಿಪ್ಪೇಸ್ವಾಮಿ, ನಿವೃತ್ತ ಶಿಕ್ಷಕರಾದ ಜಯಣ್ಣ, ಚಿಕ್ಕನಾಗಪ್ಪ, ನೀಲಕಂಠಾಚಾರ್, ಶಿವಣ್ಣ, ನಾಗೇಂದ್ರಪ್ಪ, ಜ್ಞಾನಮೂರ್ತಿ, ನಾಗಲಿಂಗರೆಡ್ಡಿ ಮತ್ತಿತರರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaElectionsGH.ThippareddyMLCVidhan ParishadY.A.Narayanaswamyಎಂಎಲ್ಸಿಚಿತ್ರದುರ್ಗಚುನಾವಣೆಜಿ.ಎಚ್.ತಿಪ್ಪಾರೆಡ್ಡಿವಿಧಾನ ಪರಿಷತ್‌ವೈ.ಎ.ನಾರಾಯಣಸ್ವಾಮಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಜನವರಿ 30 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Next Article ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ವಸತಿ ಯೋಜನೆಗೆ 129 ಫಲಾನುಭವಿಗಳ ಆಯ್ಕೆ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಅಧ್ಯಕ್ಷತೆಯಲ್ಲಿ ಸಭೆ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up