By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯೋಗ, ಪ್ರಾಣಾಯಾಮ | ಮುರುಘಾ ಮಠದಲ್ಲಿ ನಿರಂತರ ತರಗತಿ ಆರಂಭ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯೋಗ, ಪ್ರಾಣಾಯಾಮ | ಮುರುಘಾ ಮಠದಲ್ಲಿ ನಿರಂತರ ತರಗತಿ ಆರಂಭ 

ಮುಖ್ಯ ಸುದ್ದಿ

ಯೋಗ, ಪ್ರಾಣಾಯಾಮ | ಮುರುಘಾ ಮಠದಲ್ಲಿ ನಿರಂತರ ತರಗತಿ ಆರಂಭ 

News Desk Chitradurga News
Last updated: 22 May 2025 20:45
News Desk Chitradurga News
1 month ago
Share
ಯೋಗ, ಪ್ರಾಣಾಯಾಮ | ಮುರುಘಾ ಮಠದಲ್ಲಿ ನಿರಂತರ ತರಗತಿ ಆರಂಭ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 MAY 2025 

ಚಿತ್ರದುರ್ಗ: ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಬಸವೇಶ್ವರ ಸಭಾಂಗಣದಲ್ಲಿ ಶ್ರೀ ಮುರುಘಾಮಠ ಹಾಗೂ ರಾಷ್ಟ್ರೀಯ ಯೋಗ ಶಿಕ್ಷಣ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಉಚಿತ ಯೋಗ, ಪ್ರಾಣಾಯಾಮ ನಿರಂತರ ತರಗತಿ ಹಮ್ಮಿಕೊಳ್ಳಲಾಗಿದೆ.

Also Read: ಮೆಟ್ರಿಕ್ ನಂತರ ಮತ್ತು ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಈ ವೇಳೆ ಉಚಿತ ಯೋಗ ಪ್ರಾಣಾಯಾಮ ನಿರಂತರ ತರಗತಿ ಉದ್ಘಾಟನಾ ಸಮಾರಂಭದಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಒಮ್ಮೊಮ್ಮೆ ನಾವು ಜೀವನದಲ್ಲಿ ಯಾವುದನ್ನು ಅಮುಖ್ಯ ಎಂದು ಪರಿಗಣಿಸುತ್ತೇವೆಯೋ ಅವು ಒಂದು ಕಾಲಕ್ಕೆ ಮುಖ್ಯವಾಗುವುದು ಶತಸಿದ್ಧ. ಅದರಲ್ಲಿ ಆರೋಗ್ಯದ ಬಗೆಗಿನ ಕಾಳಜಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ನಿತ್ಯದ ಜೀವನ ಕ್ರಮದಲ್ಲಿ ಒಂದು ಗಂಟೆಯಾದರೂ ನಮ್ಮ ದೇಹಾರೋಗ್ಯದ ಕಡೆಗೆ ಗಮನಹರಿಸಿದರೆ ಒಂದಷ್ಟು ಸುಸ್ಥಿತಿಯಲ್ಲಿರಿಸಿಕೊಳ್ಳಲು ಸಾಧ್ಯವಿದೆ. ನಿರಂತರ ಯೋಗ ಅದು ಬದ್ಧತೆಯಿಂದ ಕೂಡಿರಬೇಕು. ಈಗಿನ ಪರಿಸ್ಥಿತಿ ನೋಡಿದರೆ ಪ್ರಪಂಚದ ಮುಂದಿನ ಜಮಾನ ಯೋಗದ ಜಗತ್ತಾಗಿ ಪರಿಣಮಿಸುವ ಮೂಲಕ ಎಲ್ಲರೂ ಯೋಗದ ಕಡೆಗೆ ಮುಖ ಮಾಡುವಂತಾದರೆ ಅಚ್ಚರಿಪಡುವಂತಿಲ್ಲ.

ಆರೋಗ್ಯ ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ ಸಮಾಜದ ಸ್ವಾಸ್ತ್ಯವನ್ನು ಕಾಪಿಟ್ಟುಕೊಳ್ಳಬೇಕಿದೆ. ಆರೋಗ್ಯ ಸುಧಾರಣೆಯ ಮೂಲಕ ಆರೋಗ್ಯವಂತ ಸಮಾಜಕ್ಕೆ ನಾವು ಸಹಕರಿಸಬೇಕಾಗಿದೆ ಎಂದರು.

Also Read: ರೈತರ ಮಕ್ಕಳಿಗೆ ಉಚಿತ 10 ತಿಂಗಳು ತೋಟಗಾರಿಕೆ ತರಬೇತಿ | ಅರ್ಜಿ ಆಹ್ವಾನ

ಶ್ರೀಮಠದ ಮೂಲಕ ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆಯವರು ಉಚಿತವಾಗಿ ಯೋಗ ನಡೆಸಿಕೊಡುವ ಈ ಕ್ರಮವನ್ನು ಎಲ್ಲರೂ ಪಡೆಯಿರಿ.

ಜಿಲ್ಲಾ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಟಿ. ಶಿವಕುಮಾರ್ ಮಾತನಾಡಿ, ನೂರಾರು ಸಮಸ್ಯೆಗಳಿದ್ದರೆ ಅದಕ್ಕೆ ನಾವು ಪರಿಹಾರ ಕಂಡುಕೊಳ್ಳಬಹುದು. ಆದರೆ ದೇಹಕ್ಕೆ ಒಂದೇ ಒಂದು ಜಾಡ್ಯ ಬಂತೆ0ದರೆ ಅದರ ಕಡೆಗೆ ನಮ್ಮ ಚಿಂತೆ ಇರುತ್ತದೆ. ದೇಹ ಗಟ್ಟಿಯಾಗಿದ್ದರೆ ಮಾತ್ರ ಏನಾದರೂ ಸಾಧನೆ ಸಾಧ್ಯ. ಸದೃಢ ದೇಹ ಸಂಪಾದಿಸಲು ಯೋಗದಿಂದ ಸಾಧ್ಯವಿದೆ.

ಶಾರೀರಿಕ ಸಮತೋಲನ ಜೊತೆಗೆ ಮಾನಸಿಕ ಒತ್ತಡಕ್ಕೂ ಇದು ಸಹಕಾರಿಯಾಗುವ ಹಾಗೆಯೇ ಸರಿಯಾದ ಆಹಾರ, ನಿದ್ರೆ, ಇತ್ಯಾದಿ ಉಪಕ್ರಮಗಳಿಂದ ಉತ್ತಮವಾದ ಆರೋಗ್ಯ ಸಂಪಾದಿಸಲು ಸಾಧ್ಯವಿದೆ ಎಂದು ಹೇಳಿದರು.

Also Read: ಶಾಸಕ‌ ಕೆ.ಸಿ.ವೀರೇಂದ್ರ(ಪಪ್ಪಿ) ನಿರ್ದೋಷಿ | ಚಿತ್ರದುರ್ಗ ನ್ಯಾಯಾಲಯದಿಂದ ತೀರ್ಪು

ಜಿಲ್ಲೆಯ ಯೋಗಾಚಾರ್ಯ ಎಂದೇ ಖ್ಯಾತರಾಗಿರುವ ಎಲ್.ಎಸ್. ಚಿನ್ಮಯಾನಂದ ಮಾತನಾಡಿ, ಆನಂದ ಅನ್ನುವುದು ಯಾವುದೇ ಭೌತಿಕ ವಸ್ತುಗಳಲ್ಲಿಲ್ಲ ಬದಲಿಗೆ ಆರೋಗ್ಯದಲ್ಲಿದೆ. ಅದನ್ನು ಸಂಪಾದಿಸಿದರೆ ಎಲ್ಲವನ್ನು ಸಂಪಾದಿಸಬಹುದು. ಯಾರ ಬಲವಂತಕ್ಕೆ ಯೋಗ ಮಾಡದೆ ವೈಯಕ್ತಿಕ ಹಿತಾಸಕ್ತಿಗೆ ಮಾಡಿ ಎಂದು ಸಲಹೆ ನೀಡಿದರು

ಕಡ್ಲೆಗುದ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ಎನ್.ಮಹೇಶ್, ಅಮೃತ ಆಯುರ್ವೇದ ಮೆಡಿಕಲ್ ಕಾಲೇಜಿನ ಉಪನ್ಯಾಸಕ ಭರಮಸಾಗರ ತಿಪ್ಪೇಸ್ವಾಮಿ ಎಂ. ಮಾತನಾಡಿದರು.

ಈ ಸಂದರ್ಭದಲ್ಲಿ ಉಚಿತ ಯೋಗ ತರಗತಿ ನಡೆಸಿಕೊಡುವ ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬಸವರಾಜ್ ಎಲ್.ಎಸ್. ಉಪಸ್ಥಿತರಿದ್ದರು.

Also Read: RCB ಗೆಲುವಿಗಾಗಿ ಅಭಿಮಾನಿಯಿಂದ ಸೈಕಲ್ ಯಾತ್ರೆ 

ನಾಳೆಯಿಂದ ಪ್ರತಿ ದಿನ ಬೆಳಗ್ಗೆ 5.45 ಗಂಟೆಯಿಂದ ಶ್ರೀ ಮುರುಘಾಮಠದ ಬಸವೇಶ್ವರ ಸಭಾಂಗಣದಲ್ಲಿ ಯೋಗ ತರಗತಿಗಳು ಆರಂಭವಾಗಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesclassKannada Latest NewsKannada NewsMurugan MathPranayamaYogaಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತರಗತಿಪ್ರಾಣಾಯಾಮಮುರುಘಾ ಮಠಯೋಗ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ 23 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣಗಳು ಮುಂದೂಡಿಕೆ, ಆರೋಗ್ಯದಲ್ಲಿ ಎಚ್ಚರ
Next Article ಈರುಳ್ಳಿ ಮೊಳಕೆ ತಿನ್ನುವುದು ಸುರಕ್ಷಿತವೇ?
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ಆರೋಗ್ಯ ಸಮಸ್ಯೆ, ಹೊಸ ವಾಹನ ಖರೀದಿ
Dina Bhavishya
ಯೋಗಶಾಸ್ತ್ರದ ನಿರಂತರ ಅನುಷ್ಠಾನದಿಂದ ಜೀವನೋತ್ಸಾಹ | ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಮುಖ್ಯ ಸುದ್ದಿ
ಮಾಹಿತಿ ಹಕ್ಕು ಕಾಯ್ದೆ | ಶುಲ್ಕ ಪರಿಷ್ಕರಣೆಗೆ ಪ್ರಸ್ತಾವನೆ | ಆಯುಕ್ತ ರುದ್ರಣ್ಣ ಹರ್ತಿಕೋಟೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಜೂನ್ 30ರವರೆಗೆ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up