By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯುವಜನರು ತಪ್ಪದೇ ಮತ ಚಲಾಯಿಸಿ | ಜಿ.ಎನ್.ಮಲ್ಲಿಕಾರ್ಜುನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯುವಜನರು ತಪ್ಪದೇ ಮತ ಚಲಾಯಿಸಿ | ಜಿ.ಎನ್.ಮಲ್ಲಿಕಾರ್ಜುನ

ಲೋಕಸಮರ 2024

ಯುವಜನರು ತಪ್ಪದೇ ಮತ ಚಲಾಯಿಸಿ | ಜಿ.ಎನ್.ಮಲ್ಲಿಕಾರ್ಜುನ

News Desk Chitradurga News
Last updated: 14 April 2024 21:02
News Desk Chitradurga News
1 year ago
Share
ಮತದಾನ ಮತ್ತು ಮತದಾರರ ಜಾಗೃತಿ ಕವಿಗೋಷ್ಠಿ ಕಾರ್ಯಕ್ರಮ
ಮತದಾನ ಮತ್ತು ಮತದಾರರ ಜಾಗೃತಿ ಕವಿಗೋಷ್ಠಿ ಕಾರ್ಯಕ್ರಮ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 APRIL 2024

ಚಿತ್ರದುರ್ಗ: ಯುವಜನರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಆರ್ಥಿಕ ಚಿಂತಕ ಜಿ. ಎಸ್. ಮಲ್ಲಿಕಾರ್ಜುನ ಹೇಳಿದರು.

ನಗರದ ರೋಟರಿ ಬಾಲಭವನದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ, ಕನ್ನಡ ಸಾಹಿತ್ಯ ಪರಿಷತ್, ರೋಟರಿ ಕ್ಲಬ್ ವತಿಯಿಂದ  ಹಮ್ಮಿಕೊಂಡಿದ್ದ ಮತದಾನ ಮತ್ತು ಮತದಾರರ ಜಾಗೃತಿ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ.

ಇದನ್ನೂ ಓದಿ: ಅಂಬೇಡ್ಕರರನ್ನೂ ಪ್ರಧಾನಿ ಮಾಡಬಹುದಿತ್ತು | ಎಂಎಲ್‍ಸಿ ರವಿಕುಮಾರ್

ಯುವಜನರನ್ನು ಮತದಾನದ ಕಡೆಗೆ ಸೆಳೆಯುವ ಅಗತ್ಯವಿದೆ, ದೇಶದ ಜನಸಂಖ್ಯೆಯಲ್ಲಿ ಶೇ.40ಕ್ಕೂ ಹೆಚ್ಚು ಯುವ ಜನರಿದ್ದಾರೆ, ಆದರೆ ಯುವಕರು ಮತದಾನ ಮಾಡುವ ಸಂಖ್ಯೆ ಕಡಿಮೆಯಾಗುತ್ತಿರುವುದು ಕಳವಳಕಾರಿಯಾದ ಸಂಗತಿಯಾಗಿದೆ.

ಪ್ರಜಾಪ್ರಭುತ್ವವನ್ನು ಮುನ್ನಡೆಸುವ ಜವಾಬ್ದಾರಿ ಹೊಂದಿರುವ ಯುವಜನರು ಚುನಾವಣೆ ಮತ್ತು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಆಸಕ್ತಿ ತೋರಬೇಕು, ಯುವಜನರು ಹಿಂಜರಿಯುವುದಕ್ಕೆ ಕಾರಣಗಳನ್ನು ತಿಳಿದು, ಅವರುಗಳಿಗೆ ಪ್ರೇರೇಪಣೆಯನ್ನು ನೀಡುವುದು ಅಗತ್ಯ. ಕವಿಗಳಿಗೆ ಸಾಮಾಜಿಕ ಹೊಣೆಗಾರಿಕೆಯಿದೆ. ಕಾವ್ಯದ ಮೂಲಕ ಜನರಿಗೆ ಜಾಗೃತಿ ಮೂಡಿಸುವುದು ಸಾಧ್ಯವಿದೆ. ಜಾಗೃತಿ ಕಾರ್ಯಕ್ರಮಗಳಿಗೆ ಸ್ಪಂದನೆ ಕಡಿಮೆ ಆದರೆ ಅಮಲಿನ ಕಾರ್ಯಕ್ರಮಗಳಿಗೆ ಹೆಚ್ಚಿನ ಸ್ಪಂದನೆ ದೊರೆಯುತ್ತದೆ, ಹೀಗಾಗಿ ಜಾಗೃತಿಯನ್ನು ರುಚಿಕಟ್ಟಾಗಿ ನೀಡಬೇಕಾದ ಅನಿವಾರ್ಯತೆ ಇದೆ ಎಂದರು.

ಇದನ್ನೂ ಓದಿ: ಕೋಟೆನಾಡಿನಲ್ಲಿ ರಾಜಾಹುಲಿ ಮತ ಶಿಖಾರಿ | ಒಂದೇ ದಿನ ಮೂರು ಸಮಾವೇಶದಲ್ಲಿ ಭಾಗವಹಿಸಿದ ಬಿಎಸ್‍ವೈ

ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಪಿ.ಎಸ್.ಅನಂತರಾಜು ಮಾತನಾಡಿ, ಪ್ರಜಾಪ್ರಭುತ್ವಕ್ಕೆ ಸಂವಿಧಾನ ತಳಹದಿಯಾಗಿದೆ. ಮತದಾನ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. 18 ತುಂಬಿದ ಎಲ್ಲ ಜನರು ಕಡ್ಡಾಯವಾಗಿ ಮತ ಚಲಾಯಿಸಬೇಕು. ವೃದ್ಧರಿಗೆ, ವಿಕಲಚೇತನರಿಗೆ ಮತದಾನಕ್ಕೆ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ. ಪ್ರಜಾಪ್ರಭುತ್ವಕ್ಕೆ ತಳಹದಿಯಾಗಿರುವ ಮತದಾನ ಕಾರ್ಯದಲ್ಲಿ ಎಲ್ಲರೂ ನಿರ್ಭೀತಿಯಿಂದ ಮತ ಚಲಾಯಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಆಭ್ಯರ್ಥಿಗೆ ಬೆಂಬಲ ಘೋಷಿಸಿದ ಗೂಳಿಹಟ್ಟಿ ಶೇಖರ್

ಪ್ರೊ.ಜಿ.ಪರಮೇಶ್ವರಪ್ಪ ಮಾತನಾಡಿ, ಸ್ವಂತ ಮನೆಯೂ ಇಲ್ಲದ, ವಾಹನವೂ ಇಲ್ಲದ ಆಟೋದಲ್ಲಿ ಮತ್ತು ಸೈಕಲ್ ನಲ್ಲಿ ಓಡಾಡುವ ಕೇಂದ್ರ ಸರಕಾರದ ಸಚಿವರನ್ನು ನೋಡಿದ್ದೇವೆ. ಇಂಥಹ ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಮಾದರಿಯಾಗಿರಬೇಕು. ಕೋಟಿಗಟ್ಟಲೆ ಆಸ್ತಿ ಹೊಂದಿರುವವರು ಮಾತ್ರ ನಾಮಪತ್ರ ಸಲ್ಲಿಸುತ್ತಿರುವುದು ನೋಡುತ್ತಿದ್ದೇವೆ. ಯುವಜನರು ಭ್ರಷ್ಟತೆಯನ್ನು ಪ್ರತಿರೋಧಿಸುವ ಹಾಗೂ ಪ್ರಶ್ನಿಸುವ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಆದ್ಯತೆ | ಗೋವಿಂದ ಕಾರಜೋಳ

ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಇ.ಲಕ್ಷ್ಮೀಕಾಂತ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ಸಾಹಿತಿ ಟೀಕಾ ಸುರೇಶ್ ಗುಪ್ತ, ಸಂಚಾಲಕ ಶ್ರೀನಿವಾಸ್ ಮಳಲಿ, ಕೋಶಾಧ್ಯಕ್ಷ ಸಿ.ಲೋಕೇಶ, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ ಭಾಗವಹಿಸಿದ್ದರು

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaCompulsoryG. S. MallikarjunaVotingYoung peopleಕಡ್ಡಾಯಚಿತ್ರದುರ್ಗಜಿ. ಎಸ್. ಮಲ್ಲಿಕಾರ್ಜುನಮತದಾನಯುವಜನರು
Share This Article
Facebook Email Print
Previous Article ಅರುಣ್ ಜೋಳದಕೂಡ್ಲಿಗಿ ಅಂಬೇಡ್ಕರ್ ಬಗ್ಗೆ ಲೇಖಕ ಅರುಣ್ ಜೋಳದಕೂಡ್ಲಿಗಿ ಮಾತುಗಳು…
Next Article ಹಿರಿಯೂರಿನಲ್ಲಿ ಗೋವಿಂದ ಎಂ.ಕಾರಜೋಳ ರೋಡ್‌ ಶೋ | ಕಾರ್ಯಕರ್ತರಲ್ಲಿ ಹೆಚ್ಚಿದ ಉತ್ಸಾಹ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up