Connect with us

    ಗ್ರಂಥಾಲಯ, ಹಾಸ್ಟೆಲ್ ಗಳಿಗೆ ಜಿ.ಪಂ ಸಿಇಒ ಧಿಡೀರ್ ಭೇಟಿ | ಪರಿಶೀಲನೆ

    ಮುಖ್ಯ ಸುದ್ದಿ

    ಗ್ರಂಥಾಲಯ, ಹಾಸ್ಟೆಲ್ ಗಳಿಗೆ ಜಿ.ಪಂ ಸಿಇಒ ಧಿಡೀರ್ ಭೇಟಿ | ಪರಿಶೀಲನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 15 FEBRUARY 2025

    ಚಿತ್ರದುರ್ಗ: ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರದ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಶನಿವಾರ ಧಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

    Also Read: ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ 52149 ರೂ.

    ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು ಎಂದು ತಿಳಿಸಿ, ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಂಡರು.

    ಕೆಎಂಇಆರ್‌ಸಿ ಅಡಿಯಲ್ಲಿ ಜಿಲ್ಲಾ ಮತ್ತು ನಗರ ಗ್ರಂಥಾಲಯಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನದಲ್ಲಿ ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ನಗರ ಕೇಂದ್ರ ಮುಖ್ಯ ಗ್ರಂಥಾಧಿಕಾರಿ ಕೊಳ್ಳಿ ಬಸವರಾಜ್ ಮಾಹಿತಿ ನೀಡಿದರು.

    ಗ್ರಂಥಾಲಯದ ಅವರಣದೊಳಗೆ ಕಾಮಗಾರಿಗಳ ಅನುಷ್ಠಾನ ಮಾಡುವ ಸ್ಥಳ ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಅವರು, ಬಿಡುಗಡೆಗೊಂಡಿರುವ ಅನುದಾನವನ್ನು ಕೆಎಂಇಆರ್‌ಸಿ ನಿಯಮಾನುಸಾರ ಖರ್ಚು ಮಾಡಿ, ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಗ್ರಂಥಾಲಯಗಳನ್ನು ನಿರ್ಮಾಣ ಮಾಡಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗೆ ಸೂಚಿಸಿದರು.

    Also Read: ಬೆಂಬಲ ಬೆಲೆಯಲ್ಲಿ ತೋಗರಿ, ಕಡಲೇಕಾಳು ಖರೀದಿ | ಎಷ್ಟಿದೆ ದರ? ಯಾವಾಗ ಪ್ರಾರಂಭ? ಸಂಪೂರ್ಣ ಮಾಹಿತಿ ಇಲ್ಲಿದೆ…

    ನಂತರ ಶೌಚಾಲಯಕ್ಕೆ ಭೇಟಿ ನೀಡಿ, ವಿಶೇಷ ಚೇತನರು ಶೌಚಾಲಯ ಬಳಸಲು ಮತ್ತು ಹೋಗಿ ಬರಲು ಜಾಗವನ್ನು ಮಾಡಿಕೊಡಿ ಎಂದು ಸಲಹೆ ನೀಡಿದರು. ಅದೇ ರೀತಿಯಾಗಿ ಬ್ರೆöÊಲ್ ಪುಸ್ತಕಗಳು ಮತ್ತು ಉಪಕರಣಗಳಗಳ ಬಗ್ಗೆ ಮಾಹಿತಿ ಪಡೆದರು.

    ವಿದ್ಯಾರ್ಥಿ ನಿಲಯ ಪರಿಶೀಲನೆ: 

    ನಗರದ ಮೆದೇಹಳ್ಳಿ, ತಮಟಕಲ್ಲು ರಸ್ತೆಯಲ್ಲಿರುವ ಡಿ. ದೇವರಾಜು ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿ.ಪಂ ಸಿಇಒ ಭೇಟಿ ನೀಡಿ ಪರಿಶೀಲಿಸಿದರು.

    ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನಿಲಯ ಪಾಲಕರೊಂದಿಗೆ ಕುಂದು ಕೊರತೆ ಆಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ನಿಲಯಕ್ಕೆ ಉತ್ತಮವಾದ ಗ್ರಂಥಾಲಯಬೇಕೆಂದು ಮನವಿ ಮಾಡಿಕೊಂಡರು. ಅಲ್ಲೇ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಭೋಜನ ಸವಿದರು.

    Also Read: ಚಿತ್ರದುರ್ಗದ ದಶಕಗಳ ಸಮಸ್ಯೆಗೆ ಕೊನೆಗೂ ಇತಿಶ್ರೀ | ದಾವಣಗೆರೆ ರಸ್ತೆಯ ರೈಲ್ವೇ ಗೇಟ್ ಬಳಿ ಫ್ಲೈಓವರ್ | ಸಂಸದ ಗೋವಿಂದ ಕಾರಜೋಳ

    ನಂತರ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಮಾಹಿತಿ ಪಡೆದರು. ಅಲ್ಲಿನ ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿನಿಯರೊಂದಿಗೆ ಕುಂದು- ಕೊರತೆಗಳ ಮಾಹಿತಿ ಪಡೆದರು.

    ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುಬ್ರನಾಯಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್ ಸೇರಿದಂತೆ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹಾಗೂ ನಿಲಯ ಪಾಲಕರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top