By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಜಿಪಂ‌‌ ಸಿಇಓ‌‌ ಸೋಮಶೇಖರ್ ಗ್ರಾಮ ಪಂಚಾಯತಿ ಭೇಟಿ | ಕಡತ ಪರಿಶೀಲನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಜಿಪಂ‌‌ ಸಿಇಓ‌‌ ಸೋಮಶೇಖರ್ ಗ್ರಾಮ ಪಂಚಾಯತಿ ಭೇಟಿ | ಕಡತ ಪರಿಶೀಲನೆ

ಮುಖ್ಯ ಸುದ್ದಿ

ಜಿಪಂ‌‌ ಸಿಇಓ‌‌ ಸೋಮಶೇಖರ್ ಗ್ರಾಮ ಪಂಚಾಯತಿ ಭೇಟಿ | ಕಡತ ಪರಿಶೀಲನೆ

News Desk Chitradurga News
Last updated: 30 January 2025 19:31
News Desk Chitradurga News
5 months ago
Share
ಜಿಪಂ‌‌ ಸಿಇಓ‌‌ ಸೋಮಶೇಖರ್ ಗ್ರಾಮ ಪಂಚಾಯತಿಗೆ ಭೇಟಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 30 JANUARY 2025

ಚಿತ್ರದುರ್ಗ: ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Also Read: ಮೈಕ್ರೋ ಫೈನಾನ್ಸ್ ಗಳಿಗೆ ಐಜಿಪಿ ರವಿಕಾಂತೇಗೌಡ ಎಚ್ಚರಿಕೆ | ಸಾಲ ವಸೂಲಿಗೆ ಬಲವಂತ ಮಾಡಿದ್ರೆ ಕ್ರಮ

ಕಾಲ್ಗೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಡತ ಪರಿಶೀಲಿಸಿದರು. ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಾದ್ ನಗರದ ಚಾಲನೆಯಲ್ಲಿರುವ ಬೂದು ನಿರ್ವಹಣೆ ಕಾಮಗಾರಿ ವೀಕ್ಷಣೆ ಮಾಡಿ, ನರೇಗಾ ಯೋಜನೆಯ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಿ, ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಲು ಸೂಚಿಸಿದರು.

ಇಸ್ಸಾಮುದ್ರ ಗ್ರಾಮ ಪಂಚಾಯತಿಗೆ ಧಿಡೀರ್ ಭೇಟಿ ನೀಡಿ, ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ವಸೂಲಾದ ಬಗ್ಗೆ ಮಾಹಿತಿ ಪಡೆದರು. ನಂತರ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಿ ಎಲ್ಲಾ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟದೊಂದಿಗೆ ಯಾವುದೇ ಸಮಸ್ಯೆಗಳು ಬಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಿಬ್ಬಂದಿಗಳಿಗೆ ಸೂಚಿಸಿದರು.

ಅದೇ ರೀತಿಯಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಡತ ಪರಿಶೀಲಿಸಿ, ಎಲ್ಲಾ ಕಡತ ನರೇಗಾ ಮಾರ್ಗಸೂಚಿಯಂತೆ ಮತ್ತು ಚೆಕ್‍ಲಿಸ್ಟ್ ಪ್ರಕಾರ ನಿರ್ವಹಿಸಲು ಸೂಚಿಸಿದರು. ನಂತರ ಅದೇ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಆರೈಕೆ,ಆರೋಗ್ಯ ಗುಣಮಟ್ಟದ ಆಹಾರದ ಬಗ್ಗೆ ಪರಿಶೀಲಿಸಿದರು. ಮಕ್ಕಳ ಹಾಜರಾತಿ ಸರಿಯಾಗಿ ನಿರ್ವಹಿಸುವಂತೆ ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದರು.

Also Read: ಬ್ಯಾಂಕ್ ಗಳಲ್ಲಿ ಕನ್ನಡ ನಿರ್ಲಕ್ಷ್ಯ | ಕಡ್ಡಾಯ ಬಳಕೆಗೆ ಕರುನಾಡ ವಿಜಯಸೇನೆ ಒತ್ತಾಯ

ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಮಕ್ಕಳ ವಿದ್ಯಾಭ್ಯಾಸ, ಫಲಿತಾಂಶಗಳ ಬಗ್ಗೆ ಮಾಹಿತಿ ಪಡೆದರು. ಶಿಕ್ಷಕರೊಂದಿಗೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಅಡುಗೆ ಕೋಣೆಗೆ ಭೇಟಿ ನೀಡಿ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಬಿಸಿಯೂಟ ಸವಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಜಿಲ್ಲಾ ಪಂಚಾಯಿತಿಯ ನರೇಗಾ ಯೋಜನೆಯ ಎಡಿಪಿಸಿ ಮೋಹನ್ ಕುಮಾರ್, ಕಾಲ್ಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CEO SomashekharChitradurgaChitradurga newsChitradurga UpdatesGram PanchayatKannada Latest NewsKannada NewsMahatma Gandhi NaregaZilla Panchayatಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗ್ರಾಮ ಪಂಚಾಯತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯಿತಿಮಹಾತ್ಮಾ ಗಾಂಧಿ ನರೇಗಾ ಯೋಜನೆಸಿಇಓ ಸೋಮಶೇಖರ್
Share This Article
Facebook Email Print
Previous Article ಬ್ಯಾಂಕ್ ಗಳಲ್ಲಿ ಕನ್ನಡ ನಿರ್ಲಕ್ಷ್ಯ | ಕಡ್ಡಾಯ ಬಳಕೆಗೆ ಕರುನಾಡ ವಿಜಯಸೇನೆ ಒತ್ತಾಯ
Next Article Jnana Bharathi School ಜ್ಞಾನಭಾರತಿ ವಿದ್ಯಾಮಂದಿರದ ಸುವರ್ಣ ಮಹೋತ್ಸವ | ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up